AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿಗೆ ಬಂದ ಕೇಂದ್ರ ಬರ ತಂಡದ ಅಧಿಕಾರಿಗಳ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ರೈತ

ಬರ ವೀಕ್ಷಣೆಗೆಂದು ಜಮೀನಿಗೆ ಬಂದ ಕೇಂದ್ರದ ಅಧಿಕಾರಿಗಳ ಮುಂದೆ ರೈತನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಕೇಂದ್ರ ಬರ ತಂಡದ ಅಧಿಕಾರಿಗಳ ಮುಂದೆ ಎರಡು ಬಾಟಲಿ ತಂದಿದ್ದ ವಿಷವನ್ನು ಕುಡಿಯಲು ಯತ್ನಿಸಿದ್ದಾನೆ., ಕೂಡಲೇ ಪೊಲೀಸರು ತಡೆದಿದ್ದಾರೆ.

ಜಮೀನಿಗೆ ಬಂದ ಕೇಂದ್ರ ಬರ ತಂಡದ ಅಧಿಕಾರಿಗಳ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ರೈತ
ರೈತ ಅಪ್ಪಾಸಾಹೇಬ್ ಲಕ್ಕುಂಡಿ
ಸಹದೇವ್​ ಮಾನೆ
| Edited By: |

Updated on:Oct 06, 2023 | 11:39 AM

Share

ಬೆಳಗಾವಿ, (ಅಕ್ಟೋಬರ್ 06): ಕರ್ನಾಟಕದಲ್ಲಿ ಮಳೆ ಇಲ್ಲದೇ ರೈತರು ಕಂಗಾಲಾಗಿದ್ದು, 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳನ್ನೊಳಗೊಂಡ ಮೂರು ಕೇಂದ್ರ ತಂಡಗಳು ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕಿಸಲಿವೆ. ಅದಂತೆ ಇಂದು (ಅಕ್ಟೋಬರ್ 06) ಕೇಂದ್ರ ತಂಡ ಬೆಳಗಾವಿಯಲ್ಲಿ ಬರ ಅವಲೋಕಗೆ ಬಂದಿದ್ದು, ಈ ವೇಳೆ ರೈತನೋರ್ವ ವಿಷದ ಬಾಟಲಿ ಹಿಡಿದು ಅಧಿಕಾರಿಗಳ ಬಳಿ ಬಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ನಲವತ್ತು ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ಸಂಪೂರ್ಣವಾಗಿ ಹಾನಿಯಾಗಿದೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಇದೆ ಎಂದು ರೈತ ಅಪ್ಪಾಸಾಹೇಬ್ ಲಕ್ಕುಂಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಪೊಲೀಸರು ವಿಷದ ಬಾಟಲಿ ಕಸಿದುಕೊಂಡಿದ್ದಾರೆ. ಬಳಿಕ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಅಧಿಕಾರಿಗಳು ಬರುತ್ತಾರೆ ಹೋಗುತ್ತಾರೆ. ಆದ್ರೆ, ಪರಿಹಾರ ಮಾತ್ರ ಸಿಕ್ಕಿಲ್ಲ. ಸರ್ಕಾರ ಬರೀ ಹೆಣ್ಣು ಮಕ್ಕಳಿಗೆ ಗ್ಯಾರಂಟಿ ಕೊಟ್ಟಿದೆ. ರೈತರಿಗೆ ಏನು ಕೊಟ್ಟಿಲ್ಲ ಎಂದು ಅಧಿಕಾರಿಗಳು ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಳೆ ಕಿತ್ತಿ ತೋರಿಸಿದ ರೈತ

ಮತ್ತೊಂದೆಡೆ ನೇಸರಗಿ ಗ್ರಾಮದ ಮಲ್ಲಿಕಾರ್ಜುನ ಎಂಬ ರೈತನ ಜಮೀನಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಬೆಳೆ ಪರಿಶೀಲನೆ ಮಾಡಿತು. ಎರಡು ಎಕರೆ ಪ್ರದೇಶದಲ್ಲಿ ಬೆಳೆದಿರುವ ಗಜ್ಜರಿ(ಕ್ಯಾರೆಟ್) ಬೆಳೆ ಹಾನಿಯಾಗಿದೆ ಎಂದು ರೈತ. ಬರ ಅಧ್ಯಯನ ತಂಡಕ್ಕೆ ವಿವರಿಸಿದರು. ಪ್ರತಿ ಎಕರೆಗೆ ಐವತ್ತು ಸಾವಿರ ರೂಪಾಯಿ ಖರ್ಚು ಮಾಡಿ ಬಿತ್ತನೆ ಮಾಡಿದ್ದೇನೆ. ಮಳೆ ಆಗದಕ್ಕೆ ಗಜ್ಜರಿ ಬೆಳೆ ಬಂದಿಲ್ಲ ಎಂದು ಅಧಿಕಾರಿಗಳ ಜೊತೆ ರೈತ ತಮ್ಮ ಕಷ್ಟ ಹೇಳಿಕೊಂಡಿದ್ದಾನೆ. ಅಲ್ಲದೇ ಬೆಳೆ ಕಿತ್ತಿ ಬರ ಅಧ್ಯಯನ ತಂಡಕ್ಕೆ ತೋರಿಸಿ ಮನವರಿಕೆ ಮಾಡಿಕೊಟ್ಟರು. ಇದೇ ವೇಳೆ ಡಿಸಿ ನಿತೇಶ್ ಪಾಟೀಲ್ ಅವರೂ ಸಹ ರೈತರ ಕಷ್ಟಗಳನ್ನು ಕೇಂದ್ರ ಅಧ್ಯಯನ ತಂಡದ ಗಮನಕ್ಕೆ ತಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:38 am, Fri, 6 October 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ