AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ಕಡಿಮೆಯಾಗಲಿದೆ: ಹೆಸ್ಕಾಂ ಎಂಡಿ

ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ಎರಡು ತಿಂಗಳು ಮಾತ್ರ ಇರುತ್ತದೆ. ಬಳಿಕ ಕಡಿಮೆಯಾಗಲಿದೆ ಎಂದು ಹೆಸ್ಕಾಂ ಎಂಡಿ ಮೊಹಮ್ಮದ್ ರೋಷನ್ ಹೇಳಿದ್ದಾರೆ. ಕೈಗಾರಿಕೋದ್ಯಮಿಗಳ ಜೊತೆಗಿನ ಸಭೆಯ ಬಳಿಕ ಈ ಹೇಳಿಕೆ ನೀಡಿದ್ದಾರೆ.

ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ಕಡಿಮೆಯಾಗಲಿದೆ: ಹೆಸ್ಕಾಂ ಎಂಡಿ
ಎರಡು ತಿಂಗಳ ನಂತರ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ಕಡಿಮೆಯಾಗಲಿದೆImage Credit source: Reuters
Rakesh Nayak Manchi
Rakesh Nayak Manchi|

Updated on:Jun 13, 2023 | 8:53 PM

Share

ಬೆಳಗಾವಿ: ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ಎರಡು ತಿಂಗಳು ಮಾತ್ರ ಇರುತ್ತದೆ. ಬಳಿಕ ಕಡಿಮೆಯಾಗಲಿದೆ ಎಂದು ಹೆಸ್ಕಾಂ (HESCOM) ಎಂಡಿ ಮೊಹಮ್ಮದ್ ರೋಷನ್ ಹೇಳಿದ್ದಾರೆ. ವಿದ್ಯುತ್ ದರ ಹೆಚ್ಚಳ ವಿರೋಧಿಸಿ ಬೆಳಗಾವಿಯಲ್ಲಿ ಧರಣಿ ನಡೆಸುತ್ತಿರುವ ಕೈಗಾರಿಕೋದ್ಯಮಿಗಳ ಜೊತೆಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಬಿಲ್ ಪಾವತಿ ಬಗ್ಗೆ ಕೈಗಾರಿಕೋದ್ಯಮ ಮುಖಂಡರು ಚರ್ಚೆ ಮಾಡಿದ್ದಾರೆ. ಇದಕ್ಕೆ ಸೂಕ್ತ ಪರಿಹಾರ ಹುಡುಕಿದ್ದು ಅದರಂತೆ ಬಿಲ್ ಪಾವತಿಗೆ ಅವಕಾಶ ನೀಡಲಾಗುವುದು. ಯಾವ ರೀತಿ ಪರಿಹಾರ ಕೊಡಬಹುದು ಎಂದು ಮತ್ತೆ ಸಭೆ ಮಾಡುತ್ತೇನೆ ಎಂದರು.

ಸಮಸ್ಯೆ ಪರಿಹಾರದ ಬಗ್ಗೆ ಮೇಲ್ಮಟ್ಟದಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ. ನಾಳೆ ಅಥವಾ ನಾಡಿದ್ದು ಸುದೀರ್ಘ ಚರ್ಚೆ ನಡೆಸಿ ನಮಗೆ‌ ನಿರ್ದೇಶನ ನೀಡಬಹುದು ಎಂದು ಹೇಳಿದ ಹೆಸ್ಕಾಂ ಎಂಡಿ, ಎಫ್‌ಪಿಪಿಸಿಎ ಶುಲ್ಕ ಅಂತಾರಾಷ್ಟ್ರೀಯ ಟ್ರೆಂಡ್ಸ್ ಮೇಲೆ ಆಧಾರಿತವಾಗಿರುತ್ತದೆ. ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ಕಡಿಮೆ ಆಗುವ ಸಾಧ್ಯತೆ ಇದೆ. ಪರಿಹಾರ ಕಂಡುಕೊಳ್ಳಲು ಮೇಲ್ಮಟ್ಟದಲ್ಲಿ ಗಂಭೀರ ಚರ್ಚೆಗಳು ಆಗುತ್ತಿವೆ. ಅವರು ಕೊಟ್ಟ ಪರಿಹಾರದಂತೆ ಜಾರಿ ಮಾಡಲು ಸಿದ್ಧರಿದ್ದೇವೆ. ಎಲ್ಲರೂ ಬಿಲ್ ಕಟ್ಟಿ, ನಾವು ವಿದ್ಯುತ್ ಉತ್ಪಾದಕರಿಗೆ ಹಣ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ನಾವು ನಷ್ಟ ಮಾಡಿ ನಿಮ್ಮನ್ನು ಲಾಭದಲ್ಲಿ ಇಡಬೇಕಾ: ಬಿಲ್ ಕಟ್ಟಿ ಎಂದ ಹೆಸ್ಕಾಂ ಎಂಡಿಗೆ ಕೈಗಾರಿಕೋದ್ಯಮಿಗಳ ಪ್ರಶ್ನೆ

ವಿದ್ಯುತ್ ಬಿಲ್ ಆನ್‌ಲೈನ್ ಪೇಮೆಂಟ್ ಸಮಸ್ಯೆ ವಿಚಾರವಾಗಿ ಮಾತನಾಡಿದ ಅವರು, ಸಾಫ್ಟ್‌ವೇರ್ ಬದಲಾವಣೆ ಹಿನ್ನೆಲೆ ಆನ್‌ಲೈನ್ ಪೇಮೆಂಟ್ ಆಗುತ್ತಿಲ್ಲ. ಹೆಸ್ಕಾಂ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೇಲೆ ಕ್ಲಿಕ್ ಮಾಡಿ ಕಟ್ಟಬಹುದು. ಕೆಇಆರ್‌ಸಿ ಆದೇಶ ನೀಡಿದ ದಿನದಿಂದ ಪರಿಷ್ಕೃತ ದರ ಅನ್ವಯವಾಗಿದೆ ಎಂದರು.

ಮಹಾರಾಷ್ಟ್ರದಲ್ಲಿ ದರ ಕಡಿಮೆ ಎಂದು ಕೈಗಾರಿಕೋದ್ಯಮಿಗಳ ಹೇಳಿಕೆ ವಿಚಾರವಾಗಿ ಮಾತನಾಡಿದ ಮೊಹಮ್ಮದ್ ರೋಷನ್, ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಕಡಿಮೆಯಿದೆ. ಫಿಕ್ಸಡ್ ಚಾರ್ಜಸ್, ಎನರ್ಜಿ ಚಾರ್ಜಸ್ ಕರ್ನಾಟಕದಲ್ಲಿ ಕಡಿಮೆ ಇದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:51 pm, Tue, 13 June 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ