AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಸಂತ್ರಸ್ತರಿಗೆ ತಲುಪದ ಪರಿಹಾರ; ವೀಕ್ಷಣೆಗಷ್ಟೇ ಸಿಮಿತವಾಯ್ತೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬೆಳಗಾವಿ ಭೇಟಿ?

ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು ಅಷ್ಟೇ, ಇದರಿಂದ ಯಾವುದೇ ರೀತಿಯ ಪ್ರಯೋಜನ ಆಗಲಿಲ್ಲ ಎಂದು ನೆರೆ ಸಂತ್ರಸ್ತರು ಬೇಸರ ವ್ಯಕ್ತಪಡಿಸಿದ್ದಾರೆ.

ನೆರೆ ಸಂತ್ರಸ್ತರಿಗೆ ತಲುಪದ ಪರಿಹಾರ; ವೀಕ್ಷಣೆಗಷ್ಟೇ ಸಿಮಿತವಾಯ್ತೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬೆಳಗಾವಿ ಭೇಟಿ?
ಬೆಳಗಾವಿ ಜಿಲ್ಲೆಯಲ್ಲಿ ನೆರೆ ಸಂತ್ರಸ್ತರ ಸ್ಥಿತಿ ಅತಂತ್ರ
TV9 Web
| Edited By: |

Updated on:Jul 30, 2021 | 1:06 PM

Share

ಬೆಳಗಾವಿ: ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪನವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಆದರೆ ಇದರಿಂದಾಗಿ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಬೇಕಾಬಿಟ್ಟಿ ಬಂದು, ಹೋದರು ಒಂದು ಪೈಸೆಯೂ ಪರಿಹಾರ ತುರ್ತಾಗಿ ನೀಡಲಿಲ್ಲ. ಅಲ್ಲದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜುಲೈ 25 ರಂದು ಬೆಳಗಾವಿ ಪ್ರವಾಸದ ವೇಳೆ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಗೋವಿಂದ್ ಕಾರಜೋಳ 200 ಕೋಟಿ ಬಿಡುಗಡೆಗೆ ಒತ್ತಾಯಿಸಿದ್ದರು. ಇದೀಗ ಹೊಸದಾಗಿ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾರೆ. ಒಂದು ಪೈಸೆಯೂ ಪರಿಹಾರ ಬಿಡುಗಡೆ ಇಲ್ಲ ಎಂದು ನೆರೆ ಸಂತ್ರಸ್ತರು ಟಿವಿ9 ಡಿಜಿಟಲ್ ಜತೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಜಿಲ್ಲಾಧಿಕಾರಿ ಖಾತೆಯಲ್ಲಿ ಕೇವಲ 90 ಕೋಟಿ ರೂಪಾಯಿ ಮಾತ್ರ ಇದ್ದು, ನೆರೆ ಸಂತ್ರಸ್ತರ ಸ್ಥಳಾಂತರ ಸೇರಿದಂತೆ ತುರ್ತು ಕೆಲಸಕ್ಕೂ ಈ ಹಣ ಸಾಲಲ್ಲ. ತಹಶಿಲ್ದಾರರ ಅಕೌಂಟ್‌ಗಳಲ್ಲಿ ಕೇವಲ ಹತ್ತು ಲಕ್ಷ ಮಾತ್ರ ಇದ್ದು, ಯಾವುದಕ್ಕೆ ಬಳಕೆ ಮಾಡಿಕೊಳ್ಳಬೇಕು ಅನ್ನುವ ಗೊಂದಲದಲ್ಲಿ ಅವರು ಇದ್ದಾರೆ. ಹೊಸ ಸಿಎಂ ಬರೀ ಸನ್ಮಾನ, ದೇವಸ್ಥಾನ ಓಡಾಟದಲ್ಲಿ ಬಿಜಿಯಾದರೆ, ಬೆಳಗಾವಿ ನೆರೆ ಸಂತ್ರಸ್ತರ ನೋವು ಆಲಿಸುವವರು ಯಾರು? ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು ಅಷ್ಟೇ, ಇದರಿಂದ ಯಾವುದೇ ರೀತಿಯ ಪ್ರಯೋಜನ ಆಗಲಿಲ್ಲ ಎಂದು ನೆರೆ ಸಂತ್ರಸ್ತರು ಬೇಸರ ವ್ಯಕ್ತಪಡಿಸಿದ್ದಾರೆ.

ಬಿರಡಿ ಗ್ರಾಮದ ಕಾಳಜಿ ಕೇಂದ್ರದಲ್ಲಿ ನೆರೆ ಸಂತ್ರಸ್ತರ ಕಣ್ಣೀರು 2019ರಲ್ಲಿ ಪ್ರವಾಹ ಬಂದಾಗಲೂ ಪರಿಹಾರ ನೀಡಲಿಲ್ಲ. ಈಗ ಮತ್ತೆ ಪ್ರವಾಹ ಬಂದು ನಮ್ಮ ಮನೆಗಳು ಮುಳುಗಿವೆ. ಕಾಳಜಿ ಕೇಂದ್ರದಲ್ಲಿ ಊಟಕ್ಕಾಗಿ ನಾಚಿಕೆ ಬಿಟ್ಟು ಕಾಯುತ್ತಿದ್ದೇವೆ. ಸರ್ಕಾರ ನಮಗೆ ಊಟ ಕೊಡದಿದ್ದರೂ ಪರವಾಗಿಲ್ಲ. ಈ ಬಾರಿಯಾದರೂ ನಮಗೆ ಪ್ರವಾಹ ಪರಿಹಾರ ನೀಡಲಿ. ಇಲ್ಲವೇ ಬೇರೆ ಎಲ್ಲಾದರೂ ನಮಗೆ ಮನೆ ನಿರ್ಮಿಸಿಕೊಡಲಿ ಎಂದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಿರಡಿ ಗ್ರಾಮದ ಕಾಳಜಿ ಕೇಂದ್ರದಲ್ಲಿ ನೆರೆ ಸಂತ್ರಸ್ತರ ಕಣ್ಣೀರು ಹಾಕಿದ್ದಾರೆ.

flood affected people

ಬಿರಡಿ ಗ್ರಾಮದ ಕಾಳಜಿ ಕೇಂದ್ರದಲ್ಲಿ ನೆರೆ ಸಂತ್ರಸ್ತರ ಕಣ್ಣೀರು

ಮಕ್ಕಳನ್ನು ಕಟ್ಟಿಕೊಂಡು ಪದೇಪದೇ ಮನೆ ಬಿಡುವುದು‌ ಕಷ್ಟ. ನಮ್ಮ ಪರಿಸ್ಥಿತಿ ಬಹಳ ಗಂಭೀರವಾಗಿದೆ ಎಂದು ಬಿರಡಿ ಗ್ರಾಮದ ಕಾಳಜಿ ಕೇಂದ್ರದಲ್ಲಿ ಸರ್ಕಾರದ ವಿರುದ್ಧ ಮಹಿಳೆಯರು ಕಣ್ಣೀರಿಟ್ಟು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Karnataka Breaking News LIVE: ಮಳೆ ಹಾನಿಯಿಂದ ಕಂಗೆಟ್ಟವರಿಗೆ ಪರಿಹಾರ ಒದಗಿಸಲು ಹಣದ ಕೊರತೆಯಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ವರ್ಷವಾದ್ರೂ ಸಿಕ್ಕಿಲ್ಲ ಪರಿಹಾರ, ಮುರಿದು ಬಿದ್ದಿರುವ ಮನೆಯಲ್ಲೇ ಜೀವನ ಮಾಡ್ತಿದಾರೆ

Published On - 12:55 pm, Fri, 30 July 21

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ