AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಆಣೆ ಪ್ರಮಾಣ ಮಾಡಿಸಿಕೊಂಡು ಗಿಫ್ಟ್ ಪಾಲಿಟಿಕ್ಸ್; ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಧನಂಜಯ ಜಾಧವ್ ವಾಗ್ದಾಳಿ

ಬೆಳಗಾವಿಯಲ್ಲಿ ತೆಂಗಿನಕಾಯಿ ಮೇಲೆ ಆಣೆ ಪ್ರಮಾಣ ಮಾಡಿಸಿ ಮಿಕ್ಸರ್ ಗ್ರೈಂಡರ್ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿ, ಬಿಜೆಪಿ ಮುಖಂಡ ಧನಂಜಯ ಜಾಧವ್ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಆಣೆ ಪ್ರಮಾಣ ಮಾಡಿಸಿಕೊಂಡು ಗಿಫ್ಟ್ ಪಾಲಿಟಿಕ್ಸ್; ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಧನಂಜಯ ಜಾಧವ್ ವಾಗ್ದಾಳಿ
ಬಿಜೆಪಿ ಮುಖಂಡ ಧನಂಜಯ ಜಾಧವ್
TV9 Web
| Edited By: |

Updated on: Jan 09, 2023 | 8:42 AM

Share

ಬೆಳಗಾವಿ: ಮುಂಬರುವ ವಿಧಾನ ಸಭಾ ಚುನಾವಣೆಗೆ(Karnataka Assembly Elections 2023) ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ಶುರು ಮಾಡಿವೆ. ತಮ್ಮ ಮತದಾರರನ್ನು ಸೆಳೆಯಲು ಹೊಸ ಹೊಸ ಆಫರ್​ಗಳ ಮೊರೆ ಹೋಗುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್(Gift Politics) ಬಗ್ಗೆ ಸುದ್ದಿಯಾಗಿತ್ತು. ಆದ್ರೆ ಈಗ ತೆಂಗಿನಕಾಯಿ ಮೇಲೆ ಆಣೆ ಪ್ರಮಾಣ ಮಾಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ವಿರುದ್ಧ ಬಿಜೆಪಿ ಮುಖಂಡ ಧನಂಜಯ ಜಾಧವ್ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ತೆಂಗಿನಕಾಯಿ ಮೇಲೆ ಆಣೆ ಪ್ರಮಾಣ ಮಾಡಿಸಿ ಮಿಕ್ಸರ್ ಗ್ರೈಂಡರ್ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿ, ಬಿಜೆಪಿ ಮುಖಂಡ ಧನಂಜಯ ಜಾಧವ್ ವಾಗ್ದಾಳಿ ನಡೆಸಿದ್ದಾರೆ. ನಿಜವಾದ ಅಭಿವೃದ್ಧಿ ಮಾಡಿದ್ರೆ ಆಣೆ ಪ್ರಮಾಣ ಏಕೆ ಮಾಡಿಸ್ತಿದ್ರಿ? ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚೇಲಾಗಳು ಪ್ರತಿ ಮನೆಗೆ ತೆರಳಿ ಆಣೆ ಮಾಡಿಸುತ್ತಿದ್ದಾರೆ. ಇದಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನರು ವಿರೋಧ ಮಾಡುತ್ತಿದ್ದಾರೆ. ನಮಗೆ ವೋಟ್ ಹಾಕಬೇಕು ಅಂತಾ ಆಣೆ ಮಾಡಿಸುತ್ತಿದ್ದಾರೆ. ಈ ರೀತಿಯ ನೀಚ ರಾಜಕಾರಣ ವಿರೋಧ ಮಾಡುತ್ತಿದ್ದೇನೆ. ಇನ್ನೂರು ರೂ. ವಸ್ತು ನೀಡಿ ವೋಟ್ ಹಾಕಬೇಕೆಂದು ಆಣೆ ಮಾಡಿಸುತ್ತಿದ್ದೀರಾ? ಥೂ ಇಂತಹ ರಾಜಕಾರಣಕ್ಕೆ ಎಂದು ಧನಂಜಯ ಜಾಧವ್ ಕಿಡಿಕಾರಿದ್ದಾರೆ.

ಮತದಾರರ ಬಳಿ ಆಣೆ ಪ್ರಮಾಣ, ಗಿಫ್ಟ್​ ಪಾಲಿಟಿಕ್ಸ್​

ಮತದಾರರನ್ನು ಓಲೈಸಿಕೊಳ್ಳಲು ಚುನಾವಣೆಗೂ ಮುನ್ನವೇ ಕಾಂಗ್ರೆಸ್​ ಗಿಫ್ಟ್​ ಪಾಲಿಟಿಕ್ಸ್​ ಮೊರೆ ಹೋಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​​ ಬೆಂಬಲಿಗರು ಮತದಾರರಿಗೆ ಕುಕ್ಕರ್​, ಗ್ರೈಂಡರ್ ಹಂಚಿಕೆ ಮಾಡುತ್ತಿದ್ದಾರೆ. ಅಲ್ಲದೆ ಗಿಫ್ಟ್ ನೀಡುವ ಮುನ್ನ ಆಣೆ ಮಾಡಿಸಿಕೊಳ್ಳುತ್ತಿದ್ದಾರೆ. ತೆಂಗಿನಕಾಯಿ ಮೇಲೆ ಆಣೆ ಮಾಡಿಸಿಕೊಂಡು ಗಿಫ್ಟ್ ಹಂಚಲಾಗುತ್ತಿದೆ. ಈ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರ ನಡೆಗೆ ಕೆಲಕಡೆ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಸ್ವಾಭಿಮಾನ ಬಹಳ ಮುಖ್ಯ, ನಿಮ್ಮ ಗಿಫ್ಟ್​ ಬೇಡಾ ತೆಗೆದುಕೊಂಡು ಹೋಗಿ ಎಂದು ವಾಪಾಸ್ ಕಳುಹಿಸುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ