AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಸಂಪತ್ತು, ತೆರಿಗೆ ಹಣವನ್ನು ಲೂಟಿ ಮಾಡಿದ ಅಮಿತ್​ ಶಾ: ಕುಮಾರಸ್ವಾಮಿ ವಾಗ್ದಾಳಿ

ಕರ್ನಾಟಕದ ಸಂಪತ್ತು, ತೆರಿಗೆ ಹಣವನ್ನು ಲೂಟಿ ಮಾಡಿ ಕೊಂಡೊಯ್ದಿದ್ದೀರಿ. ಅಭಿವೃದ್ಧಿ ಹೆಸರಿನಲ್ಲಿ ರಾಜ್ಯವನ್ನು ಲೂಟಿ ಮಾಡಿ ಮಧ್ಯಪ್ರದೇಶಲ್ಲಿ ಸುರಿದಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ವಿರುದ್ಧ ಹರಿಹಾಯ್ದಿದ್ದಾರೆ.

ಕರ್ನಾಟಕದ ಸಂಪತ್ತು, ತೆರಿಗೆ ಹಣವನ್ನು ಲೂಟಿ ಮಾಡಿದ ಅಮಿತ್​ ಶಾ: ಕುಮಾರಸ್ವಾಮಿ ವಾಗ್ದಾಳಿ
ಹೆಚ್ ಡಿ ಕುಮಾರಸ್ವಾಮಿ
TV9 Web
| Edited By: |

Updated on: Feb 11, 2023 | 10:31 PM

Share

ಬೆಳಗಾವಿ: ಕರ್ನಾಟಕದ (Karnataka) ಸಂಪತ್ತು, ತೆರಿಗೆ ಹಣವನ್ನು ಲೂಟಿ ಮಾಡಿ ಕೊಂಡೊಯ್ದಿದ್ದೀರಿ. ಅಭಿವೃದ್ಧಿ ಹೆಸರಿನಲ್ಲಿ ರಾಜ್ಯವನ್ನು ಲೂಟಿ ಮಾಡಿ ಮಧ್ಯಪ್ರದೇಶಲ್ಲಿ (Madhyapradesh) ಸುರಿದಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ (HD Kumaraswamy), ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ವಿರುದ್ಧ ಹರಿಹಾಯ್ದಿದ್ದಾರೆ. ಇಂದು (ಫೆ.11) ಚುನಾವಣಾ ಚಾಣಕ್ಯ ಅಮಿತ್ ಶಾ ಮಂಗಳೂರಿಗೆ (Managaluru) ಭೇಟಿ ನೀಡಿದ್ದ ವೇಳೆ, ಸಮಾವೇಶವೊಂದರಲ್ಲಿ ಜೆಡಿಎಸ್ (JDS)​ಗೆ ಮತ ಹಾಕಿದರೆ ಕಾಂಗ್ರೆಸ್​ (Congress) ಗೆ ಮತ ಹಾಕಿದ ಹಾಗೆ ಎಂದು ಹೇಳಿದ್ದರು.

ಈ ಕುರಿತು ಬೆಳಗಾವಿ (Belagavi) ಜಿಲ್ಲೆಯ ರಾಯಬಾಗದಲ್ಲಿ (Raybag) ಇಂದು (ಫೆ.13) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಕಾಂಗ್ರೆಸ್​ನವರು ಹೇಳುತ್ತಾರೆ ಜೆಡಿಎಸ್​ಗೆ ಮತ ಹಾಕಿದರೇ ಬಿಜೆಪಿಗೆ ಅನುಕೂಲ, ಬಿಜೆಪಿಯವರು ಹೇಳುತ್ತಾರೆ ಜೆಡಿಎಸ್​ಗೆ ಮತ ಹಾಕಿದರೆ ಕಾಂಗ್ರೆಸ್​ಗೆ ಲಾಭ ಅಂತ. ಕಾಂಗ್ರೆಸ್​, ಬಿಜೆಪಿ ತೆಗೆದು ಜೆಡಿಎಸ್​ಗೆ ಮತ ಹಾಕಿದರೆ ಆಯ್ತಲಾ. ಜೆಡಿಎಸ್​ಗೆ ಮತ ಹಾಕಿದರೆ ಕನ್ನಡನಾಡನ್ನು ರಕ್ಷಿಸಲು ಇರುತ್ತಾರೆ ಎಂದು ಹೇಳಿದರು.

2023ರಲ್ಲಿ ಕರ್ನಾಟಕದಲ್ಲಿ ರಾಷ್ಟ್ರೀಯ ಪಕ್ಷಗಳಿಗೆ  ಜನ ಇತಿಶ್ರೀ ಹಾಡುತ್ತಾರೆ

ರಾಜ್ಯ ಬಿಜೆಪಿ ಸರ್ಕಾರ ಜನರಿಗೆ ಏನೇನು ಒಳ್ಳೆಯದು ಮಾಡಿದೆ. 8 ವರ್ಷದಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಏನು ಕೊಟ್ಟಿದೆ. ಅಮಿತ್​ ಶಾ ಅವರೇ ಕರ್ನಾಟಕಕ್ಕೆ ಯಾವ ವಿಶೇಷ ಯೋಜನೆ ನೀಡಿದ್ದೀರಿ? ನೆರೆಯಿಂದ ಮನೆಗಳು ಬಿದ್ದಾಗ ಹೆಚ್ಚಿನ ನೆರವು ನೀಡಿದ್ದೀರಾ ಹೇಳಿ ?ಯಾವುದಾದರೂ ನೀರಾವರಿ ಸೌಲಭ್ಯಗಳಿಗೆ ಒಳ್ಳೆಯದು ಮಾಡಿದೀರಾ? ಎನೂ ಕೊಟ್ಟಿದೀರಿ ಕರ್ನಾಟಕಕ್ಕೆ ಬರೀ ಲೂಟಿ ಮಾಡಿದ್ರಿ. ಕರ್ನಾಟಕದಲ್ಲಿ ಈ ಬಾರಿ 2 ರಾಷ್ಟ್ರೀಯ ಪಕ್ಷಗಳು ನೆಲಕಚ್ಚುವುದರಲ್ಲಿ ಯಾವುದೇ ಅನುಮಾನ ಇಲ್ಲ. 2023ರಲ್ಲಿ ಕರ್ನಾಟಕದಲ್ಲಿ ಇದಕ್ಕೆ ಜನ ಇತಿಶ್ರೀ ಹಾಡುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆಲ್ಲುವುದೇ ಕಷ್ಟವಿದೆ

ಜೆಡಿಎಸ್​ 123 ಸ್ಥಾನ ಗೆಲ್ಲಲ್ಲ ಎಂದಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿಕೆ ವಿರುದ್ಧ ಹರಿಹಾಯ್ದ ಅವರು ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆಲ್ಲುವುದೇ ಕಷ್ಟವಿದೆ. ಮುಂದಿನ ಚುನಾವಣೆಯಲ್ಲಿ 120-130 ಸ್ಥಾನ ಗೆಲ್ಲುವ ಗುರಿಯಿದೆ. 1 ವರ್ಷದಿಂದ ಸಂಘಟನೆ, ಕಾರ್ಯಕರ್ತರ ಶ್ರಮದಿಂದ ಕೆಲಸ ಮಾಡಿದ್ದೇವೆ. ಜೆಡಿಎಸ್​ ಕಾರ್ಯಕರ್ತರ ಜೊತೆ ಶ್ರಮದಿಂದ ಕೆಲಸ ಮಾಡುತ್ತಿದ್ದೇನೆ. ಸಿದ್ದರಾಮಯ್ಯ ಸ್ಪರ್ಧೆಗೆ ಕ್ಷೇತ್ರವಿಲ್ಲದೆ ಇನ್ನೂ ತಡಕಾಡುತ್ತಿದ್ದಾರೆ. ಎಲ್ಲಿಂದ ಸ್ಪರ್ಧಿಸಬೇಕು ಅನ್ನೋದು ಸಿದ್ದರಾಮಯ್ಯಗೆ ಗ್ಯಾರಂಟಿ ಇಲ್ಲ. ಇಂತಹ ಸ್ಥಿತಿಯಲ್ಲಿರುವ ಸಿದ್ದರಾಮಯ್ಯಗೆ ಜೆಡಿಎಸ್​ ಬಗ್ಗೆ ಯಾಕೆ ಚಿಂತೆ ಎಂದು ವಾಗ್ದಾಳಿ ಮಾಡಿದರು.

60-65 ಹೆಸರು ರೆಡಿ ಮಾಡ್ತಿದ್ದೇವೆ ಅದರ ಜತೆಗೆ ಹಾಸನದ್ದೂ ಟಿಕೇಟ್​ ಘೋಷಣೆ ಮಾಡ್ತೇವಿ

ಹಾಸನ ಟಿಕೆಟ್ ಗೊಂದಲ ವಿಚಾರವಾಗಿ ಮಾತನಾಡಿದ ಅವರು ನಾಳೆ ಯಾವುದೇ ರೀತಿಯ ಟಿಕೆಟ್ ಘೋಷಣೆ ಆಗುತ್ತಿಲ್ಲ. ನಾಳೆ ಅರಸೀಕೆರೆ ಕಾರ್ಯಕ್ರಮಕ್ಕೆ ಹೋಗ್ತಾ ಇದೀನಿ ಚರ್ಚೆ ಮಾಡುತ್ತೇನೆ. ಎರಡನೇ ಹಂತದ ಪಟ್ಟಿ ಬಿಡುಗಡೆ ಮಾಡಬೇಕು. ಈಗಾಗಲೇ 60-65 ಹೆಸರು ರೆಡಿ ಮಾಡುತ್ತಿದ್ದೇವೆ ಅದರ ಜೊತೆಗೆ ಹಾಸನದ್ದೂ ಘೋಷಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​