AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯಮಟ್ಟ ಮೀರಿ ಹರಿಯುತ್ತಿರುವ ಘಟಪ್ರಭಾ ನದಿ: ಪ್ರವಾಹದ ಆತಂಕದಲ್ಲಿ ನದಿ ಪಾತ್ರದ ಜನ, ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಸೂಚನೆ

ಪಶ್ಚಿಮ ‌ಘಟ್ಟ ಪ್ರದೇಶದಲ್ಲಿ ಬಿಟ್ಟೂಬಿಡದೇ ಮಳೆ ಸುರಿಯುತ್ತಿದ್ದು, ಜಲಾಶಯದಿಂದ 27 ಸಾವಿರ ಕ್ಯುಸೆಕ್ ನೀರು ಘಟಪ್ರಭಾ ನದಿಗೆ ಬಿಡುಗಡೆ ಮಾಡಲಾಗಿದೆ.

ಅಪಾಯಮಟ್ಟ ಮೀರಿ ಹರಿಯುತ್ತಿರುವ ಘಟಪ್ರಭಾ ನದಿ: ಪ್ರವಾಹದ ಆತಂಕದಲ್ಲಿ ನದಿ ಪಾತ್ರದ ಜನ, ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಸೂಚನೆ
ಅವರಾದಿ - ಮಹಾಲಿಂಗಪುರ ಸಂಪರ್ಕ ಕಲ್ಪಿಸುವ ಬ್ಯಾರೇಜ್ ಮುಳುಗಡೆ
TV9 Web
| Edited By: |

Updated on: Sep 12, 2022 | 11:13 AM

Share

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಅಪಾಯಮಟ್ಟ ಮೀರಿ ಘಟಪ್ರಭಾ ನದಿ ಹರಿಯುತ್ತಿದೆ. ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ-ಮಹಾಲಿಂಗಪುರ ಮಾರ್ಗದ ಬ್ಯಾರೇಜ್ ಮುಳುಗಡೆಯಾಗಿದೆ. ಬಾಗಲಕೋಟ ಹಾಗೂ ಬೆಳಗಾವಿ ಸಂಪರ್ಕ ಕಲ್ಪಿಸುವ ಬ್ರಿಡ್ಜ್ ಕಮ್ ಬ್ಯಾರೇಜ್​ ಮುಳುಗಿದೆ. ಬ್ಯಾರೇಜ್ ಮುಳುಗಡೆಯಿಂದಾಗಿ ಜಮೀನುಗಳಿಗೆ ನೀರು ನುಗ್ಗಿದ್ದು, ಕಬ್ಬು, ಮೆಕ್ಕೆಜೋಳ ಸೇರಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ನಿರಂತರ ಮಳೆಯಿಂದ ನದಿಪಾತ್ರದ ರೈತರು ಕಂಗೆಟ್ಟಿದ್ದಾರೆ. ಇನ್ನೂ ರಬಕವಿ-ಬನಹಟ್ಟಿ ತಾಲ್ಲೂಕು, ಮುಧೋಳ ತಾಲ್ಲೂಕಾ ಘಟಪ್ರಭಾ ವ್ಯಾಪ್ತಿಯಲ್ಲಿ ಪ್ರವಾಹದ ಆತಂಕ ಶುರುವಾಗಿದ್ದು, ಎಚ್ಚರಿಕೆಯಿಂದಿರಲು ತಾಲ್ಲೂಕಾಡಳಿತದಿಂದ ಸೂಚನೆ ನೀಡಲಾಗಿದೆ. ಬಾಗಲಕೋಟೆ ಜಿಲ್ಲೆಯ ಮತ್ತು ಮುಧೋಳ ತಾಲ್ಲೂಕಿನ 35 ಹಳ್ಳಿಗಳು, ರಬಕವಿ-ಬನಹಟ್ಟಿ ತಾಲ್ಲೂಕಿನ ಹತ್ತಕ್ಕೂ ಹೆಚ್ಚು ಹಳ್ಳಿಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.

ಘಟಪ್ರಭಾ ನದಿಗೆ 27 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಪಶ್ಚಿಮ ‌ಘಟ್ಟ ಪ್ರದೇಶದಲ್ಲಿ ಬಿಟ್ಟೂಬಿಡದೇ ಮಳೆ ಸುರಿಯುತ್ತಿದ್ದು, ಜಲಾಶಯದಿಂದ 27 ಸಾವಿರ ಕ್ಯುಸೆಕ್ ನೀರು ಘಟಪ್ರಭಾ ನದಿಗೆ ಬಿಡುಗಡೆ ಮಾಡಲಾಗಿದೆ. ಘಟಪ್ರಭಾ ನದಿಯಲ್ಲಿ ಒಟ್ಟು 49ಸಾವಿರ ಕ್ಯೂಸೆಕ್ ನೀರು ಹೊರ ಹರಿವಿದ್ದು, ಒಂದೇ ತಿಂಗಳಲ್ಲಿ ಎರಡನೇ ಬಾರಿಗೆ ಗೋಕಾಕ್ ‌ನಗರದ ಉಪ್ಪಾರ ಓಣಿ, ದನದ ಮಾರ್ಕೆಟ್, ಮಟನ್ ಮಾರ್ಕೆಟ್‌ಗೆ ನೀರು ನುಗ್ಗಿದೆ. ಸ್ಥಳೀಯ ನಿವಾಸಿಗಳಲ್ಲಿ ‌ಪ್ರವಾಹ ಆತಂಕದ ಭೀತಿಯಲಿದ್ದಾರೆ.

ವೇದಗಂಗಾ, ದೂದಗಂಗಾ ನದಿ ಅಬ್ಬರಕ್ಕೆ ಸೇತುವೆಗಳು ಜಲಾವೃತ

ಅಪಾಯದ ಮಟ್ಟ ಮೀರಿ ವೇದಗಂಗಾ, ದೂದಗಂಗಾ ನದಿ ಹರಿಯುತ್ತಿವೆ. ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಜತ್ರಾಟ-ಭಿವಶಿ ಸೇತುವೆ ಮುಳುಗಡೆಯಾಗಿದೆ. ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಬೋಜ್ ಸೇತುವೆ ಜಲಾವೃತವಾಗಿದ್ದು, ನಿಪ್ಪಾಣಿ ತಾಲೂಕಿನ ಎರಡು ಸೇತುವೆಗಳು ಇಂದು ಮುಳುಗಡೆಯಾಗಿವೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರ ಸಂಪರ್ಕ ಸೇತುವೆ ಜಲಾವೃತವಾಗಿದ್ದು, ಹಿರಣ್ಯಕೇಶಿ ನದಿಗೆ ಅಡ್ಡಲಾಗಿ ಕಟ್ಟಿರುವ ಹುಕ್ಕೇರಿ ತಾಲೂಕಿನ ಕುರಣಿ-ಕೊಚರಿ ಗ್ರಾಮದ ಸೇತುವೆ ಮುಳುಗಡೆಯಾಗಿದೆ.

ಉಜನಿ ಡ್ಯಾಂನಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ವಿಜಯಪುರ: ಜಿಲ್ಲೆಯ ಭೀಮಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ಉಜನಿ ಡ್ಯಾಂನಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನದಿ ಸುತ್ತಮುತ್ತ ಗ್ರಾಮಗಳಲ್ಲಿ ಜಿಲ್ಲಾಡಳಿತ ಡಂಗುರ ಸಾರಿದ್ದು, ನದಿ ತೀರದಿಂದ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯ ದೇವಣಗಾಂವ, ಶಂಭೆವಾಡ, ಕಡ್ಲೆವಾಡ ಪಿಎ ಗ್ರಾಮಗಳಲ್ಲಿ ಡಂಗುರದ ಮೂಲಕ ಎಚ್ಚರಿಕೆ ನೀಡಲಾಗಿದೆ. ಭೀಮಾ ನದಿ ದಡದಲ್ಲಿ ಅಳವಡಿಸಿದ್ದ ಪಂಪ್​ಸೆಟ್, ವಿದ್ಯುತ್ ಉಪಕರಣ ತೆಗೆದುಕೊಳ್ಳುವಂತೆ ರೈತರಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ