AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನಲ್ಲಿ ವಿವಾದಾತ್ಮಕ ನಕ್ಷೆ, ವಿಡಿಯೋ ಪೋಸ್ಟ್ ಮಾಡಿದ ಹಿನ್ನೆಲೆ MES ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ಐಆರ್ ದಾಖಲು

ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ‌ ಗ್ರಾಫಿಕ್ ವಿಡಿಯೋ, ಫೋಟೋಗಳನ್ನು ಎಂಇಎಸ್ ಮುಖಂಡ ಶುಭಂ ಶೆಳಕೆ ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಸಂಪೂರ್ಣ ಸಂಯುಕ್ತ ಮಹಾರಾಷ್ಟ್ರ ಶೀರ್ಷಿಕೆಯಡಿ ವಿವಾದಿತ ನಕ್ಷೆಯ ಪೋಸ್ಟ್ ಮಾಡಲಾಗಿದೆ.

ಫೇಸ್​ಬುಕ್​ನಲ್ಲಿ ವಿವಾದಾತ್ಮಕ ನಕ್ಷೆ, ವಿಡಿಯೋ ಪೋಸ್ಟ್ ಮಾಡಿದ ಹಿನ್ನೆಲೆ MES ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ಐಆರ್ ದಾಖಲು
MES ಮುಖಂಡ ಶುಭಂ ಶೆಳಕೆ
TV9 Web
| Edited By: ಆಯೇಷಾ ಬಾನು|

Updated on: May 06, 2022 | 10:24 AM

Share

ಬೆಳಗಾವಿ: ಕರ್ನಾಟಕ ಗಡಿ ಭಾಗ ಮಹಾರಾಷ್ಟ್ರಕ್ಕೆ ಸೇರಿಸಿ ವಿವಾದಿತ ನಕ್ಷೆ ಪೋಸ್ಟ್ ಹಿನ್ನೆಲೆ MES ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ಐಆರ್ ದಾಖಲಾಗಿದೆ. MES ಮುಖಂಡ ಶುಭಂ ಶೆಳಕೆ ಫೇಸ್ಬುಕ್ನಲ್ಲಿ ವಿವಾದಾತ್ಮಕ ನಕ್ಷೆ ಮತ್ತು ವಿವಾದಾತ್ಮಕ ವಿಡಿಯೋ ಪೋಸ್ಟ್ ಮಾಡಿ ಶೇರ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತ ವಿನಾಯಕ ಬೋವಿ ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಮೇರೆಗೆ FIR ದಾಖಲಾಗಿದೆ. ಪೋಸ್ಟ್ ಡಿಲೀಟ್ ಮಾಡುವಂತೆ ಠಾಣೆಗೆ ಕರೆಸಿ ವಾರ್ನಿಂಗ್ ಮಾಡಲಾಗಿದೆ. ಆದ್ರೆ ಪೊಲೀಸರು ಎಚ್ಚರಿಕೆ ನೀಡಿದ್ದರೂ ಶುಭಂ ಶೆಳಕೆ ಉದ್ಧಟತನ ಮೆರೆದಿದ್ದಾರೆ.

ಐಟಿ ಆ್ಯಕ್ಟ್ 2000(U/s-66), ಐಪಿಸಿ ಸೆಕ್ಷನ್ 1860(U/s-153B)ರಡಿ ಕೇಸ್ ದಾಖಲಿಸಲಾಗಿದೆ. ಶುಭಂ ಶೆಳಕೆ ವಿವಾದಿತ ಪೋಸ್ಟ್ ಹಾಕುವ ಮೂಲಕ ಗಡಿ ಖ್ಯಾತೆ ತೆಗೆದಿದ್ದಾರೆ. ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ‌ ಗ್ರಾಫಿಕ್ ವಿಡಿಯೋ, ಫೋಟೋಗಳನ್ನು ಎಂಇಎಸ್ ಮುಖಂಡ ಶುಭಂ ಶೆಳಕೆ ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಸಂಪೂರ್ಣ ಸಂಯುಕ್ತ ಮಹಾರಾಷ್ಟ್ರ ಶೀರ್ಷಿಕೆಯಡಿ ವಿವಾದಿತ ನಕ್ಷೆಯ ಪೋಸ್ಟ್ ಮಾಡಲಾಗಿದೆ. ಸಂಯುಕ್ತ ಮಹಾರಾಷ್ಟ್ರಕ್ಕೆ ಬೆಳಗಾವಿ ರಕ್ತ ಹೋರಾಟದ ಮುನ್ನುಡಿ ಬರೆದಿದೆ. ಬೆಳಗಾವಿ ಸೇರಿ ಗಡಿ ಭಾಗದ ಮರಾಠಿಗರು ನ್ಯಾಯಕ್ಕಾಗಿ ಕಾಯುತ್ತಿದ್ದೇವೆ ಎಂದು ವಿಡಿಯೋ ಜೊತೆಗೆ ಪೋಸ್ಟ್ ಹಾಕಲಾಗಿದೆ. ಹೀಗಾಗಿ ಎಫ್ಐಆರ್ ದಾಖಲಾಗಿದ್ದು ಪೋಸ್ಟ್ ಡಿಲೀಟ್ ಮಾಡುವಂತೆ ಠಾಣೆಗೆ ಕರೆಸಿ ಪೊಲೀಸರು ಶುಭಂ ಶೆಳಕೆಗೆ ವಾರ್ನಿಂಗ್ ಮಾಡಿದ್ದಾರೆ. ಆದ್ರೆ ಪೊಲೀಸರು ಎಚ್ಚರಿಕೆ ನೀಡಿದ್ದರೂ ಪೋಸ್ಟ್ ಡಿಲೀಟ್ ಮಾಡದೇ ಉದ್ಧಟತನ ಮೆರೆದಿದ್ದಾರೆ.

ಬೆಳಗಾವಿ ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’