AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ನಿಯಮ ಉಲ್ಲಿಂಘನೆ: ಗಾಡಿ ಬಿಡಿಸಿಕೊಳ್ಳಲು ಸವಾರರ ಹಿಂದೇಟು

ಬೆಳಗಾವಿ: ಟ್ರಾಫಿಕ್​​ ರೂಲ್ಸ್​​​ ಬಿಗಿಯಾಗಿದ್ದೇ ಆಗಿದ್ದು, ವಾಹನ ಸವಾರರು ದಂಡದ ಮೊತ್ತ ನೋಡಿ ಬೆಚ್ಚಿ ಬಿದಿದ್ರು. ದಂಡದ ಹೊಡೆತ ತಿಂದು ಕೆಲವ್ರು ಕಕ್ಕಾಬಿಕ್ಕಿಯಾಗಿದ್ರು. ಅದ್ರಲ್ಲೂ ಕೆಲವು ಸವಾರರು ಮಾಡಿರೋ ಕೆಲಸ, ಪೊಲೀಸ್ರಿಗೆ ತಲೆ ನೋವು ತಂದಿದೆ. ಸಂಚಾರಿ ನಿಯಮ ಉಲ್ಲಂಘನೆ ಮಾಡಿ ಖಾಕಿ ಸುಪರ್ದಿಯಲ್ಲಿರೋ ಬೈಕ್​​ಗಳು ಧೂಳು ಹಿಡಿತಿವೆ. ಸುಸ್ಥಿತಿಯಲ್ಲೇ ಇದ್ರೂ, ನಿಂತಲ್ಲೇ ನಿಂತು ಎಲ್ಲವೂ ಹಾಳಾಗ್ತಿದೆ. ಆದ್ರೆ, ಇವುಗಳ ಮೇಲೆ ಬಿದ್ದಿರೋ ಭಾರಿ ದಂಡದ ಮೊತ್ತಗಳಿಂದ ಬೆಚ್ಚಿ, ಮಾಲೀಕರು ಇವುಗಳತ್ತ ಕ್ಯಾರೇ ಅಂತಿಲ್ಲ. ದಂಡದ ಮೊತ್ತಕ್ಕೆ […]

ಟ್ರಾಫಿಕ್ ನಿಯಮ ಉಲ್ಲಿಂಘನೆ: ಗಾಡಿ ಬಿಡಿಸಿಕೊಳ್ಳಲು ಸವಾರರ ಹಿಂದೇಟು
ಸಾಧು ಶ್ರೀನಾಥ್​
|

Updated on:Jan 21, 2020 | 12:28 PM

Share

ಬೆಳಗಾವಿ: ಟ್ರಾಫಿಕ್​​ ರೂಲ್ಸ್​​​ ಬಿಗಿಯಾಗಿದ್ದೇ ಆಗಿದ್ದು, ವಾಹನ ಸವಾರರು ದಂಡದ ಮೊತ್ತ ನೋಡಿ ಬೆಚ್ಚಿ ಬಿದಿದ್ರು. ದಂಡದ ಹೊಡೆತ ತಿಂದು ಕೆಲವ್ರು ಕಕ್ಕಾಬಿಕ್ಕಿಯಾಗಿದ್ರು. ಅದ್ರಲ್ಲೂ ಕೆಲವು ಸವಾರರು ಮಾಡಿರೋ ಕೆಲಸ, ಪೊಲೀಸ್ರಿಗೆ ತಲೆ ನೋವು ತಂದಿದೆ.

ಸಂಚಾರಿ ನಿಯಮ ಉಲ್ಲಂಘನೆ ಮಾಡಿ ಖಾಕಿ ಸುಪರ್ದಿಯಲ್ಲಿರೋ ಬೈಕ್​​ಗಳು ಧೂಳು ಹಿಡಿತಿವೆ. ಸುಸ್ಥಿತಿಯಲ್ಲೇ ಇದ್ರೂ, ನಿಂತಲ್ಲೇ ನಿಂತು ಎಲ್ಲವೂ ಹಾಳಾಗ್ತಿದೆ. ಆದ್ರೆ, ಇವುಗಳ ಮೇಲೆ ಬಿದ್ದಿರೋ ಭಾರಿ ದಂಡದ ಮೊತ್ತಗಳಿಂದ ಬೆಚ್ಚಿ, ಮಾಲೀಕರು ಇವುಗಳತ್ತ ಕ್ಯಾರೇ ಅಂತಿಲ್ಲ.

ದಂಡದ ಮೊತ್ತಕ್ಕೆ ಹೆದರಿ ವಾಹನ ಬಿಡಿಸಿಕೊಳ್ಳಲು ಹಿಂದೇಟು: ಹೌದು.. ಬೆಳಗಾವಿ ಪೊಲೀಸ್ರಿಗೆ ಸಂಚಾರಿ ನಿಯಮ ಉಲ್ಲಂಘಿಸೋ, ಸವಾರರಿಗೆ ದಂಡ ಹಾಕೋದು ಒಂದು ಕೆಲಸವಾದ್ರೆ, ಕೇಸ್​​​​​​ ಬಿದ್ದಿರೋ ವೆಹಿಕಲ್​​ ಕಾಯೋದು ಇನ್ನೊಂದು ಕೆಲಸ ಆಗ್ಬಿಟ್ಟಿದೆ. ಯಾಕಂದ್ರೆ, ಕಳೆದ ಒಂದು ತಿಂಗಳ ಅವಧಿಯಲ್ಲಿ, ನೂರಾರು ಬೈಕ್​​ಗಳಿಗೆ ದಂಡ ವಿಧಿಸಿದ್ದಾರೆ. ಅನೇಕ ನಿಯಮಗಳ ಉಲ್ಲಂಘನೆ ಸೇರಿಸಿ, ಐದು, ಹತ್ತು, ಹನ್ನೆರಡು ಸಾವಿರದ ವರೆಗೂ ಫೈನ್​​ ಹಾಕಿದ್ದಾರೆ. ಆದ್ರೆ, ದಂಡ ಕಟ್ಟಿ ಗಾಡಿ ಬಿಡಿಸಿಕೊಳ್ಳಬೇಕಾದ ಮಾಲೀಕರು, ಅಷ್ಟು ಹಣ ಕಟ್ಟಲಾಗದೆ ಸುಮ್ಮನಾಗಿದ್ದಾರೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಸುಮಾರು ಅರವತ್ತಕ್ಕೂ ಅಧಿಕ ಬೈಕ್​​ಗಳನ್ನ, ಸಂಚಾರಿ ನಿಯಮ ಉಲ್ಲಂಘನೆಯಡಿ ವಶಕ್ಕೆ ತೆಗೆದುಕೊಂಡಿದ್ದಾರೆ. ಕಾನೂನು ಪ್ರಕಾರ, ಕೋರ್ಟ್​​​​ನಲ್ಲಿ ದಂಡ ಕಟ್ಟಿ ಬೈಕ್​ ಬಿಡಿಸಿಕೊಂಡು ಹೋಗ್ಬೇಕು. ಆದ್ರೆ, ಒಂದು ತಿಂಗಳಾದ್ರೂ ಬೈಕ್​ ಮಾಲೀಕರು, ದಂಡ ಕಟ್ಟಿ ಬೈಕ್​ ಬಿಡಿಸಿಕೊಳ್ತಿಲ್ಲ. ಹೀಗಾಗಿ, ಪೊಲೀಸ್ ಠಾಣೆ ಮುಂಭಾಗದಲ್ಲೇ ಬೈಕ್​ಗಳು ನಿಂತಿವೆ. ಇನ್ನು, ವೆಹಿಕಲ್​ಗಳಿಗೆಲ್ಲ ಸರಪಳಿ ಕಟ್ಟಿದ್ದು, ಅದನ್ನ ಕಾಯೋದಕ್ಕಾಗೇ ಕಾನ್ಸ್​​ಸ್ಟೇಬಲ್​​​ ಒಬ್ಬರು ನಿಂತಿದ್ದಾರೆ.

ಒಟ್ನಲ್ಲಿ ದಂಡದಿಂದ ಭಯ ಮೂಡಿ, ನಿಯಮ ಪಾಲಿಸ್ತಾರೆ ಅನ್ನೋದು ಪೊಲೀಸ್ರ ಲೆಕ್ಕಾಚಾರ. ಆದ್ರೆ, ದಂಡ ಕಟ್ಟೋ ಬದಲು ಗಾಡಿಯನ್ನೇ ಬಿಡಲು ಮಾಲೀಕರು ಮುಂದಾಗಿರೋದು, ಪೊಲೀಸ್ರಿಗೆ ಹೊಸ ಫಜೀತಿ ತಂದಿಟ್ಟಿದೆ.

Published On - 12:25 pm, Tue, 21 January 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ