AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯ ಇನ್ಸುಲೆನ್ ಟೇಪ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ: ಅಗ್ನಿಶಾಮಕ, ಪೊಲೀಸ್, ಆ್ಯಂಬುಲೆನ್ಸ್ ದೌಡು

ಬೆಳಗಾವಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸ್ನೇಹಂ ಕಾರ್ಖಾನೆಯ ಲಿಫ್ಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿ ಬೆಂಕಿಯ ಕೆನ್ನಾಲಿಗೆ ಇಡೀ ಕಾರ್ಖಾನೆ ಆವರಿಸಿದೆ. ಇನ್ನು ಕಾರ್ಖಾನೆಯೊಳಗೆ ಜನರು ಸಿಲುಕಿರು ಶಂಕೆ ವ್ಯಕ್ತವಾಗಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ಆ್ಯಂಬುಲೆನ್ಸ್ ಆಗಮಿಸಿವೆ.

ಬೆಳಗಾವಿಯ ಇನ್ಸುಲೆನ್ ಟೇಪ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ: ಅಗ್ನಿಶಾಮಕ, ಪೊಲೀಸ್, ಆ್ಯಂಬುಲೆನ್ಸ್ ದೌಡು
ಸ್ನೇಹಂ ಕಾರ್ಖಾನೆಯಲ್ಲಿ ಅಗ್ನಿ ಅವಘಡ
Sahadev Mane
| Edited By: |

Updated on:Aug 06, 2024 | 10:48 PM

Share

ಬೆಳಗಾವಿ, (ಆಗಸ್ಟ್​ 06): ಬೆಳಗಾವಿ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಸುಲೆನ್ ಟೇಪ್ ಉತ್ಪಾದನೆಯ ಸ್ನೇಹಂ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಳಗಾವಿ ‌ತಾಲೂಕಿನ‌ ನಾವಗೆ ಗ್ರಾಮದಲ್ಲಿರುವ  ಸ್ನೇಹಂ ಕಾರ್ಖಾನೆಯ ಲಿಫ್ಟ್‌‌ನಲ್ಲಿ ಇಂದು(ಆಗಸ್ಟ್ 06) ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಕಾರ್ಖಾನೆಗೆ ವ್ಯಾಪಿಸಿದ್ದು, ಒಳಗೆ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿದ್ದು, ಕಾರ್ಯಚರಣೆ ನಡೆಸಿದ್ದಾರೆ.

ಇನ್ಸುಲೆನ್ ಟೇಪ್ ರೆಡಿ ಮಾಡುವ ಕಾರ್ಖಾನೆ ಇದಾಗಿದ್ದು, ಇಂದು (ಆಗಸ್ಟ್​ 06) ಎರಡನೇ ಶಿಫ್ಟ್​​ ಬಿಡುವ ವೇಳೆ ಏಕಾಏಕಿ ಲಿಫ್ಟ್​ನಲ್ಲಿ ಸಣ್ಣ ಪ್ರಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಧಗ ಧಗಿಸಿ ಇಡೀ ಫ್ಯಾಕ್ಟರಿಗೆ ಆವರಿಸಿಕೊಂಡಿದೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಡಿಸಿಪಿ ರೋಹನ್ ಜಗದೀಶ್ ಆಗಮಿಸಿದ್ದಾರೆ. ಇನ್ನು ಫ್ಯಾಕ್ಟರಿಯೊಳಗೆ ಕಾರ್ಮಿಕರು ಸಿಲುಕಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಐದು ಆ್ಯಂಬುಲೆನ್ಸ್ ಗಳು ಮೊಕ್ಕಂ ಹೂಡಿವೆ.

ಇನ್ನು ಕೆಲ ಕಾರ್ಮಿಕರು ಬೆಂಕಿಯನ್ನು ನೋಡಿ ಹೊರಗಡೆ ಓಡೋಡಿ ಬಂದಿದ್ದರೆ, ಓರ್ವ ಕಾರ್ಮಿಕ ಲಿಪ್ಟ್ ನಲ್ಲಿ ಸಿಲುಕಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಆರು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಮತ್ತೊಂದೆಡೆ ಪೊಲೀಸ್ ಅಧಿಕಾರಿಗಳು ಕೆಲಸ ಮುಗಿಸಿಕೊಂಡು ಹೋದವರನ್ನು ಸಂಪರ್ಕಿಸಿ ಫ್ಯಾಕ್ಟರಿಯೊಳಗೆ ಯಾರ್ಯಾರು? ಎಷ್ಟು ಮಂದಿ ಇದ್ದರು ಎನ್ನುವ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:46 pm, Tue, 6 August 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!