AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಗಾವಣೆ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಇದ್ದಿದ್ದರಿಂದ ಸಿಪಿಎಲ್​ ಸಭೆ ನಡೆಸಿದರು: ಬೊಮ್ಮಾಯಿ

ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ವರ್ಗಾವಣೆ ದಂಧೆ ವಿಚಾರಕ್ಕೆ ಸರ್ಕಾರದಲ್ಲಿ ಪೈಪೋಟಿ ನಡಿತಿದೆ. ವರ್ಗಾವಣೆ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಇರುವುದರಿಂದ ಮೊನ್ನೆ ಶಾಸಕಾಂಗದ ಸಭೆ ನಡೆಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ಮಾಡಿದರು.

ವರ್ಗಾವಣೆ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಇದ್ದಿದ್ದರಿಂದ ಸಿಪಿಎಲ್​ ಸಭೆ ನಡೆಸಿದರು: ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on: Jul 30, 2023 | 2:13 PM

Share

ಬೆಳಗಾವಿ: ಕಾಂಗ್ರೆಸ್ ಸರ್ಕಾರ (Congress Government) ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ವರ್ಗಾವಣೆ ದಂಧೆ ವಿಚಾರಕ್ಕೆ ಸರ್ಕಾರದಲ್ಲಿ ಪೈಪೋಟಿ ನಡಿತಿದೆ. ವರ್ಗಾವಣೆ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಇರುವುದರಿಂದ ಮೊನ್ನೆ ಶಾಸಕಾಂಗದ ಸಭೆ (CPL Meeting) ನಡೆಸಿದ್ದಾರೆ. ವರ್ಗಾವಣೆ ದಂಧೆಯಲ್ಲಿ ಬಾರ್ಗೆನಿಂಗ್ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ಮಾಡಿದರು. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪೊಲೀಸರಿಂದ ದಿವ್ಯಾಂಗನ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು ಖಂಡನೀಯ ಎಂದರು.

ಪೊಲೀಸ್ ಅಧಿಕಾರಿಗಳಿಂದ ಅಮಾಯಕರ ಮೇಲೆ ಹಲ್ಲೆ ಆಗುತ್ತಿದೆ. ಸಾಮಾನ್ಯ ಜನರ ಮೇಲೆ ಹಲ್ಲೆ, ಮಹಿಳೆಯರ ಮೇಲೆ ಹಲ್ಲೆ ಆಗುತ್ತಿದೆ. ಸಮಾಜಘಾತುಕ ಶಕ್ತಿಗಳಿಗೆ ಈ ಸರ್ಕಾರವೇ ಬೆಂಬಲ ನೀಡುತ್ತಿದೆ. ಪೊಲೀಸ್ ಅಧಿಕಾರಿಗಳ ಕೊಲೆ ಆಗುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ, ಸರ್ಕಾರ ವಿಫಲವಾಗಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೇ ಜನರು ಸರ್ಕಾರದ ವಿರುದ್ಧ ದಂಗೆ ಏಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಹೊರತುಪಡಿಸಿ ಎಲ್ಲರೂ ಇದ್ದರು!

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿಯಾಗಿದೆ. 11 ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ಇದೆ. ಉಳಿದ ಕಡೆ ಬರದ ಛಾಯೆ ಮೂಡಿದೆ. ಮುಖ್ಯಮಂತ್ರಿಗಳು ವಿಡಿಯೋ ಸಂವಾದ ಬಿಟ್ಟರೆ ಪರಿಹಾರ ಕಾರ್ಯಕ್ಕೆ ಮುಂದಾಗಿಲ್ಲ. ಮನೆ ಹಾನಿಯಾದರೇ ತಕ್ಷಣ 10 ಸಾವಿರ ರೂ. ಪರಿಹಾರ ಕೊಡಬೇಕು. ನಾವು ಅಧಿಕಾರದಲ್ಲಿದ್ದಾಗ ನೆರೆಪೀಡಿತರಿಗೆ ನೆರವು ನೀಡಿದ್ದೇವೆ. ಎಸ್​ಡಿಆರ್​ಎಫ್​ ಪರಿಹಾರ ಜತೆಗೆ ಸರ್ಕಾರದಿಂದಲೂ ಪರಿಹಾರ ನೀಡಿದ್ದೇವೆ. ಅದೇ ಮಾನದಂಡ ಅನುಸರಿಸಿ ರೈತರಿಗೆ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.

ಬೆಳೆ ಹಾನಿ ಆಗಿರುವುದಕ್ಕೆ ಪ್ರಾಥಮಿಕ ಸಮೀಕ್ಷೆ ಕೂಡ ಮಾಡಿಲ್ಲ. ಯಾವ ಸಚಿವರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಸಚಿವರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಎಲ್ಲ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕು ಎಂದು ಆಗ್ರಹಿಸಿದರು.

ಇನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸುತ್ತೇವೆ. ನಾವು ತಯಾರಿ ಮಾಡಿಕೊಳ್ಳುತ್ತಿದ್ದೇವೆ, ಜಿಲ್ಲಾವಾರು ಸಭೆ ಮಾಡುತ್ತೇವೆ. ಆದಷ್ಟು ಬೇಗ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆಗಲಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ