AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Doctors Negligence: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು, ಕುಟುಂಬಸ್ಥರ ಆಕ್ರೋಶ

ಬೆಳಗಾವಿ ತಾಲೂಕಿನ ಕಿಣೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಮೃತಪಟ್ಟಿದ್ದಾರೆ, ತೀವ್ರ ರಕ್ತಸ್ರಾವವಾದ ಕಾರಣ ಬೇರೆ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಮಗು ಹಾಗೂ ತಾಯಿ ಇಬ್ಬರೂ ಮೃತಪಟ್ಟಿದ್ದಾರೆ. ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

Doctors Negligence: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು, ಕುಟುಂಬಸ್ಥರ ಆಕ್ರೋಶ
ಕುಟುಂಬಸ್ಥರ ಆಕ್ರೋಶ
Follow us
Sahadev Mane
| Updated By: ಆಯೇಷಾ ಬಾನು

Updated on: Mar 18, 2024 | 12:49 PM

ಬೆಳಗಾವಿ, ಮಾರ್ಚ್​.18: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ (Doctors Negligence). ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ಲಕ್ಷ್ಮೀ ಹಳ್ಳಿ( 28) ಮೃತ ಬಾಣಂತಿ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇನ್ನು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಲಕ್ಷ್ಮೀಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ತಡರಾತ್ರಿ ಬೆಳಗಾವಿ ತಾಲೂಕಿನ ಕಿಣೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಲಕ್ಷ್ಮೀ ಬೆಳಗ್ಗೆ ಕಿಣೆಯ ಆಸ್ಪತ್ರೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮನೀಡಿದ್ದರು. ಈ ವೇಳೆ ತೀವ್ರ ರಕ್ತಸ್ರಾವವಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಸಾಗಿಸಲು ವೈದ್ಯರು ಸಲಹೆ ನೀಡಿದ್ದರು. ವೈದ್ಯರ ಸಲಹೆ ಮೇರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಬಾಣಂತಿ, ಮಗು ಮೃತಪಟ್ಟಿದೆ.

ಬೆಳಗ್ಗೆ ಆಸ್ಪತ್ರೆಯಲ್ಲಿ ನಾರ್ಮಲ್ ಡಿಲೆವರಿ ಆದರೂ ಸೂಕ್ತ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ವೈದ್ಯರು ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿಲ್ಲ, ರಕ್ತಸ್ರಾವ ಆದರೂ ಗಮನಕ್ಕೆ ತರದೇ ನಿರ್ಲಕ್ಷ್ಯ ವಹಿಸಿದ್ದಾರೆ. ಆಸ್ಪತ್ರೆಗೆ ಸಾಗಿಸಲು ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡದೆ ಬೇಜವಾಬ್ದಾರಿತನ ಮೆರೆದಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಘಟನೆ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಯುವಕರಲ್ಲಿ ಹೆಚ್ಚುತ್ತಿದೆ ಸ್ಟ್ರೋಕ್; ಇದು ಯಾಕೆ ಅಪಾಯಕಾರಿ?

ಯುವತಿಯರ ಮೇಲೆ ಹಲ್ಲೆ

ಪೂಜಾ ವಿಚಾರಕ್ಕೆ ಯುವತಿಯರ ಮೇಲೆ ಹಲ್ಲೆ ನಡೆಸಿರೋ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನೇರಳೆಯಲ್ಲಿ ಘಟನೆ ನಡೆದಿದೆ. ಪೂಜೆ ಮಾಡದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿದ್ದಶೆಟ್ಟಿ ಕುಟುಂಬದ ಯುವತಿಯರ ಮೇಲೆ ಗ್ರಾಮದ ಕೆಲವರು ಹಲ್ಲೆ ಮಾಡಿದ್ದಾರೆ. ಓರ್ವ ಗರ್ಭಿಣಿಗೆ ಗರ್ಭಪಾತವಾಗಿದೆ ಎನ್ನಲಾಗಿದೆ. ಈ ಸಂಬಂಧ 8 ಜನರ ವಿರುದ್ಧ FIR ದಾಖಲಾಗಿದೆ.

ದೇವಾಲಯದ ಬಾಗಿಲು ತೆಗೆದಿದ್ದಕ್ಕೆ ವಿಷ ಸೇವನೆ

ಅಧಿಕಾರಿಗಳು ದೇವಾಲಯದ ಬೀಗ ಮುರಿದಿದ್ದಕ್ಕೆ ಅರ್ಚಕ ವಿಷ ಸೇವಿಸಿರುವ ಘಟನೆ, ತುಮಕೂರು ಜಿಲ್ಲೆ ನಿರುವಗಲ್ಲು ಗ್ರಾಮದಲ್ಲಿ ನಡೆದಿದೆ. 3 ವರ್ಷಗಳಿಂದ ಆಂಜನೇಯ ಸ್ವಾಮಿ ಮೂರ್ತಿ ಪೂಜೆ ನಿಂತಿದ್ದು, ಅರ್ಚಕರು ಹೈ ಕೋರ್ಟ್ ಮೆಟ್ಟಿಲೇರಿದ್ದರು. ಈ ಮಧ್ಯೆ ತಹಸಿಲ್ದಾರ್ ನೇತೃತ್ವದ ತಂಡ ನಿನ್ನೆ ರಾತ್ರಿ ದೇಗುಲದ ಬಾಗಿಲು ತೆರೆದು ಪೂಜೆ ಸಲ್ಲಿಸಿದೆ. ಈ ವೇಳೆ ಅರ್ಚಕ ಅಜಯ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್