ಬೆಳಗಾವಿಯಲ್ಲಿ ಗ್ಯಾಸ್ ಪೈಪ್ ಲೈನ್ ಒಡೆದು ಅನಿಲ ಸೋರಿಕೆ

ಬೆಳಗಾವಿ: ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆಯಾಗಿರುವ ಘಟನೆ ಎಸ್‌ಪಿಎಂ ರಸ್ತೆಯಲ್ಲಿ ಸಂಭವಿಸಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯ ವೇಳೆ ಈ ಅವಘಡ ಸಂಭವಿಸಿದೆ. 8 ದಿನಗಳ ಹಿಂದೆಯಷ್ಟೇ ಗ್ಯಾಸ್ ಪೈಪ್‌ಲೈನ್ ಅಳವಡಿಕೆ ಮಾಡಲಾಗಿತ್ತು. ಸುಮಾರು ಅರ್ಧಗಂಟೆ ಕಾಲ ಅನಿಲ ಸೋರಿಕೆಯಾಗಿದೆ. ಆಗ ಸ್ಥಳೀಯರ ಮಾಹಿತಿ ಮೇರೆಗೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಗ್ಯಾಸ್ ಪೈಪ್‌ಲೈನ್ ದುರಸ್ತಿ ಮಾಡಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆ […]

ಬೆಳಗಾವಿಯಲ್ಲಿ ಗ್ಯಾಸ್ ಪೈಪ್ ಲೈನ್ ಒಡೆದು ಅನಿಲ ಸೋರಿಕೆ
ಸಾಧು ಶ್ರೀನಾಥ್​

Updated on: Dec 25, 2019 | 11:14 AM

ಬೆಳಗಾವಿ: ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆಯಾಗಿರುವ ಘಟನೆ ಎಸ್‌ಪಿಎಂ ರಸ್ತೆಯಲ್ಲಿ ಸಂಭವಿಸಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯ ವೇಳೆ ಈ ಅವಘಡ ಸಂಭವಿಸಿದೆ. 8 ದಿನಗಳ ಹಿಂದೆಯಷ್ಟೇ ಗ್ಯಾಸ್ ಪೈಪ್‌ಲೈನ್ ಅಳವಡಿಕೆ ಮಾಡಲಾಗಿತ್ತು.

ಸುಮಾರು ಅರ್ಧಗಂಟೆ ಕಾಲ ಅನಿಲ ಸೋರಿಕೆಯಾಗಿದೆ. ಆಗ ಸ್ಥಳೀಯರ ಮಾಹಿತಿ ಮೇರೆಗೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಗ್ಯಾಸ್ ಪೈಪ್‌ಲೈನ್ ದುರಸ್ತಿ ಮಾಡಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆ ಆಗುತ್ತಿರುವ ವಿಡಿಯೋ ವೈರಲ್ ಆಗಿದೆ. ಅಳವಡಿಸಿದ ಒಂದೇ ವಾರದಲ್ಲಿ ಗ್ಯಾಸ್ ಪೈಪ್‌ಲೈನ್ ಹಾನಿಯಾದ ಹಿನ್ನೆಲೆ ಇನ್ನಷ್ಟು ಆಳದಲ್ಲಿ‌ ಪೈಪ್‌ಲೈನ್‌ ಅಳವಡಿಕೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ.

Published On - 9:29 am, Wed, 25 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us