AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ನಿಯಮ ಉಲ್ಲಿಂಘನೆ: ಗಾಡಿ ಬಿಡಿಸಿಕೊಳ್ಳಲು ಸವಾರರ ಹಿಂದೇಟು

ಬೆಳಗಾವಿ: ಟ್ರಾಫಿಕ್​​ ರೂಲ್ಸ್​​​ ಬಿಗಿಯಾಗಿದ್ದೇ ಆಗಿದ್ದು, ವಾಹನ ಸವಾರರು ದಂಡದ ಮೊತ್ತ ನೋಡಿ ಬೆಚ್ಚಿ ಬಿದಿದ್ರು. ದಂಡದ ಹೊಡೆತ ತಿಂದು ಕೆಲವ್ರು ಕಕ್ಕಾಬಿಕ್ಕಿಯಾಗಿದ್ರು. ಅದ್ರಲ್ಲೂ ಕೆಲವು ಸವಾರರು ಮಾಡಿರೋ ಕೆಲಸ, ಪೊಲೀಸ್ರಿಗೆ ತಲೆ ನೋವು ತಂದಿದೆ. ಸಂಚಾರಿ ನಿಯಮ ಉಲ್ಲಂಘನೆ ಮಾಡಿ ಖಾಕಿ ಸುಪರ್ದಿಯಲ್ಲಿರೋ ಬೈಕ್​​ಗಳು ಧೂಳು ಹಿಡಿತಿವೆ. ಸುಸ್ಥಿತಿಯಲ್ಲೇ ಇದ್ರೂ, ನಿಂತಲ್ಲೇ ನಿಂತು ಎಲ್ಲವೂ ಹಾಳಾಗ್ತಿದೆ. ಆದ್ರೆ, ಇವುಗಳ ಮೇಲೆ ಬಿದ್ದಿರೋ ಭಾರಿ ದಂಡದ ಮೊತ್ತಗಳಿಂದ ಬೆಚ್ಚಿ, ಮಾಲೀಕರು ಇವುಗಳತ್ತ ಕ್ಯಾರೇ ಅಂತಿಲ್ಲ. ದಂಡದ ಮೊತ್ತಕ್ಕೆ […]

ಟ್ರಾಫಿಕ್ ನಿಯಮ ಉಲ್ಲಿಂಘನೆ: ಗಾಡಿ ಬಿಡಿಸಿಕೊಳ್ಳಲು ಸವಾರರ ಹಿಂದೇಟು
ಸಾಧು ಶ್ರೀನಾಥ್​
|

Updated on:Jan 21, 2020 | 12:28 PM

Share

ಬೆಳಗಾವಿ: ಟ್ರಾಫಿಕ್​​ ರೂಲ್ಸ್​​​ ಬಿಗಿಯಾಗಿದ್ದೇ ಆಗಿದ್ದು, ವಾಹನ ಸವಾರರು ದಂಡದ ಮೊತ್ತ ನೋಡಿ ಬೆಚ್ಚಿ ಬಿದಿದ್ರು. ದಂಡದ ಹೊಡೆತ ತಿಂದು ಕೆಲವ್ರು ಕಕ್ಕಾಬಿಕ್ಕಿಯಾಗಿದ್ರು. ಅದ್ರಲ್ಲೂ ಕೆಲವು ಸವಾರರು ಮಾಡಿರೋ ಕೆಲಸ, ಪೊಲೀಸ್ರಿಗೆ ತಲೆ ನೋವು ತಂದಿದೆ.

ಸಂಚಾರಿ ನಿಯಮ ಉಲ್ಲಂಘನೆ ಮಾಡಿ ಖಾಕಿ ಸುಪರ್ದಿಯಲ್ಲಿರೋ ಬೈಕ್​​ಗಳು ಧೂಳು ಹಿಡಿತಿವೆ. ಸುಸ್ಥಿತಿಯಲ್ಲೇ ಇದ್ರೂ, ನಿಂತಲ್ಲೇ ನಿಂತು ಎಲ್ಲವೂ ಹಾಳಾಗ್ತಿದೆ. ಆದ್ರೆ, ಇವುಗಳ ಮೇಲೆ ಬಿದ್ದಿರೋ ಭಾರಿ ದಂಡದ ಮೊತ್ತಗಳಿಂದ ಬೆಚ್ಚಿ, ಮಾಲೀಕರು ಇವುಗಳತ್ತ ಕ್ಯಾರೇ ಅಂತಿಲ್ಲ.

ದಂಡದ ಮೊತ್ತಕ್ಕೆ ಹೆದರಿ ವಾಹನ ಬಿಡಿಸಿಕೊಳ್ಳಲು ಹಿಂದೇಟು: ಹೌದು.. ಬೆಳಗಾವಿ ಪೊಲೀಸ್ರಿಗೆ ಸಂಚಾರಿ ನಿಯಮ ಉಲ್ಲಂಘಿಸೋ, ಸವಾರರಿಗೆ ದಂಡ ಹಾಕೋದು ಒಂದು ಕೆಲಸವಾದ್ರೆ, ಕೇಸ್​​​​​​ ಬಿದ್ದಿರೋ ವೆಹಿಕಲ್​​ ಕಾಯೋದು ಇನ್ನೊಂದು ಕೆಲಸ ಆಗ್ಬಿಟ್ಟಿದೆ. ಯಾಕಂದ್ರೆ, ಕಳೆದ ಒಂದು ತಿಂಗಳ ಅವಧಿಯಲ್ಲಿ, ನೂರಾರು ಬೈಕ್​​ಗಳಿಗೆ ದಂಡ ವಿಧಿಸಿದ್ದಾರೆ. ಅನೇಕ ನಿಯಮಗಳ ಉಲ್ಲಂಘನೆ ಸೇರಿಸಿ, ಐದು, ಹತ್ತು, ಹನ್ನೆರಡು ಸಾವಿರದ ವರೆಗೂ ಫೈನ್​​ ಹಾಕಿದ್ದಾರೆ. ಆದ್ರೆ, ದಂಡ ಕಟ್ಟಿ ಗಾಡಿ ಬಿಡಿಸಿಕೊಳ್ಳಬೇಕಾದ ಮಾಲೀಕರು, ಅಷ್ಟು ಹಣ ಕಟ್ಟಲಾಗದೆ ಸುಮ್ಮನಾಗಿದ್ದಾರೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಸುಮಾರು ಅರವತ್ತಕ್ಕೂ ಅಧಿಕ ಬೈಕ್​​ಗಳನ್ನ, ಸಂಚಾರಿ ನಿಯಮ ಉಲ್ಲಂಘನೆಯಡಿ ವಶಕ್ಕೆ ತೆಗೆದುಕೊಂಡಿದ್ದಾರೆ. ಕಾನೂನು ಪ್ರಕಾರ, ಕೋರ್ಟ್​​​​ನಲ್ಲಿ ದಂಡ ಕಟ್ಟಿ ಬೈಕ್​ ಬಿಡಿಸಿಕೊಂಡು ಹೋಗ್ಬೇಕು. ಆದ್ರೆ, ಒಂದು ತಿಂಗಳಾದ್ರೂ ಬೈಕ್​ ಮಾಲೀಕರು, ದಂಡ ಕಟ್ಟಿ ಬೈಕ್​ ಬಿಡಿಸಿಕೊಳ್ತಿಲ್ಲ. ಹೀಗಾಗಿ, ಪೊಲೀಸ್ ಠಾಣೆ ಮುಂಭಾಗದಲ್ಲೇ ಬೈಕ್​ಗಳು ನಿಂತಿವೆ. ಇನ್ನು, ವೆಹಿಕಲ್​ಗಳಿಗೆಲ್ಲ ಸರಪಳಿ ಕಟ್ಟಿದ್ದು, ಅದನ್ನ ಕಾಯೋದಕ್ಕಾಗೇ ಕಾನ್ಸ್​​ಸ್ಟೇಬಲ್​​​ ಒಬ್ಬರು ನಿಂತಿದ್ದಾರೆ.

ಒಟ್ನಲ್ಲಿ ದಂಡದಿಂದ ಭಯ ಮೂಡಿ, ನಿಯಮ ಪಾಲಿಸ್ತಾರೆ ಅನ್ನೋದು ಪೊಲೀಸ್ರ ಲೆಕ್ಕಾಚಾರ. ಆದ್ರೆ, ದಂಡ ಕಟ್ಟೋ ಬದಲು ಗಾಡಿಯನ್ನೇ ಬಿಡಲು ಮಾಲೀಕರು ಮುಂದಾಗಿರೋದು, ಪೊಲೀಸ್ರಿಗೆ ಹೊಸ ಫಜೀತಿ ತಂದಿಟ್ಟಿದೆ.

Published On - 12:25 pm, Tue, 21 January 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ