ಲೋಕಸಭೆಯಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಪ್ರಶ್ನೆಗೆ ಎಲ್ಲರ ಮೆಚ್ಚುಗೆ
ಪ್ರಿಯಾಂಕಾ ಜಾರಕಿಹೊಳಿ (Priyanka Jarkiholi) ಅವರು ಜಿದ್ದಾಜಿದ್ದಿನ ಕದನದಲ್ಲಿ ಗೆದ್ದು ಚಿಕ್ಕ ವಯಸ್ಸಿನಲ್ಲಿಯೇ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಇಂದು (ಆ.01) ಲೋಕಸಭೆಯಲ್ಲಿ ಪ್ರಶ್ನಿಸಿದ ಅವರು, ‘ತಮ್ಮ ಕ್ಷೇತ್ರದಲ್ಲಿ ಆಗಿಬೇಕಿರುವ ಕಾಮಗಾರಿಗಳ ಬಗ್ಗೆ ಮಾತನಾಡಿದರು.
ನವದೆಹಲಿ: ಈ ಬಾರಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪ್ರಿಯಾಂಕಾ ಜಾರಕಿಹೊಳಿ (Priyanka Jarkiholi) ಅವರು ಜಿದ್ದಾಜಿದ್ದಿನ ಕದನದಲ್ಲಿ ಗೆದ್ದು ಚಿಕ್ಕ ವಯಸ್ಸಿನಲ್ಲಿಯೇ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಇಂದು (ಆ.01) ಲೋಕಸಭೆಯಲ್ಲಿ ಮಾತನಾಡಿದ ಅವರು, ‘ತಮ್ಮ ಕ್ಷೇತ್ರದಲ್ಲಿ ಆಗಿಬೇಕಿರುವ ಕಾಮಗಾರಿಗಳ ಬಗ್ಗೆ ಪ್ರಸ್ತಾಪಿಸಿದರು. ಜೊತೆಗೆ ಅಥಣಿ ಮತ್ತು ಗೋಕಾಕ್ನಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಮಾಡಲು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದೇವೆ. ಇನ್ನೂ ಆಗಿಲ್ಲ. ಆದಷ್ಟು ಬೇಗ ಆಗಬೇಕು ಎಂದು ಮನವಿ ಮಾಡಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:34 pm, Thu, 1 August 24