AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಆಣೆ ಪ್ರಮಾಣ ಮಾಡಿಸಿಕೊಂಡು ಗಿಫ್ಟ್ ಪಾಲಿಟಿಕ್ಸ್; ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಧನಂಜಯ ಜಾಧವ್ ವಾಗ್ದಾಳಿ

ಬೆಳಗಾವಿಯಲ್ಲಿ ತೆಂಗಿನಕಾಯಿ ಮೇಲೆ ಆಣೆ ಪ್ರಮಾಣ ಮಾಡಿಸಿ ಮಿಕ್ಸರ್ ಗ್ರೈಂಡರ್ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿ, ಬಿಜೆಪಿ ಮುಖಂಡ ಧನಂಜಯ ಜಾಧವ್ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಆಣೆ ಪ್ರಮಾಣ ಮಾಡಿಸಿಕೊಂಡು ಗಿಫ್ಟ್ ಪಾಲಿಟಿಕ್ಸ್; ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಧನಂಜಯ ಜಾಧವ್ ವಾಗ್ದಾಳಿ
ಬಿಜೆಪಿ ಮುಖಂಡ ಧನಂಜಯ ಜಾಧವ್
TV9 Web
| Edited By: |

Updated on: Jan 09, 2023 | 8:42 AM

Share

ಬೆಳಗಾವಿ: ಮುಂಬರುವ ವಿಧಾನ ಸಭಾ ಚುನಾವಣೆಗೆ(Karnataka Assembly Elections 2023) ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ಶುರು ಮಾಡಿವೆ. ತಮ್ಮ ಮತದಾರರನ್ನು ಸೆಳೆಯಲು ಹೊಸ ಹೊಸ ಆಫರ್​ಗಳ ಮೊರೆ ಹೋಗುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್(Gift Politics) ಬಗ್ಗೆ ಸುದ್ದಿಯಾಗಿತ್ತು. ಆದ್ರೆ ಈಗ ತೆಂಗಿನಕಾಯಿ ಮೇಲೆ ಆಣೆ ಪ್ರಮಾಣ ಮಾಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ವಿರುದ್ಧ ಬಿಜೆಪಿ ಮುಖಂಡ ಧನಂಜಯ ಜಾಧವ್ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ತೆಂಗಿನಕಾಯಿ ಮೇಲೆ ಆಣೆ ಪ್ರಮಾಣ ಮಾಡಿಸಿ ಮಿಕ್ಸರ್ ಗ್ರೈಂಡರ್ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿ, ಬಿಜೆಪಿ ಮುಖಂಡ ಧನಂಜಯ ಜಾಧವ್ ವಾಗ್ದಾಳಿ ನಡೆಸಿದ್ದಾರೆ. ನಿಜವಾದ ಅಭಿವೃದ್ಧಿ ಮಾಡಿದ್ರೆ ಆಣೆ ಪ್ರಮಾಣ ಏಕೆ ಮಾಡಿಸ್ತಿದ್ರಿ? ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚೇಲಾಗಳು ಪ್ರತಿ ಮನೆಗೆ ತೆರಳಿ ಆಣೆ ಮಾಡಿಸುತ್ತಿದ್ದಾರೆ. ಇದಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನರು ವಿರೋಧ ಮಾಡುತ್ತಿದ್ದಾರೆ. ನಮಗೆ ವೋಟ್ ಹಾಕಬೇಕು ಅಂತಾ ಆಣೆ ಮಾಡಿಸುತ್ತಿದ್ದಾರೆ. ಈ ರೀತಿಯ ನೀಚ ರಾಜಕಾರಣ ವಿರೋಧ ಮಾಡುತ್ತಿದ್ದೇನೆ. ಇನ್ನೂರು ರೂ. ವಸ್ತು ನೀಡಿ ವೋಟ್ ಹಾಕಬೇಕೆಂದು ಆಣೆ ಮಾಡಿಸುತ್ತಿದ್ದೀರಾ? ಥೂ ಇಂತಹ ರಾಜಕಾರಣಕ್ಕೆ ಎಂದು ಧನಂಜಯ ಜಾಧವ್ ಕಿಡಿಕಾರಿದ್ದಾರೆ.

ಮತದಾರರ ಬಳಿ ಆಣೆ ಪ್ರಮಾಣ, ಗಿಫ್ಟ್​ ಪಾಲಿಟಿಕ್ಸ್​

ಮತದಾರರನ್ನು ಓಲೈಸಿಕೊಳ್ಳಲು ಚುನಾವಣೆಗೂ ಮುನ್ನವೇ ಕಾಂಗ್ರೆಸ್​ ಗಿಫ್ಟ್​ ಪಾಲಿಟಿಕ್ಸ್​ ಮೊರೆ ಹೋಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​​ ಬೆಂಬಲಿಗರು ಮತದಾರರಿಗೆ ಕುಕ್ಕರ್​, ಗ್ರೈಂಡರ್ ಹಂಚಿಕೆ ಮಾಡುತ್ತಿದ್ದಾರೆ. ಅಲ್ಲದೆ ಗಿಫ್ಟ್ ನೀಡುವ ಮುನ್ನ ಆಣೆ ಮಾಡಿಸಿಕೊಳ್ಳುತ್ತಿದ್ದಾರೆ. ತೆಂಗಿನಕಾಯಿ ಮೇಲೆ ಆಣೆ ಮಾಡಿಸಿಕೊಂಡು ಗಿಫ್ಟ್ ಹಂಚಲಾಗುತ್ತಿದೆ. ಈ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರ ನಡೆಗೆ ಕೆಲಕಡೆ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಸ್ವಾಭಿಮಾನ ಬಹಳ ಮುಖ್ಯ, ನಿಮ್ಮ ಗಿಫ್ಟ್​ ಬೇಡಾ ತೆಗೆದುಕೊಂಡು ಹೋಗಿ ಎಂದು ವಾಪಾಸ್ ಕಳುಹಿಸುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ