AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಗೂಗಲ್ ಮ್ಯಾಪ್ ನಂಬಿ ಖಾನಾಪುರ ಕಾಡಿನಲ್ಲಿ ಮರೆಯಾದ ಕಾರು! ಆಮೇಲೇನಾಯ್ತು?

ಗೂಗಲ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಪ್ರಯಾಣಿಸಿ ಎಲ್ಲೆಲ್ಲೋ ತಲುಪಿ ಯಡವಟ್ಟಾಗುವ ಅನೇಕ ಉದಾಹರಣೆಗಳು ನಮ್ಮ ಮುಂದಿವೆ. ಗೂಗಲ್ ಮ್ಯಾಪ್ ತೋರಿಸಿದ ಮಾರ್ಗದಲ್ಲಿ ಪ್ರಯಾಣಿಸಿ ನಿರ್ಮಾಣ ಹಂತದ ಸೇತುವೆಯಿಂದ ಕಾರು ಬಿದ್ದು ಮೂವರು ಮೃತಪಟ್ಟ ಘಟನೆ ಕಳೆದ ವಾರ ಉತ್ತರ ಪ್ರದೇಶದಲ್ಲಿ ಸಂಭವಿಸಿತ್ತು. ಇದೀಗ ಬೆಳಗಾವಿಯ ಖಾನಾಪುರ ಕಾಡಿನಲ್ಲಿ ಕಾರೊಂದು ಮರೆಯಾಗಿದೆ. ಆಮೇಲೇನಾಯ್ತು? ವಿವರ ಇಲ್ಲಿದೆ ನೋಡಿ.

ಬೆಳಗಾವಿ: ಗೂಗಲ್ ಮ್ಯಾಪ್ ನಂಬಿ ಖಾನಾಪುರ ಕಾಡಿನಲ್ಲಿ ಮರೆಯಾದ ಕಾರು! ಆಮೇಲೇನಾಯ್ತು?
ಬೆಳಗಾವಿ: ಗೂಗಲ್ ಮ್ಯಾಪ್ ನಂಬಿ ಖಾನಾಪುರ ಕಾಡಿನಲ್ಲಿ ಮರೆಯಾದ ಕಾರು!
Sahadev Mane
| Edited By: |

Updated on: Dec 06, 2024 | 12:08 PM

Share

ಬೆಳಗಾವಿ, ಡಿಸೆಂಬರ್ 6: ಗೂಗಲ್ ಮ್ಯಾಪ್ ತೋರಿಸಿದ ಮಾರ್ಗದಲ್ಲಿ ಪ್ರಯಾಣಿಸಿ ಎಲ್ಲಿಗೋ ತಲುಪಿದ್ದು, ಅಪಘಾತ ಸಂಭವಿಸಿದ ಬಗ್ಗೆ ವರದಿಗಳನ್ನು ನೋಡಿರುತ್ತೇವೆ. ಗೂಗಲ್​ ಮ್ಯಾಪ್ ನಂಬಿ ಕಾರಿನಲ್ಲಿ ಪ್ರಯಾಣಿಸಿದ ಮೂವರು ನಿರ್ಮಾಣ ಹಂತದ ಸೇತುವೆಯಿಂದ ಬಿದ್ದು ಮೃತಪಟ್ಟ ಘಟನೆ ಕಳೆದ ವಾರವಷ್ಟೇ ಉತ್ತರ ಪ್ರದೇಶದ ಬರೇಲಿಯಲ್ಲಿ ಸಂಭವಿಸಿತ್ತು. ಬರೇಲಿಯಿಂದ ಪಿಲಿಭಿತ್‌ಗೆ ಪ್ರಯಾಣಿಸುವ ಮಾರ್ಗದಲ್ಲಿ ಮತ್ತೊಂದು ಇಂಥದ್ದೇ ಘಟನೆ ಸಂಭವಿಸಿ ಪ್ರಯಾಣಿಕರು ಗಾಯಗೊಂಡಿದ್ದರು. ಇದೀಗ ಕರ್ನಾಟಕದ ಬೆಳಗಾವಿಯಲ್ಲಿಯೂ ಗೂಗಲ್ ಮ್ಯಾಪ್ ಯಡವಟ್ಟು ಸಂಭವಿಸಿದೆ.

ಆಂಧ್ರ ಪ್ರದೇಶದಿಂದ ಗೋವಾಕ್ಕೆ ಹೊರಟಿದ್ದ ಮಹಿಳೆಯರು ಸೇರಿದಂತೆ ನಾಲ್ವರಿದ್ದ ಕಾರು ಗೂಗಲ್ ಮ್ಯಾಪ್ ತೋರಿದ ಮಾರ್ಗದಲ್ಲಿ ಪ್ರಯಾಣಿಸಿ ದಟ್ಟಾರಣ್ಯ ಸೇರಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಸದ್ಯ ಕಾರಿನ ಸಮೇತ ಕಣ್ಮರೆಯಾದವರನ್ನು ಪತ್ತೆ ಮಾಡಿ ರಕ್ಷಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಖಾನಾಪುರದಲ್ಲಿ ನಡೆದಿದ್ದೇನು?

ಆಂಧ್ರ ಪ್ರದೇಶದಿಂದ ಗೋವಾಕ್ಕೆ ತೆರಳುತ್ತಿದ್ದ ಕಾರಿನಲ್ಲಿದ್ದವರು ಗೂಗಲ್ ಮ್ಯಾಪ್ ಹಾಕಿಕೊಂಡಿದ್ದರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಮಾಡಿಗುಂಜಿ ಬಳಿ ಕಾಡಿನಲ್ಲಿ ಕಾರಿನಲ್ಲಿದ್ದವರಿಗೆ ದಾರಿ ತಪ್ಪಿದೆ. ಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ದಾರಿ ತಪ್ಪಿ ಫಜೀತಿಯಾಗಿದೆ. ಮಧ್ಯರಾತ್ರಿ ದಾರಿ ತಪ್ಪಿದ ಪ್ರಯಾಣಿಕರು, ಹತ್ತು ಕಿಲೋಮೀಟರ್ ಕಾಡಿನಲ್ಲಿ ಪ್ರಯಾಣಿಸಿದ್ದರು. ಅಷ್ಟರಲ್ಲಿ, ರಸ್ತೆ ಮುಗಿದು ಹಳ್ಳ ಕಾಣಿಸಿದೆ. ಆಗ ಪ್ರಯಾಣಿಕರಿಗೆ ದಾರಿ ತಪ್ಪಿದ್ದು ಗೊತ್ತಾಗಿದೆ.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ಜೀವ ಕಳೆದುಕೊಂಡ ದುರ್ದೈವಿಗಳು

ದಾರಿ ತಪ್ಪಿದ ಪ್ರಯಾಣಿಕರಿಗೆ ಅಲ್ಲಿಂದ ಎತ್ತ ಕಡೆ ತೆರಳಬೇಕು ಎಂಬುದೂ ಗೊತ್ತಾಗಿಲ್ಲ. ಬಳಿಕ ಕಾರಿನ ಚಾಲಕ ಪೊಲೀಸ್ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿ, ನಾಲ್ವರನ್ನೂ ಸುರಕ್ಷಿತವಾಗಿ ವಾಪಸ್ ಕರೆದುಕೊಂಡು ಬಂದಿದ್ದಾರೆ. ಮುಖ್ಯ ರಸ್ತೆಗೆ ಕರೆದುಕೊಂಡು ಗೋವಾ ದಾರಿ ತೋರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?