AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನಲ್ಲಿ ವಿವಾದಾತ್ಮಕ ನಕ್ಷೆ, ವಿಡಿಯೋ ಪೋಸ್ಟ್ ಮಾಡಿದ ಹಿನ್ನೆಲೆ MES ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ಐಆರ್ ದಾಖಲು

ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ‌ ಗ್ರಾಫಿಕ್ ವಿಡಿಯೋ, ಫೋಟೋಗಳನ್ನು ಎಂಇಎಸ್ ಮುಖಂಡ ಶುಭಂ ಶೆಳಕೆ ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಸಂಪೂರ್ಣ ಸಂಯುಕ್ತ ಮಹಾರಾಷ್ಟ್ರ ಶೀರ್ಷಿಕೆಯಡಿ ವಿವಾದಿತ ನಕ್ಷೆಯ ಪೋಸ್ಟ್ ಮಾಡಲಾಗಿದೆ.

ಫೇಸ್​ಬುಕ್​ನಲ್ಲಿ ವಿವಾದಾತ್ಮಕ ನಕ್ಷೆ, ವಿಡಿಯೋ ಪೋಸ್ಟ್ ಮಾಡಿದ ಹಿನ್ನೆಲೆ MES ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ಐಆರ್ ದಾಖಲು
MES ಮುಖಂಡ ಶುಭಂ ಶೆಳಕೆ
TV9 Web
| Edited By: |

Updated on: May 06, 2022 | 10:24 AM

Share

ಬೆಳಗಾವಿ: ಕರ್ನಾಟಕ ಗಡಿ ಭಾಗ ಮಹಾರಾಷ್ಟ್ರಕ್ಕೆ ಸೇರಿಸಿ ವಿವಾದಿತ ನಕ್ಷೆ ಪೋಸ್ಟ್ ಹಿನ್ನೆಲೆ MES ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ಐಆರ್ ದಾಖಲಾಗಿದೆ. MES ಮುಖಂಡ ಶುಭಂ ಶೆಳಕೆ ಫೇಸ್ಬುಕ್ನಲ್ಲಿ ವಿವಾದಾತ್ಮಕ ನಕ್ಷೆ ಮತ್ತು ವಿವಾದಾತ್ಮಕ ವಿಡಿಯೋ ಪೋಸ್ಟ್ ಮಾಡಿ ಶೇರ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತ ವಿನಾಯಕ ಬೋವಿ ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಮೇರೆಗೆ FIR ದಾಖಲಾಗಿದೆ. ಪೋಸ್ಟ್ ಡಿಲೀಟ್ ಮಾಡುವಂತೆ ಠಾಣೆಗೆ ಕರೆಸಿ ವಾರ್ನಿಂಗ್ ಮಾಡಲಾಗಿದೆ. ಆದ್ರೆ ಪೊಲೀಸರು ಎಚ್ಚರಿಕೆ ನೀಡಿದ್ದರೂ ಶುಭಂ ಶೆಳಕೆ ಉದ್ಧಟತನ ಮೆರೆದಿದ್ದಾರೆ.

ಐಟಿ ಆ್ಯಕ್ಟ್ 2000(U/s-66), ಐಪಿಸಿ ಸೆಕ್ಷನ್ 1860(U/s-153B)ರಡಿ ಕೇಸ್ ದಾಖಲಿಸಲಾಗಿದೆ. ಶುಭಂ ಶೆಳಕೆ ವಿವಾದಿತ ಪೋಸ್ಟ್ ಹಾಕುವ ಮೂಲಕ ಗಡಿ ಖ್ಯಾತೆ ತೆಗೆದಿದ್ದಾರೆ. ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ‌ ಗ್ರಾಫಿಕ್ ವಿಡಿಯೋ, ಫೋಟೋಗಳನ್ನು ಎಂಇಎಸ್ ಮುಖಂಡ ಶುಭಂ ಶೆಳಕೆ ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಸಂಪೂರ್ಣ ಸಂಯುಕ್ತ ಮಹಾರಾಷ್ಟ್ರ ಶೀರ್ಷಿಕೆಯಡಿ ವಿವಾದಿತ ನಕ್ಷೆಯ ಪೋಸ್ಟ್ ಮಾಡಲಾಗಿದೆ. ಸಂಯುಕ್ತ ಮಹಾರಾಷ್ಟ್ರಕ್ಕೆ ಬೆಳಗಾವಿ ರಕ್ತ ಹೋರಾಟದ ಮುನ್ನುಡಿ ಬರೆದಿದೆ. ಬೆಳಗಾವಿ ಸೇರಿ ಗಡಿ ಭಾಗದ ಮರಾಠಿಗರು ನ್ಯಾಯಕ್ಕಾಗಿ ಕಾಯುತ್ತಿದ್ದೇವೆ ಎಂದು ವಿಡಿಯೋ ಜೊತೆಗೆ ಪೋಸ್ಟ್ ಹಾಕಲಾಗಿದೆ. ಹೀಗಾಗಿ ಎಫ್ಐಆರ್ ದಾಖಲಾಗಿದ್ದು ಪೋಸ್ಟ್ ಡಿಲೀಟ್ ಮಾಡುವಂತೆ ಠಾಣೆಗೆ ಕರೆಸಿ ಪೊಲೀಸರು ಶುಭಂ ಶೆಳಕೆಗೆ ವಾರ್ನಿಂಗ್ ಮಾಡಿದ್ದಾರೆ. ಆದ್ರೆ ಪೊಲೀಸರು ಎಚ್ಚರಿಕೆ ನೀಡಿದ್ದರೂ ಪೋಸ್ಟ್ ಡಿಲೀಟ್ ಮಾಡದೇ ಉದ್ಧಟತನ ಮೆರೆದಿದ್ದಾರೆ.

ಬೆಳಗಾವಿ ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?