AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನುಸಿ, ಜಿರಳೆಗಳಿಂದ ತುಂಬಿದ್ದ ಹಾಸ್ಟೆಲ್ ಸ್ಟೋರ್ ರೂಮ್​​ ಕಂಡು ಬೆಚ್ಚಿಬಿದ್ದ ಶಾಸಕ ಅನಿಲ್ ಬೆನಕೆ!

ಪರಿಸ್ಥಿಯನ್ನು ಅವಲೋಕಿಸಲು ಸ್ವತಃ ಶಾಸಕರೇ ಹಾಸ್ಟೆಲ್ ಗೆ ಭೇಟಿ ನೀಡಿದ್ದರು. ಡಾ. ಅಂಬೇಡ್ಕರ್​ ಹಾಸ್ಟೆಲ್​ನಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಹಾಸ್ಟೆಲ್​ ಸ್ಟೋರ್​ ರೂಮ್​ನಲ್ಲಿ ನುಸಿ, ಜಿರಳೆಗಳು ತುಂಬಿರುವುದನ್ನು ಕಂಡು ಶಾಸಕ ಅನಿಲ್ ಬೆನಕೆ ಬೆಚ್ಚಿಬಿದ್ದಿದ್ದಾರೆ. ತಕ್ಷಣ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಶಾಸಕ ಅನಿಲ್​ ತರಾಟೆಗೆ ತೆಗೆದುಕೊಂಡಿದ್ದಾರೆ.

ನುಸಿ, ಜಿರಳೆಗಳಿಂದ ತುಂಬಿದ್ದ ಹಾಸ್ಟೆಲ್ ಸ್ಟೋರ್ ರೂಮ್​​ ಕಂಡು ಬೆಚ್ಚಿಬಿದ್ದ ಶಾಸಕ ಅನಿಲ್ ಬೆನಕೆ!
ನುಸಿ, ಜಿರಳೆಗಳಿಂದ ತುಂಬಿದ್ದ ಹಾಸ್ಟೆಲ್ ಸ್ಟೋರ್ ರೂಮ್​​ ಕಂಡು ಬೆಚ್ಚಿಬಿದ್ದ ಶಾಸಕ ಅನಿಲ್ ಬೆನಕೆ!
TV9 Web
| Updated By: ಸಾಧು ಶ್ರೀನಾಥ್​|

Updated on: Aug 31, 2022 | 5:57 PM

Share

ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಬೆಳಗಾವಿಯ ಸಂಗಮೇಶ್ವರ ನಗರದಲ್ಲಿರುವ ಡಾ. ಅಂಬೇಡ್ಕರ್​ ಹಾಸ್ಟೆಲ್ ಗೆ​ ಇಂದು ಭೇಟಿ ನೀಡಿದ್ದರು. ಕಾರಣ ಡಾ. ಬಿ.ಆರ್. ಅಂಬೇಡ್ಕರ್‌ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ವಿದ್ಯಾರ್ಥಿಗಳು ದಿಢೀರ್ ಧರಣಿ, ಪ್ರತಿಭಟನೆ ನಡೆಸಿದ್ದರು. ನುಸಿ ಮಿಶ್ರಿತ ಇಡ್ಲಿ, ಸಾಂಬಾರ, ಚಪಾತಿ, ಪಲ್ಯದ ಪಾತ್ರೆಗಳನ್ನಿಟ್ಟು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಆಹಾರ ಬೇಡ ವಿಷ ಬೇಕು ಎಂದು ಘೋಷಣೆ ಕೂಗಿ ತಮ್ ಪಡಿಪಾಟಲು, ಆಕ್ರೋಶ ಹೊರಹಾಕಿದರು.

ಪರಿಸ್ಥಿಯನ್ನು ಅವಲೋಕಿಸಲು ಸ್ವತಃ ಶಾಸಕರೇ ಹಾಸ್ಟೆಲ್ ಗೆ ಭೇಟಿ ನೀಡಿದ್ದರು. ಡಾ. ಅಂಬೇಡ್ಕರ್​ ಹಾಸ್ಟೆಲ್​ನಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಹಾಸ್ಟೆಲ್​ ಸ್ಟೋರ್​ ರೂಮ್​ನಲ್ಲಿ ನುಸಿ, ಜಿರಳೆಗಳು ತುಂಬಿರುವುದನ್ನು ಕಂಡು ಶಾಸಕ ಅನಿಲ್ ಬೆನಕೆ ಬೆಚ್ಚಿಬಿದ್ದಿದ್ದಾರೆ. ತಕ್ಷಣ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಶಾಸಕ ಅನಿಲ್​ ತರಾಟೆಗೆ ತೆಗೆದುಕೊಂಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ, ವಾರ್ಡನ್​ಗಳಾದ ಶ್ರೀಧರ ದೊಡ್ಡಮನಿ, ಕೋಲಕಾರ್​ ಅವರನ್ನು ಶಾಸಕ ಅನಿಲ್ ಬೆನಕೆ ವಿಚಾರಿಸಿಕೊಂಡರು. ಈ ವೇಳೆ ಹಾಸ್ಟೆಲ್​ಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸಹ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಶಾಸಕ ಅನಿಲ್ ಬೆನಕೆ ಗುಣಮಟ್ಟದ ಆಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!