Belgaum: ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ಸಾವು

|

Updated on: Apr 14, 2023 | 5:51 PM

ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್​ ತಾಲೂಕಿನ ಘಟಪ್ರಭಾ ಪಟ್ಟಣದ ಧೂಪದಾಳ ಪ್ರವಾಸಿ ಮಂದಿರ ಬಳಿ ನಡೆದಿದೆ.

Belgaum: ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ಸಾವು
ಸಾಂದರ್ಭಿಕ ಚಿತ್ರ
Follow us on

ಗೋಕಾಕ್: ಘಟಪ್ರಭಾ ನದಿಯಲ್ಲಿ (Ghataprabha river) ಈಜಲು ಹೋಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್​ ತಾಲೂಕಿನ ಘಟಪ್ರಭಾ ಪಟ್ಟಣದ ಧೂಪದಾಳ ಪ್ರವಾಸಿ ಮಂದಿರ ಬಳಿ ನಡೆದಿದೆ. 6 ಜನ ಸ್ನೇಹಿತರು ಸೇರಿ ಮಧ್ಯಾಹ್ನ ಘಟಪ್ರಭಾ ನದಿಗೆ ಈಜಲು ಹೋಗಿದ್ದಾರೆ. ಈ 6 ಜನ ಸ್ನೇಹಿತರ ಪೈಕಿ ನಾಲ್ವರು ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತರು ಘಟಪ್ರಭಾ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಿರಿಗೆರೆ ನಿವಾಸಿಗಳು ಎಂದು ಗುರುತಿಸಲಾಗಿದೆ.

ಇದೀಗ 4 ಮಂದಿ ಮೃತ ದೇಹವನ್ನು ನದಿಯಿಂದ ಹೊರತೆಗೆಯಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಘಟಪ್ರಭಾ ಪೊಲೀಸ್ ಠಾಣಾ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

Published On - 5:48 pm, Fri, 14 April 23