AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಡಕಲ್ ಅಣೆಕಟ್ಟು ಯೋಜನೆ: 43 ವರ್ಷಗಳಾದರು ಕುಟುಂಬಗಳಿಗೆ ಸಿಕ್ಕಿಲ್ಲ ಪರ್ಯಾಯ ಭೂಮಿ

ಹಿಡಕಲ್ ಅಣೆಕಟ್ಟು ಯೋಜನೆಗೆ ಸುಮಾರು 43 ವರ್ಷಗಳ ಹಿಂದೆ ಜಮೀನು ಕಳೆದುಕೊಂಡಿರುವ ಹುಕ್ಕೇರಿ ತಾಲೂಕಿನ ರೈತರು, ತಮಗೆ ಮಂಜೂರಾದ ಪರ್ಯಾಯ ಭೂಮಿಯನ್ನು ಹಸ್ತಾಂತರಿಸುವಂತೆ ಒತ್ತಾಯಿಸಿ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿದರು.

ಹಿಡಕಲ್ ಅಣೆಕಟ್ಟು ಯೋಜನೆ: 43 ವರ್ಷಗಳಾದರು ಕುಟುಂಬಗಳಿಗೆ ಸಿಕ್ಕಿಲ್ಲ ಪರ್ಯಾಯ ಭೂಮಿ
ಹಿಡಕಲ್​ ಡ್ಯಾಂ
ವಿವೇಕ ಬಿರಾದಾರ
|

Updated on:Dec 02, 2023 | 10:56 AM

Share

ಬೆಳಗಾವಿ ಡಿ.02: ಹಿಡಕಲ್ ಅಣೆಕಟ್ಟು (Hidikal Dam) ಯೋಜನೆಗೆ ಸುಮಾರು 43 ವರ್ಷಗಳ ಹಿಂದೆ ಜಮೀನು ಕಳೆದುಕೊಂಡಿರುವ ಹುಕ್ಕೇರಿ (Hukkeri) ತಾಲೂಕಿನ ರೈತರು, ತಮಗೆ ಮಂಜೂರಾದ ಪರ್ಯಾಯ ಭೂಮಿಯನ್ನು ಹಸ್ತಾಂತರಿಸುವಂತೆ ಒತ್ತಾಯಿಸಿ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿದರು. 58 ಕುಟುಂಬಗಳ ಸದಸ್ಯರು ಕೈಯಲ್ಲಿ ಫಲಕ ಹಿಡಿದು ಚನ್ನಮ್ಮ ವೃತ್ತದಿಂದ ಮೆರವಣಿಗೆ ನಡೆಸಿ ಡಿಸಿ ಕಚೇರಿ ಆವರಣದಲ್ಲಿ ಸಮಾವೇಶಗೊಂಡು ಅನಿರ್ದಿಷ್ಟಾವಧಿ ಧರಣಿ ನಡೆಸಿದರು.

ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆಗಳನ್ನೂ ಕೂಗಿದರು. ಹುಕ್ಕೇರಿ ತಾಲೂಕಿನ ಬೀರನಹೊಳಿ, ಮಣಗುತ್ತಿ, ಇಸ್ಲಾಂಪುರ, ಗುಡಾನಟ್ಟಿ, ಹಳೇವಂತಮೂರಿ ರೈತರು ಹಿಡಕಲ್ ಅಣೆಕಟ್ಟು ಯೋಜನೆಯಿಂದ ಭೂಮಿ ಕಳೆದುಕೊಂಡಿದ್ದಾರೆ.

ಆಂದೋಲನದ ನೇತೃತ್ವ ವಹಿಸಿದ್ದ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡದ್‌ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, 1980ರಲ್ಲಿ ಹಿಡಕಲ್‌ ಅಣೆಕಟ್ಟು ಯೋಜನೆ ಹಿನ್ನೀರಿನಲ್ಲಿ 58 ಕುಟುಂಬಗಳು ಜಮೀನು ಕಳೆದುಕೊಂಡಿದ್ದು, ಸರಕಾರ ಅಕ್ಕಪಕ್ಕದ ಗ್ರಾಮಗಳಲ್ಲಿ ಪರ್ಯಾಯ ಜಮೀನು ಮಂಜೂರು ಮಾಡಿದ್ದರೂ ಇಂದಿಗೂ ಹಸ್ತಾಂತರಿಸಿಲ್ಲ.

ಇದನ್ನೂ ಓದಿ: ಸಪ್ತ ನದಿಗಳ ಬೀಡು ಬೆಳಗಾವಿ ಜಿಲ್ಲೆಯಲ್ಲಿ ‘ಬ್ಯಾರೇಜ್ ಗೇಟ್’ ಕಳ್ಳರ ಹಾವಳಿ: ಸಚಿವರು, ಅಧಿಕಾರಿಗಳಿಗೆ ತಲೆನೋವಾದ ಗ್ಯಾಂಗ್  

ಚಳಿಗಾಲದ ಅಧಿವೇಶನದ ಮೊದಲ ದಿನವೇ ಈ ವಿಷಯವನ್ನು ಚರ್ಚಿಸಬೇಕು ಎಂದು ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ. ಸಂತ್ರಸ್ತ ರೈತರಿಗೆ ಮಂಜೂರಾದ ಭೂಮಿಯನ್ನು ಕೂಡಲೇ ಹಸ್ತಾಂತರಿಸಲು ಸರಕಾರ ಆದೇಶ ಹೊರಡಿಸಬೇಕು. ನಮ್ಮ ಭಾಗದ ರೈತರು ಕಳೆದ 43 ವರ್ಷಗಳಿಂದ ಪರಿಹಾರ ಭೂಮಿಗಾಗಿ ಆಂದೋಲನ ನಡೆಸುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಭೀಮಪ್ಪ ಗಡದ್ ಹೇಳಿದರು.

ಕೃಷಿಕ ಸಮಾಜದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಾಣಿಕ್ಯ ಚಿಲ್ಲೂರು ಮಾತನಾಡಿ, ನೀರಾವರಿ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರ ಬೇಡಿಕೆಗಳನ್ನು ಆದ್ಯತೆ ಮೇಲೆ ಈಡೇರಿಸಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:35 am, Sat, 2 December 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ