AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಿಡ್ಜ್‌ ಸ್ಫೋಟದಿಂದ ನಾಲ್ವರು ಸಾವು ಕೇಸ್​​: ಚಿಕಿತ್ಸೆ ಫಲಿಸದೆ ತಂದೆ, ಮಗ ಸಾವು; ಫಲಿಸದ ಕುಟುಂಬಸ್ಥರ ಪ್ರಾರ್ಥನೆ

ಬೆಳಗಾವಿಯ ಚವ್ಹಾಟ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಫ್ರಿಡ್ಜ್ ಸ್ಫೋಟಗೊಂಡು ದಮೋನೆ ಕುಟುಂಬದ ಆರು ಸದಸ್ಯರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಸೆಪ್ಟೆಂಬರ್ 14ರಂದು ನಡೆದ ಈ ದುರಂತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ತಂದೆ ಮತ್ತು ಮಗ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಫ್ರಿಡ್ಜ್‌ ಸ್ಫೋಟದಿಂದ ನಾಲ್ವರು ಸಾವು ಕೇಸ್​​: ಚಿಕಿತ್ಸೆ ಫಲಿಸದೆ ತಂದೆ, ಮಗ ಸಾವು; ಫಲಿಸದ ಕುಟುಂಬಸ್ಥರ ಪ್ರಾರ್ಥನೆ
ಮೃತ ತಂದೆ, ಮಗImage Credit source: tv9 kannada
ಸಹದೇವ್​ ಮಾನೆ
| Edited By: |

Updated on: Sep 16, 2026 | 7:31 PM

Share

ಬೆಳಗಾವಿ, ಸೆಪ್ಟೆಂಬರ್​​ 16: ಬೆಳಗಾವಿಯಲ್ಲಿ ಫ್ರಿಡ್ಜ್‌ ಸ್ಫೋಟದಿಂದ ನಾಲ್ವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ತಂದೆ ಮತ್ತು ಮಗ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಗಜಾನನ ದಮೋನೆ (61) ಮತ್ತು ರೋಷನ್ ದಮೋನೆ(21) ಮೃತರು. ಘಟನೆಯಲ್ಲಿ ಒಟ್ಟು 6 ಜನರು ಮೃತಪಟ್ಟಿದ್ದಾರೆ. ಆ ಮೂಲಕ ಪ್ರಕರಣದಲ್ಲಿ ಇಡೀ ಕುಟುಂಬವೇ‌ ದುರಂತ ಅಂತ್ಯ ಕಂಡಿದೆ. ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿಸದ ಪ್ರಾರ್ಥನೆ; ತಂದೆ, ಮಗ ಸಾವು 

ಇನ್ನು ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಂದೆ, ಮಗನನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದರು. ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದರು. ಇಬ್ಬರು ಬದುಕಿ ಬರಲಿ ಎಂದು ಕುಟುಂಬಸ್ಥರು ಪ್ರಾರ್ಥನೆ ಮಾಡುತ್ತಿದ್ದರು. ಆದರೆ ಅವರ ಪ್ರಾರ್ಥನೆಗೆ ಫಲ ದೊರೆತಿಲ್ಲ. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು ತಂದೆ ಮತ್ತು ಮಗ ಸಹ ಕೊನೆಯುಸಿರೆಳೆದಿದ್ದಾರೆ.

ಗಣೇಶ ಹಬ್ಬದಂದೇ ನಡೆದಿತ್ತು ಘನಘೋರ ದುರಂತ

ಸೆಪ್ಟೆಂಬರ್ 14ರ ಸೋಮವಾರ ರಾತ್ರಿ ಗಣೇಶೋತ್ಸವ ಹಬ್ಬದ ಸಂಭ್ರಮದ ನಡುವೆಯೇ ಬೆಳಗಾವಿ ನಗರದ ಚವ್ಹಾಟ ಗಲ್ಲಿಯ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಏಕಾಏಕಿ ಫ್ರಿಡ್ಜ್ ಸ್ಫೋಟಗೊಂಡಿತ್ತು. ಈ ಭೀಕರ ಅವಘಡದಲ್ಲಿ ಒಂದೇ ಕುಟುಂಬದ ಶಾರದಾ, ಪ್ರಿಯಾ  ಗಂಗಾ ಹಾಗೂ ಭಾರತಿ ದಮೋನೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಸಂಭ್ರಮ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: ಬೆಳಗಾವಿ: ಗಣೇಶ ಚತುರ್ಥಿ ದಿನವೇ ಭೀಕರ ಅಗ್ನಿ ಅವಘಡ, ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಗಣೇಶ ಪ್ರತಿಷ್ಠಾಪಿಸಿ  ರಾತ್ರಿ ಊಟ ಮಾಡಿ ಸಂಭ್ರಮಿಸಿ ನಿದ್ರೆಗೆ ಜಾರಿದ್ದ ಕುಟುಂಬಸ್ಥರು ಬೆಳಗಾಗುವಷ್ಟರಲ್ಲಿ ಸುಟ್ಟ ಭಸ್ಮವಾಗಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಸೆಡ್‌ನಲ್ಲಿ ವಾಸವಿದ್ದ ದಮೋನೆ ಕುಟುಂಬದ ನಾಲ್ವರು ಅಗ್ನಿ ಅವಘಡಕ್ಕೆ ಉಸಿರು ಚೆಲ್ಲಿದ್ದರು. ಶಾರ್ಟ್ ಸರ್ಕ್ಯೂಟ್, ಫ್ರಿಡ್ಜ್‌ ಸ್ಫೋಟಗೊಂಡು ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿತ್ತು.

ಇದನ್ನೂ ಓದಿ: ಗಣೇಶ ಹಬ್ಬದ ಬೆನ್ನಲ್ಲೇ ಸೂತಕದ ಛಾಯೆ: ಕರ್ನಾಟಕದ ವಿವಿಧೆಡೆ ಪ್ರತ್ಯೇಕ ಅವಘಡಗಳಲ್ಲಿ 12 ಮಂದಿ ಸಾವು

ಬೆಂಕಿಯ ಕೆನ್ನಾಲೆಗೆ ಸಿಲುಕಿದ ಎಲ್ಲರೂ ಕೂಗಾಡಿದ್ದಾರೆ. ತಕ್ಷಣವೇ ಎದ್ದು ಬಂದ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಗಜಾನನ ದಮೋನೆ ಹಾಗೂ ರೋಷನ್ ದಮೋನೆ (21) ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಬೆಂಕಿ‌ ನಂದಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು