AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮೃತಪಟ್ಟ ಚಿನ್ನದ ಅಂಗಡಿ ಮಾಲೀಕ: ತಮ್ಮ ನಿಂದಲೇ ಕುಟುಂಬಕ್ಕೆ 4 ಕೋಟಿ ರೂ. ಮೋಸ; ಗ್ರಾಹಕರು ಕಂಗಾಲು

ಅಣ್ಣ ಸಾವನ್ನಪ್ಪಿದ ಬಳಿಕ ಚಿನ್ನದ ಅಂಗಡಿಯಲ್ಲಿನ ಚಿನ್ನ ಮತ್ತು ಹಣ ಲೂಟಿ ಮಾಡಿ ಅರವಿಂದ್ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಜುಲೈ ಐದರಂದು ಪುತ್ರಿ ಮತ್ತು ಸಂಬಂಧಿಕರೊಂದಿಗೆ ಚಿನ್ನದ ಅಂಗಡಿಗೆ ಬಂದಿದ್ದ ಅರವಿಂದ್ ಚಿನ್ನ ದೋಚಿದ್ದಾರೆ ಎನ್ನಲಾಗಿದೆ.

ಕೊರೊನಾದಿಂದ ಮೃತಪಟ್ಟ ಚಿನ್ನದ ಅಂಗಡಿ ಮಾಲೀಕ: ತಮ್ಮ ನಿಂದಲೇ ಕುಟುಂಬಕ್ಕೆ 4 ಕೋಟಿ ರೂ. ಮೋಸ; ಗ್ರಾಹಕರು ಕಂಗಾಲು
ಅನಿಲ್​ ಮತ್ತು ಅರವಿಂದ್
TV9 Web
| Edited By: |

Updated on:Sep 17, 2021 | 7:51 AM

Share

ಬೆಳಗಾವಿ: ಕೊವಿಡ್​ನಿಂದ ಮೃತಪಟ್ಟ ಚಿನ್ನದ ಅಂಗಡಿ ಮಾಲೀಕನ ಕುಟುಂಬಕ್ಕೆ ತಮ್ಮನಿಂದಲೇ ಮೋಸವಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಚಿನ್ನದಂಗಡಿಯಲ್ಲಿದ್ದ 4 ಕೋಟಿ ಮೌಲ್ಯದ ಚಿನ್ನ ಮತ್ತು ಹಣದೊಂದಿಗೆ ತಮ್ಮ ಪರಾರಿಯಾಗಿದ್ದು, ಈ ವೇಳೆ ಅಂಗಡಿ ಬಾಗಿಲಿಗೆ ಅಣ್ಣನ ಪುತ್ರಿಯ ಫೋನ್ ನಂಬರ್ ಅಂಟಿಸಿ ಹೋಗಿದ್ದಾರೆ.

ಬೆಳಗಾವಿಯ ಪ್ರತಿಷ್ಠಿತ ಮುತಕೇಕರ್ ಜ್ಯುವೆಲರ್ಸ್‌ ಮಾಲೀಕ ಅನಿಲ್ ಮುತಕೇಕರ್ ಕೊವಿಡ್​ನಿಂದಾಗಿ ಮೃತಪಟ್ಟಿದ್ದಾರೆ. ಆದರೆ ಅನಿಲ್ ತಮ್ಮ ಅರವಿಂದ್​ ಮುತಕೇಕರ್ ಅಂಗಡಿಯಲ್ಲಿದ್ದ ಚಿನ್ನ ಹೊತ್ತು ಪರಾರಿಯಾಗಿದ್ದಾರೆ. ಲಾಕ್‌ಡೌನ್‌ ವೇಳೆ ನಡೆದ ಘಟನೆ ಅನ್‌ಲಾಕ್ ಬಳಿಕ ಬಯಲಾಗಿದ್ದು, ಚಿನ್ನದಂಗಡಿಗೆ ಆಭರಣ ಮಾಡಿಸಲು ಕೊಟ್ಟಿದ್ದ ಗ್ರಾಹಕರು ಸದ್ಯ ಕಂಗಾಲಾಗಿದ್ದಾರೆ.

ಮುತಕೇಕರ್ ಜ್ಯುವೆಲ್ಲರ್ಸ್, ಎಸ್.ವಿ.ಮುತಕೇಕರ್ & ಕಂ. ಹೆಸರಲ್ಲಿ ಎರಡು ಪ್ರತ್ಯೇಕ ಮಳಿಗೆಗಳಿವೆ. ಪಾರ್ಟ್​ನರ್​ಶಿಪ್​ನಲ್ಲಿ ಅನಿಲ್ ಮತ್ತು ಅರವಿಂದ್​ ಚಿನ್ನದ ಅಂಗಡಿ ನಡೆಸುತ್ತಿದ್ದರು. ಜೂನ್ 11ರಂದು ಕೊವಿಡ್​ನಿಂದ ಅನಿಲ್ ಮುತಕೇಕರ್ ಮೃತಪಟ್ಟಿದ್ದಾರೆ.

ಅಣ್ಣ ಸಾವನ್ನಪ್ಪಿದ ಬಳಿಕ ಚಿನ್ನದ ಅಂಗಡಿಯಲ್ಲಿನ ಚಿನ್ನ ಮತ್ತು ಹಣ ಲೂಟಿ ಮಾಡಿ ಅರವಿಂದ್ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಜುಲೈ ಐದರಂದು ಪುತ್ರಿ ಮತ್ತು ಸಂಬಂಧಿಕರೊಂದಿಗೆ ಚಿನ್ನದ ಅಂಗಡಿಗೆ ಬಂದಿದ್ದ ಅರವಿಂದ್ ಚಿನ್ನ ದೋಚಿದ್ದಾರೆ ಎನ್ನಲಾಗಿದೆ. ಅಲ್ಲದೆ ಸಂಬಂಧಿಗಳ ಜೊತೆ ಅರವಿಂದ್ ಮುತಕೇಕರ್ ಚಿನ್ನದಂಗಡಿ ನುಗ್ಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸಿಸಿ ಕ್ಯಾಮರಾ ದೃಶ್ಯಾವಳಿ ಸಮೇತ ಖಡೇಬಜಾರ್ ಠಾಣೆಗೆ ಅನಿಲ್ ಮುತಕೇಕರ್ ಪುತ್ರಿ ಸಂಪದಾ ದೂರು ನೀಡಿದ್ದಾರೆ. ಆದರೆ ಆಭರಣ ಮಾಡಿಸಲು ಚಿನ್ನ ನೀಡಿದ ಗ್ರಾಹಕರು ಮಾತ್ರ ಎರಡು ತಿಂಗಳಿಂದ ಪೊಲೀಸ್ ಠಾಣೆಗೆ ಅಲೆದಾಡುವಂತಾಗಿದೆ.

ಇದನ್ನೂ ಓದಿ: ಮೈಸೂರು ಚಿನ್ನದಂಗಡಿ ದರೋಡೆ, ಶೂಟೌಟ್ ಆರೋಪಿಗಳ ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನ

ಮಡಿವಾಳ: ವೈದ್ಯ ದಂಪತಿ ಮನೆಯಲ್ಲಿ ಕೆಲಸ ಮಾಡುವವರಿಂದಲೇ ಚಿನ್ನಾಭರಣ ಕಳ್ಳತನ; ಆರೋಪಿ ಅಮ್ಮು ಬಂಧನ

Published On - 7:41 am, Fri, 17 September 21

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?