AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನುಸಿ, ಜಿರಳೆಗಳಿಂದ ತುಂಬಿದ್ದ ಹಾಸ್ಟೆಲ್ ಸ್ಟೋರ್ ರೂಮ್​​ ಕಂಡು ಬೆಚ್ಚಿಬಿದ್ದ ಶಾಸಕ ಅನಿಲ್ ಬೆನಕೆ!

ಪರಿಸ್ಥಿಯನ್ನು ಅವಲೋಕಿಸಲು ಸ್ವತಃ ಶಾಸಕರೇ ಹಾಸ್ಟೆಲ್ ಗೆ ಭೇಟಿ ನೀಡಿದ್ದರು. ಡಾ. ಅಂಬೇಡ್ಕರ್​ ಹಾಸ್ಟೆಲ್​ನಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಹಾಸ್ಟೆಲ್​ ಸ್ಟೋರ್​ ರೂಮ್​ನಲ್ಲಿ ನುಸಿ, ಜಿರಳೆಗಳು ತುಂಬಿರುವುದನ್ನು ಕಂಡು ಶಾಸಕ ಅನಿಲ್ ಬೆನಕೆ ಬೆಚ್ಚಿಬಿದ್ದಿದ್ದಾರೆ. ತಕ್ಷಣ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಶಾಸಕ ಅನಿಲ್​ ತರಾಟೆಗೆ ತೆಗೆದುಕೊಂಡಿದ್ದಾರೆ.

ನುಸಿ, ಜಿರಳೆಗಳಿಂದ ತುಂಬಿದ್ದ ಹಾಸ್ಟೆಲ್ ಸ್ಟೋರ್ ರೂಮ್​​ ಕಂಡು ಬೆಚ್ಚಿಬಿದ್ದ ಶಾಸಕ ಅನಿಲ್ ಬೆನಕೆ!
ನುಸಿ, ಜಿರಳೆಗಳಿಂದ ತುಂಬಿದ್ದ ಹಾಸ್ಟೆಲ್ ಸ್ಟೋರ್ ರೂಮ್​​ ಕಂಡು ಬೆಚ್ಚಿಬಿದ್ದ ಶಾಸಕ ಅನಿಲ್ ಬೆನಕೆ!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 31, 2022 | 5:57 PM

ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಬೆಳಗಾವಿಯ ಸಂಗಮೇಶ್ವರ ನಗರದಲ್ಲಿರುವ ಡಾ. ಅಂಬೇಡ್ಕರ್​ ಹಾಸ್ಟೆಲ್ ಗೆ​ ಇಂದು ಭೇಟಿ ನೀಡಿದ್ದರು. ಕಾರಣ ಡಾ. ಬಿ.ಆರ್. ಅಂಬೇಡ್ಕರ್‌ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ವಿದ್ಯಾರ್ಥಿಗಳು ದಿಢೀರ್ ಧರಣಿ, ಪ್ರತಿಭಟನೆ ನಡೆಸಿದ್ದರು. ನುಸಿ ಮಿಶ್ರಿತ ಇಡ್ಲಿ, ಸಾಂಬಾರ, ಚಪಾತಿ, ಪಲ್ಯದ ಪಾತ್ರೆಗಳನ್ನಿಟ್ಟು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಆಹಾರ ಬೇಡ ವಿಷ ಬೇಕು ಎಂದು ಘೋಷಣೆ ಕೂಗಿ ತಮ್ ಪಡಿಪಾಟಲು, ಆಕ್ರೋಶ ಹೊರಹಾಕಿದರು.

ಪರಿಸ್ಥಿಯನ್ನು ಅವಲೋಕಿಸಲು ಸ್ವತಃ ಶಾಸಕರೇ ಹಾಸ್ಟೆಲ್ ಗೆ ಭೇಟಿ ನೀಡಿದ್ದರು. ಡಾ. ಅಂಬೇಡ್ಕರ್​ ಹಾಸ್ಟೆಲ್​ನಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಹಾಸ್ಟೆಲ್​ ಸ್ಟೋರ್​ ರೂಮ್​ನಲ್ಲಿ ನುಸಿ, ಜಿರಳೆಗಳು ತುಂಬಿರುವುದನ್ನು ಕಂಡು ಶಾಸಕ ಅನಿಲ್ ಬೆನಕೆ ಬೆಚ್ಚಿಬಿದ್ದಿದ್ದಾರೆ. ತಕ್ಷಣ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಶಾಸಕ ಅನಿಲ್​ ತರಾಟೆಗೆ ತೆಗೆದುಕೊಂಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ, ವಾರ್ಡನ್​ಗಳಾದ ಶ್ರೀಧರ ದೊಡ್ಡಮನಿ, ಕೋಲಕಾರ್​ ಅವರನ್ನು ಶಾಸಕ ಅನಿಲ್ ಬೆನಕೆ ವಿಚಾರಿಸಿಕೊಂಡರು. ಈ ವೇಳೆ ಹಾಸ್ಟೆಲ್​ಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸಹ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಶಾಸಕ ಅನಿಲ್ ಬೆನಕೆ ಗುಣಮಟ್ಟದ ಆಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್