AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದಲ್ಲಿ ಮುಂದುವರೆದ ಮಳೆ ಆರ್ಭಟ: ಬೆಳಗಾವಿ, ಚಿಕ್ಕಮಗಳೂರು, ಹಾಸನ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಜಿಲ್ಲೆಯಾದ್ಯಂತ ವರುಣಾರ್ಭಟ ಹಿನ್ನೆಲೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಕೆಲ ಪಟ್ಟಣ, ಹಳ್ಳಿಗಳಲ್ಲಿ ಕರೆಂಟ್​ ಇಲ್ಲದೇ ಜನರು ಪರದಾಡುವಂತ್ತಾಗಿದೆ. 15 ದಿನಗಳಲ್ಲಿ 650 ವಿದ್ಯುತ್ ಕಂಬಗಳು ಮಳೆಯಿಂದಾಗಿ ಧರೆಗುರುಳಿವೆ.

Karnataka Rain: ಕರ್ನಾಟಕದಲ್ಲಿ ಮುಂದುವರೆದ ಮಳೆ ಆರ್ಭಟ: ಬೆಳಗಾವಿ, ಚಿಕ್ಕಮಗಳೂರು, ಹಾಸನ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 15, 2022 | 11:29 AM

Share

ಬೆಳಗಾವಿ: ಬೆಳಗಾವಿ ಮತ್ತು ಖಾನಾಪುರ ತಾಲೂಕಿನಾದ್ಯಂತ ಭಾರೀ ಮಳೆ (Heavy Rain) ಹಿನ್ನೆಲೆ ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವ್ಯಾಪಕವಾಗಿ ಮಳೆಯ ಅಬ್ಬರ ಮುಂದುವರೆದಿದ್ದು, ಬೆಳಗಾವಿ ನಗರ, ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಶುಕ್ರವಾರ(ಜು.15) ಮತ್ತು ನಾಳೆ ಶನಿವಾರ(ಜು.16) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಶೃಂಗೇರಿ ತಾಲೂಕಿನ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬಿಇಓ ರಾಘವೇಂದ್ರ ಆದೇಶ ಹೊರಡಿಸಿದ್ದಾರೆ. ಮೂಡಿಗೆರೆ, ಕೊಪ್ಪ ತಾಲೂಕಿನ ಶಾಲೆಗಳಿಗೂ ರಜೆ ನೀಡಲಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳ್ಳೂರು ಸಮೀಪ ಮಳೆಯಿಂದಾಗಿ ಮರಗಳು ಕುಸಿದು ಬಿದ್ದಿವೆ. ಕಾಲೇಜುಗಳಿಗೆ ಬರಲಾರದೇ ವಿದ್ಯಾರ್ಥಿಗಳು ಪರದಾಡುತ್ತಿದ್ದು, ಬಿರುಗಾಳಿ ಸಹಿತ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತ ಉಂಟಾಗಿದೆ.

ಇದನ್ನೂ ಓದಿ:  Shiradi Ghat: ಶಿರಾಡಿಘಾಟ್​ ಹೆದ್ದಾರಿಯಲ್ಲಿ ಭೂ ಕುಸಿತ: ರಾತ್ರಿವೇಳೆ ಭಾರಿ ವಾಹನ ಸಂಚಾರ ನಿಷೇಧ

ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ

ಹಾಸನ: ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಸಕಲೇಶಪುರ, ಆಲೂರು, ಅರಕಲಗೂಡು, ಬೇಲೂರಿನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೇಮಾವತಿ ಜಲಾಶಯಕ್ಕೆ 41420 ಕ್ಯೂಸೆಕ್ ಒಳಹರಿವಿದ್ದು, ಜಲಾಶಯದಿಂದ 38000 ಕ್ಯೂಸೆಕ್ ನೀರು ಹೊರಹರಿವಿದೆ. ಹೇಮಾವತಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2922 ಅಡಿ. ಇಂದು ಜಲಾಶಯದಲ್ಲಿನ ನೀರಿನ ಮಟ್ಟ 2920.40 ಅಡಿ. ಜಲಾಶಯದ ನೀರಿನ ‌ಸಂಗ್ರಹ ಪ್ರಮಾಣ 37.103 ಟಿಎಂಸಿ. ಇಂದು ಜಲಾಶಯದಲ್ಲಿರುವ ನೀರಿನ ಪ್ರಮಾಣ 35.557 ಟಿಎಂಸಿ.

ಇದನ್ನೂ ಓದಿ: Charmadi Ghat ಚಾರ್ಮಾಡಿ ಘಾಟ್​ನಲ್ಲಿ ಲಘು ಭೂಕುಸಿತ; ನಿರಂತರ ಕಾರ್ಯದಲ್ಲಿ ತೊಡಗಿರುವ ಜೆಸಿಬಿಗಳು

ಮಳೆಯಿಂದಾಗಿ ಧರೆಗುರುಳಿದ 650 ವಿದ್ಯುತ್ ಕಂಬಗಳು:

ಕೊಡಗು: ಜಿಲ್ಲೆಯಾದ್ಯಂತ ವರುಣಾರ್ಭಟ ಹಿನ್ನೆಲೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಕೆಲ ಪಟ್ಟಣ, ಹಳ್ಳಿಗಳಲ್ಲಿ ಕರೆಂಟ್​ ಇಲ್ಲದೇ ಜನರು ಪರದಾಡುವಂತ್ತಾಗಿದೆ. 15 ದಿನಗಳಲ್ಲಿ 650 ವಿದ್ಯುತ್ ಕಂಬಗಳು ಮಳೆಯಿಂದಾಗಿ ಧರೆಗುರುಳಿವೆ. ಇನ್ನೂ ಅಂಗನವಾಡಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಭಾರೀ ಮಳೆಗೆ ಜಿಲ್ಲೆಯಾದ್ಯಂತ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ವಿದ್ಯುತ್ ಇಲ್ಲದೆ ಗ್ರಾಮೀಣ ಕೊಡಗು ಭಾಗದಲ್ಲಿ ಜನರು ಪರದಾಡುತ್ತಿದ್ದಾರೆ. ವಿದ್ಯುತ್ ವ್ಯವಸ್ಥೆ ಮರುಸ್ಥಾಪನೆಗೆ ಚೆಸ್ಕಾಂ ಹರಸಾಹಸ ಪಡುತ್ತಿದೆ.

Published On - 9:17 am, Fri, 15 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್