AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನಲ್ಲಿ ವಿವಾದಾತ್ಮಕ ನಕ್ಷೆ, ವಿಡಿಯೋ ಪೋಸ್ಟ್ ಮಾಡಿದ ಹಿನ್ನೆಲೆ MES ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ಐಆರ್ ದಾಖಲು

ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ‌ ಗ್ರಾಫಿಕ್ ವಿಡಿಯೋ, ಫೋಟೋಗಳನ್ನು ಎಂಇಎಸ್ ಮುಖಂಡ ಶುಭಂ ಶೆಳಕೆ ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಸಂಪೂರ್ಣ ಸಂಯುಕ್ತ ಮಹಾರಾಷ್ಟ್ರ ಶೀರ್ಷಿಕೆಯಡಿ ವಿವಾದಿತ ನಕ್ಷೆಯ ಪೋಸ್ಟ್ ಮಾಡಲಾಗಿದೆ.

ಫೇಸ್​ಬುಕ್​ನಲ್ಲಿ ವಿವಾದಾತ್ಮಕ ನಕ್ಷೆ, ವಿಡಿಯೋ ಪೋಸ್ಟ್ ಮಾಡಿದ ಹಿನ್ನೆಲೆ MES ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ಐಆರ್ ದಾಖಲು
MES ಮುಖಂಡ ಶುಭಂ ಶೆಳಕೆ
TV9 Web
| Edited By: |

Updated on: May 06, 2022 | 10:24 AM

Share

ಬೆಳಗಾವಿ: ಕರ್ನಾಟಕ ಗಡಿ ಭಾಗ ಮಹಾರಾಷ್ಟ್ರಕ್ಕೆ ಸೇರಿಸಿ ವಿವಾದಿತ ನಕ್ಷೆ ಪೋಸ್ಟ್ ಹಿನ್ನೆಲೆ MES ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ಐಆರ್ ದಾಖಲಾಗಿದೆ. MES ಮುಖಂಡ ಶುಭಂ ಶೆಳಕೆ ಫೇಸ್ಬುಕ್ನಲ್ಲಿ ವಿವಾದಾತ್ಮಕ ನಕ್ಷೆ ಮತ್ತು ವಿವಾದಾತ್ಮಕ ವಿಡಿಯೋ ಪೋಸ್ಟ್ ಮಾಡಿ ಶೇರ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತ ವಿನಾಯಕ ಬೋವಿ ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಮೇರೆಗೆ FIR ದಾಖಲಾಗಿದೆ. ಪೋಸ್ಟ್ ಡಿಲೀಟ್ ಮಾಡುವಂತೆ ಠಾಣೆಗೆ ಕರೆಸಿ ವಾರ್ನಿಂಗ್ ಮಾಡಲಾಗಿದೆ. ಆದ್ರೆ ಪೊಲೀಸರು ಎಚ್ಚರಿಕೆ ನೀಡಿದ್ದರೂ ಶುಭಂ ಶೆಳಕೆ ಉದ್ಧಟತನ ಮೆರೆದಿದ್ದಾರೆ.

ಐಟಿ ಆ್ಯಕ್ಟ್ 2000(U/s-66), ಐಪಿಸಿ ಸೆಕ್ಷನ್ 1860(U/s-153B)ರಡಿ ಕೇಸ್ ದಾಖಲಿಸಲಾಗಿದೆ. ಶುಭಂ ಶೆಳಕೆ ವಿವಾದಿತ ಪೋಸ್ಟ್ ಹಾಕುವ ಮೂಲಕ ಗಡಿ ಖ್ಯಾತೆ ತೆಗೆದಿದ್ದಾರೆ. ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ‌ ಗ್ರಾಫಿಕ್ ವಿಡಿಯೋ, ಫೋಟೋಗಳನ್ನು ಎಂಇಎಸ್ ಮುಖಂಡ ಶುಭಂ ಶೆಳಕೆ ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಸಂಪೂರ್ಣ ಸಂಯುಕ್ತ ಮಹಾರಾಷ್ಟ್ರ ಶೀರ್ಷಿಕೆಯಡಿ ವಿವಾದಿತ ನಕ್ಷೆಯ ಪೋಸ್ಟ್ ಮಾಡಲಾಗಿದೆ. ಸಂಯುಕ್ತ ಮಹಾರಾಷ್ಟ್ರಕ್ಕೆ ಬೆಳಗಾವಿ ರಕ್ತ ಹೋರಾಟದ ಮುನ್ನುಡಿ ಬರೆದಿದೆ. ಬೆಳಗಾವಿ ಸೇರಿ ಗಡಿ ಭಾಗದ ಮರಾಠಿಗರು ನ್ಯಾಯಕ್ಕಾಗಿ ಕಾಯುತ್ತಿದ್ದೇವೆ ಎಂದು ವಿಡಿಯೋ ಜೊತೆಗೆ ಪೋಸ್ಟ್ ಹಾಕಲಾಗಿದೆ. ಹೀಗಾಗಿ ಎಫ್ಐಆರ್ ದಾಖಲಾಗಿದ್ದು ಪೋಸ್ಟ್ ಡಿಲೀಟ್ ಮಾಡುವಂತೆ ಠಾಣೆಗೆ ಕರೆಸಿ ಪೊಲೀಸರು ಶುಭಂ ಶೆಳಕೆಗೆ ವಾರ್ನಿಂಗ್ ಮಾಡಿದ್ದಾರೆ. ಆದ್ರೆ ಪೊಲೀಸರು ಎಚ್ಚರಿಕೆ ನೀಡಿದ್ದರೂ ಪೋಸ್ಟ್ ಡಿಲೀಟ್ ಮಾಡದೇ ಉದ್ಧಟತನ ಮೆರೆದಿದ್ದಾರೆ.

ಬೆಳಗಾವಿ ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ