AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಆವರಣದಲ್ಲಿದ್ದ ಸರಸ್ವತಿ ಮೂರ್ತಿ ಧ್ವಂಸಗೊಳಿಸಿದ ಕಿಡಿಗೇಡಿಗಳು; ಆಡಳಿತ ಮಂಡಳಿಯಿಂದ ದೂರು ದಾಖಲು

ಘಟನೆ ಬಗ್ಗೆ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ. ಸದ್ಯ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಸಂಜೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶಾಲೆ ಆವರಣದಲ್ಲಿದ್ದ ಸರಸ್ವತಿ ಮೂರ್ತಿ ಧ್ವಂಸಗೊಳಿಸಿದ ಕಿಡಿಗೇಡಿಗಳು; ಆಡಳಿತ ಮಂಡಳಿಯಿಂದ ದೂರು ದಾಖಲು
ಸರಸ್ವತಿ ಮೂರ್ತಿ ಧ್ವಂಸ
TV9 Web
| Edited By: |

Updated on:Mar 25, 2022 | 6:22 PM

Share

ಬೆಳಗಾವಿ: ಶಾಲೆ ಆವರಣದಲ್ಲಿದ್ದ ಸರಸ್ವತಿ ಮೂರ್ತಿಯನ್ನು(Idol) ಕಿಡಿಗೇಡಿಗಳು ಭಗ್ನಗೊಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದಲ್ಲಿ ನಡೆದಿದೆ. ಸರಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ‌(School) ನಿನ್ನೆ ಸಂಜೆ ಸರಸ್ವತಿ ಮೂರ್ತಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಘಟನೆ ಬಗ್ಗೆ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ(Police) ದೂರು ನೀಡಿದೆ. ಸದ್ಯ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಸಂಜೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶಿವಮೊಗ್ಗ: ಇತ್ತೀಚೆಗೆ ಜಿಲ್ಲೆಯ ಶಾಲೆವೊಂದರಲ್ಲಿ ಕೂಡ ಇಂತಹದ್ದೇ ಘಟನೆ ನಡೆದಿತ್ತು

ಕಲೆ ಮತ್ತು ಸಾಂಸ್ಕೃತಿಕ ಜಿಲ್ಲೆ ಶಿವಮೊಗ್ಗದಲ್ಲಿ ಪ್ರಜ್ಞಾವಂತ ಮಂದಿ ತಲೆತಗ್ಗಿಸುವಂತಹ ದಾರುಣ ಘಟನೆ ನಡೆದಿತ್ತು. ಕನ್ನಡ ಶಾಲೆಯ ಮೇಲೆ ಪುಡಿ ರೌಡಿಗಳು ಅಟ್ಟಹಾಸಗೈದಿದ್ದು ಶಾಲಾ ಕೈದೋಟದಲ್ಲಿ ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿ ಮತ್ತು ಸರಸ್ವತಿ ದೇವಿಯ ವಿಗ್ರಹಗಳನ್ನು ಧ್ವಂಸ ಮಾಡಿದ್ದರು. ತೀರ್ಥಹಳ್ಳಿ  ತಾಲೂಕಿನ ಹಾರೊಗೊಳಿಗೆ ಪ್ರಾಥಮಿಕ ಶಾಲೆಯ ಆವರಣಕ್ಕೆ ನುಗ್ಗಿದ ದುಷ್ಕರ್ಮಿಗಳು, ಶಾಲಾ ಹಿಂಭಾಗದಲ್ಲಿರುವ ಕೈತೋಟವನ್ನು ನಾಶಪಡಿಸಿದ್ದಾರೆ.

ಈ ಶಾಲೆಯು ಬಡ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಜ್ಞಾನ ದಾಹವನ್ನು ನೀಗಿಸುತ್ತಿರುವ ಈ ಶಾಲೆಯಾಗಿದೆ. ಆಲೆಯ ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ತಮ್ಮ ಕೈಲಾದ ಮಟ್ಟಿಗೆ ಶಾಲೆಯ ಅಭಿವೃದ್ಧಿಗೆ ಶ್ರಮಿಸಿ, ಕೈತೋಟ, ಸರಸ್ವತಿ ದೇವಿ, ಮಹಾತ್ಮ ಗಾಂಧೀಜಿ ಮತ್ತು ವಿವೇಕಾನಂದರ ವಿಗ್ರಹಗಳನ್ನು ಸ್ಥಾಪಿಸಿ ಮಕ್ಕಳಿಗೆ ದೇಶಾಭಿಮಾನ ಮೂಡುವಲ್ಲಿ ಅವಿರತವಾಗಿ ಶ್ರಮವಹಿಸುತ್ತಿದ್ದರು. ಶಾಲಾ ಉಪಾಧ್ಯಾಯರುಗಳು ಮಕ್ಕಳಿಗೆ ಕೈತೋಟದ ಅರಿವನ್ನು ಮೂಡಿಸಿದ್ದರು.

ಆದರೆ ಕೆಲ ಕಿಡಿಗೇಡಿಗಳು ದುಷ್ಕೃತ್ಯದ ಫಲವಾಗಿ ಹಾರೊಗೊಳಿಗೆ ಶಾಲಾ ಆವರಣದಲ್ಲಿ ಈಗ ಆತಂಕದ ಛಾಯೆ ಮೂಡಿದೆ. ಇಂತಹ ದುಷ್ಕೃತ್ಯಕ್ಕೆ ಹಾರೊಗೊಳಿಗೆ ಮತ್ತು ಅದರ ಸುತ್ತಮುತ್ತ ಇರುವ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವೆ ಕಾರಣವೆಂದು ಹೇಳಲಾಗುತ್ತಿದೆ. ರಾತ್ರಿ ಹೊತ್ತು ಕುಡಿದು ಗಲಾಟೆ ಮಾಡುವುದು ಹಳ್ಳಿಯಲ್ಲಿ ನಿರಂತರವಾಗಿ ನಡೆಯುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಇಂತಹ ದುಷ್ಕೃತ್ಯವನ್ನು ಎಸಗಿದ ದುಷ್ಕರ್ಮಿಗಳ ವಿರುದ್ಧ ಹಾರೊಗೊಳಿಗೆ ಗ್ರಾಮ ಪಂಚಾಯಿತಿ ಮತ್ತು ಶಾಲಾ ಮಂಡಳಿ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಇದನ್ನೂ ಓದಿ: ಢಾಕಾದಲ್ಲಿ ಇಸ್ಕಾನ್ ದೇವಾಲಯ ಧ್ವಂಸಗೊಳಿಸಿದ ದುಷ್ಕರ್ಮಿಗಳ ಗುಂಪು; ಮೂವರು ಭಕ್ತರಿಗೆ ಗಾಯ

ಮುಸ್ಲಿಮರಿಗೆ ಯಾವುದೇ ವಸ್ತು ಮಾರಾಟ ಮಾಡುವುದಿಲ್ಲ ಎಂದು ಹಿಂದೂ ವ್ಯಾಪಾರಿಗಳ ಅಂಗಡಿ ವಿರುದ್ಧ ತಪ್ಪು ಸಂದೇಶ; ದೂರು ದಾಖಲು

Published On - 6:14 pm, Fri, 25 March 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು