AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೆಳಗಾವಿ ಚೆನ್ನಮ್ಮ ಸರ್ಕಲ್​ನಲ್ಲಿ ವ್ಯಕ್ತಿಗೆ ಬೂಟು ಕಾಲಿನಿಂದ ಒದ್ದ ಪೊಲೀಸ್​​, ಫ್ಯಾಕ್ಟ್​​ ಚೆಕ್​ನಲ್ಲಿ ಬಯಲಾಯ್ತು ಅಸಲಿ ಸತ್ಯ

ಬೆಳಗಾವಿಯ ಚೆನ್ನಮ್ಮ ಸರ್ಕಲ್​​ನಲ್ಲಿ ಪೊಲೀಸ್​​ ಅಧಿಕಾರಿಯೊಬ್ಬರು, ವ್ಯಕ್ತಿಗೆ ಬೂಟು​ ಕಾಲಿನಿಂದ ಒದೆಯುವ ವಿಡಿಯೋ ವೈರಲ್​ ಆಗಿದೆ.

Viral Video: ಬೆಳಗಾವಿ ಚೆನ್ನಮ್ಮ ಸರ್ಕಲ್​ನಲ್ಲಿ ವ್ಯಕ್ತಿಗೆ ಬೂಟು ಕಾಲಿನಿಂದ ಒದ್ದ ಪೊಲೀಸ್​​, ಫ್ಯಾಕ್ಟ್​​ ಚೆಕ್​ನಲ್ಲಿ ಬಯಲಾಯ್ತು ಅಸಲಿ ಸತ್ಯ
ವ್ಯಕ್ತಿಗೆ ಬೂಟು ಕಾಲಿನಿಂದ ಒದೆಯುವ ಪೊಲೀಸ್​​
TV9 Web
| Edited By: |

Updated on:Nov 22, 2022 | 12:33 PM

Share

ಬೆಳಗಾವಿ: ಸಾಮಾಜಿಕ ಜಲತಾಣದಲ್ಲಿ ಫೇಕ್​​ ವಿಡಿಯೋಗಳು ಸಾಕಷ್ಟು ವೈರಲ್​ ಆಗಿ ಸಹಜವಾಗಿಯೇ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗುತ್ತವೆ. ಆದರೆ ಈ ವಿಡಿಯೋಗಳ ಕುರಿತು ಫ್ಯಾಕ್ಟ್​​ ಚೆಕ್​ಮಾಡಿದಾಗ ವಿಡಿಯೋದ ಅಸಲಿ ಕಹಾನಿ ಗೊತ್ತಾಗುತ್ತದೆ. ಇದೇ ರೀತಿ ಗಡಿನಾಡು ಬೆಳಗಾವಿಯ (Belagavi) ಹೃದಯ ಭಾಗವಾದ ಚೆನ್ನಮ್ಮ ಸರ್ಕಲ್​​ನಲ್ಲಿ (chennamma circle) ಪೊಲೀಸ್​​ (Police) ಅಧಿಕಾರಿಯೊಬ್ಬರು, ವ್ಯಕ್ತಿಗೆ ಬೂಟು​ ಕಾಲಿನಿಂದ ಒದೆಯುವ ವಿಡಿಯೋ ವೈರಲ್​ ಆಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದಂತೆ, ವಿಡಿಯೋ ನೋಡಿದ ಸಾರ್ವಜನಿಕರು ಬೆಳಗಾವಿ ಪೊಲೀಸರಿಗೆ ಹಿಡಿ ಶಾಪ ಹಾಕಲು, ಪೊಲೀಸರ ವಿರುದ್ಧ ಕೆಟ್ಟದಾಗಿ ಕಾಮೆಂಟ್​​ ಹಾಕಲು ಶುರು ಮಾಡಿದ್ದಾರೆ.

ಈ ವಿಷಯ ಬೆಳಗಾವಿ ಪೊಲೀಸ್​ ಇಲಾಖೆ ಗಮನಕ್ಕೂ ಬಂದಿದೆ. ಕೂಡಲೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಟ್ವೀಟ್​ ಮಾಡಿ “ವಿಡಿಯೋದಲ್ಲಿ ಕಂಡು ಬಂದಿರುವ ದೃಶ್ಯಗಳು ಅಸಲಿ ಅಲ್ಲ. ಇದು ಚಲನಚಿತ್ರದ ಸೀನ್​ನನ್ನು ಚಿತ್ರಿಕರಿಸುವ ಸಮಯದಲ್ಲಿ ತೆಗೆದ ದೃಶ್ಯಾವಳಿಯಾಗಿದೆ. ಇದನ್ನು ಜನರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನೂ ಈ ವಿಡಿಯೋ ಕುರಿತು ಕರ್ನಾಟಕ ರಾಜ್ಯ ಪೊಲೀಸ್​ ಇಲಾಖೆ ಫ್ಯಾಕ್ಟ್​​ ಚೆಕ್​ ಮಾಡಿದ್ದು, ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ “ವಿಡಿಯೋದಲ್ಲಿ ಕಂಡುಬರುವ ದೃಶ್ಯ, ಚಲನಚಿತ್ರವೊಂದರ ಸೀನ್​ ಚಿತ್ರಿಕರಿಸುವ ಸೆರೆ ಹಿಡಿಯಲಾಗಿದೆ” ಎಂದು ಬರೆದುಕೊಂಡಿದೆ.

ಹಾಗೇ ಬೆಳಗಾವಿ ನಗರ ಪೊಲೀಸ್​​ ಇಲಾಖೆ ಈ ಘಟನೆ ಬಗ್ಗೆ ಸುತ್ತೋಲೆ ಹೊರಡಿಸಿ ಟ್ವೀಟ್​​ ಮಾಡಿದ್ದು “ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ಹೊಯ್ಸಳ ಚಿತ್ರದ ಚಿತ್ರೀಕರಣದ ವಿಡಿಯೋ ಕ್ಲಿಪ್​​ನಲ್ಲಿ ಪೊಲೀಸ್ ಅಧಿಕಾರಿ ಒಬ್ಬ ವ್ಯಕ್ತಿಯನ್ನು ಕೆಳಗೆ ತಳ್ಳಿ ಬೂಟುಗಾಲಿನಿಂದ ಒದೆಯುತ್ತಿರುವ ದೃಶ್ಯ ವೈರಲ್ ಮಾಡಿ ನೈಜ ಘಟನೆ ಎಂಬಂತೆ ಬಿಂಬಿಸಲಾಗಿದೆ. ಇದು ಪೊಲೀಸ್ ಇಲಾಖೆಯ ಬಗ್ಗೆ ತಪ್ಪು ಸಂದೇಶ ರವಾನಿಸುತ್ತಿದ್ದು, ಕಾರಣ ಈ ಬಗ್ಗೆ ತಪ್ಪಾಗಿ ಅರ್ಥೈಸಿಕೊಳ್ಳಬಾರದು. ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ  ಪೋಸ್ಟ್​​ ಅಥವಾ ಕಾಮೆಂಟ್​ ಮಾಡದಂತೆ ಸಾರ್ವಜನಿಕರಲ್ಲಿ ಈ ಮೂಲಕ ಕೋರಲಾಗಿದೆ”, ಎಂದು ಸುತ್ತೋಲೆಯಲ್ಲಿ ತಿಳಿಸಿ, ಪ್ರತಿಯನ್ನು ಟ್ವೀಟ್​ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Tue, 22 November 22

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?