AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮಳೆಯ ಆರ್ಭಟ; ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶವವಾಗಿ ಪತ್ತೆ

ಜಿಲ್ಲೆಯ ಚಿಕ್ಕೋಡಿ ಪಟ್ಟಣದ ರಾಮನಗರ ಕಾಲೋನಿಯ ಕಿರಣಾ ವಿಭೂತಿ (10) ಶವವಾಗಿ ಪತ್ತೆಯಾದ ಬಾಲಕಿ. ನಿನ್ನೆ (ಜುಲೈ 23) ಸಂಜೆ ಮನೆಗೆ ವಾಪಾಸ್ ಆಗುತ್ತಿರುವಾಗ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಳು.

ಬೆಳಗಾವಿಯಲ್ಲಿ ಮಳೆಯ ಆರ್ಭಟ; ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶವವಾಗಿ ಪತ್ತೆ
ಬಾಲಕಿ ಕಿರಣಾ ವಿಭೂತಿ, ಬಾಲಕಿ ಶವ ಕಂಡು ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
TV9 Web
| Edited By: sandhya thejappa|

Updated on:Jul 24, 2021 | 9:29 AM

Share

ಬೆಳಗಾವಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಜಿಲ್ಲೆಯ ಚಿಕ್ಕೋಡಿ ಪಟ್ಟಣದ ರಾಮನಗರ ಕಾಲೋನಿಯ ಕಿರಣಾ ವಿಭೂತಿ (10) ಶವವಾಗಿ ಪತ್ತೆಯಾದ ಬಾಲಕಿ. ನಿನ್ನೆ (ಜುಲೈ 23) ಸಂಜೆ ಮನೆಗೆ ವಾಪಾಸ್ ಆಗುತ್ತಿರುವಾಗ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಳು. ಇಂದು ಎಸ್​ಡಿಆರ್​ಎಫ್ ತಂಡ ಕಾರ್ಯಾಚರಣೆ ಮಾಡಿ ಬಾಲಕಿಯ ಶವವನ್ನು ಹೊರತೆಗೆದಿದ್ದಾರೆ. ಬಾಲಕಿ ಶವ ಹೊರ ತೆಗೆಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ. ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ ಜಿಲ್ಲೆಯ ಖಾನಾಪುರ ತಾಲೂಕಿನ ವಾಘವಾಡೆ ಬಳಿ ಏಕಾಏಕಿ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದ ಹಿನ್ನೆಲೆ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಹಳ್ಳದ ನೀರಿನಲ್ಲಿ ಸಿಲುಕಿ ಕೊಚ್ಚಿ ಹೋಗುತ್ತಿದ್ದ. ಈ ವೇಳೆ ಹಗ್ಗ ಎಸೆದು ಯುವಕನನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡ ಗ್ರಾಮದಲ್ಲಿ ಮನೆ ಕಳೆದುಕೊಂಡವರು ಕಣ್ಣೀರು ಹಾಕುತ್ತಿದ್ದಾರೆ. ಈಗಾಗಲೇ ನಮ್ಮ ಮನೆಗಳು ಬಿದ್ದು ಹೋಗಿವೆ. ಬಟ್ಟೆ ಬಿಟ್ಟರೆ ಬೇರೆ ಏನೂ ತೆಗೆದುಕೊಳ್ಳದೆ ಮನೆಯಿಂದ ಬಂದಿದ್ದೇವೆ. ಜೀವ ಉಳಿದರೆ ಸಾಕು ಅಂತಾ ಬಂದಿದ್ದೇವೆ. ಈಗ ಮನೆಗಳು ಬಿದ್ದಿವೆ. ಮುಳುಗಿದ ಮನೆ ಕಡೆ ಹೋದರೆ ನಮ್ಮ ಕೈಕಾಲು ನಡುಗುತ್ತೆ. ಸರ್ಕಾರ ಸಹಾಯ ಮಾಡಿದರೆ ನಾವು ಬದುಕುತ್ತೇವೆ ಅಂತಾ ಟಿವಿ9 ಕ್ಯಾಮೆರಾ ಮುಂದೆ ಕಣ್ಣೀರಿಡುತ್ತಾ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ

ಚಾರ್ಮಾಡಿ ಘಾಟ್​ ಬಳಿ ಟ್ರಾಫಿಕ್​ ಜಾಮ್​; ಭಾರೀ ಮಳೆಯ ನಡುವೆ ವಾಹನ ಸವಾರರ ಪರದಾಟ

ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಿರಣ್ಯಕೇಶಿ ನದಿ; ಹೊಸದಾಗಿ ಕಟ್ಟಿಕೊಂಡಿದ್ದ ಮನೆಗಳು ಸಂಪೂರ್ಣ ಜಲಾವೃತ

(Heavy Rain in Belagavi and Girl dead body found)

Published On - 9:26 am, Sat, 24 July 21

Follow Us
TV9 Web
TV9 Web

TV9 Kannada

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು