AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರೆದ ಭಾರೀ ಮಳೆ: ಬೆಳಗಾವಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ, ಡಿಸಿ ನಿತೇಶ್ ಪಾಟೀಲ್ ಆದೇಶ

ಬೆಳಗಾವಿ ಜಿಲ್ಲೆಯಲ್ಲಿ ಮೂರು-ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆ ಹಿತದೃಷ್ಟಿ ಮತ್ತು ಮುಂಜಾಗ್ರತ ಕ್ರಮವಾಗಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶಿಸಿದ್ದಾರೆ.

ಸಹದೇವ್​ ಮಾನೆ
| Edited By: |

Updated on: Jul 23, 2023 | 7:00 PM

Share

ಬೆಳಗಾವಿ, ಜುಲೈ 23: ಜಿಲ್ಲೆಯಾದ್ಯಂತ ಭಾರೀ ಮಳೆ (Heavy rains) ಮುಂದುವರಿದ ಹಿನ್ನೆಲೆ ಖಾನಾಪುರ, ಕಿತ್ತೂರು, ಬೆಳಗಾವಿ ತಾಲೂಕಿನ ಶಾಲೆಗಳಿಗೆ ಸೋಮವಾರ ಒಂದು ದಿನ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ (DC Nitesh Patil) ಆದೇಶ ಹೊರಡಿಸಿದ್ದಾರೆ. ಮಕ್ಕಳ ಸುರಕ್ಷತೆ ಹಿತದೃಷ್ಟಿ ಮತ್ತು ಮುಂಜಾಗ್ರತ ಕ್ರಮವಾಗಿ 3 ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಮೂರು-ನಾಲ್ಕು ದಿನಗಳಿಂದ ಭಾರೀ ಮಳೆ ಆಗುತ್ತಿದೆ. ಹಾಗಾಗಿ ಇಂದು ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮಕ್ಕೆ ಭೇಟಿ ನೀಡಿದ ಬೆಳಗಾವಿ ಡಿಸಿ ನಿತೇಶ್ ಪಾಟೀಲ್​ ಕೃಷ್ಣಾ ನದಿಯಲ್ಲಿ ಬೋಟ್‌ನಲ್ಲಿ ತೆರಳಿ ಒಳಹರಿವು ಪ್ರಮಾಣ ವೀಕ್ಷಣೆ ಮಾಡಿದ್ದಾರೆ.

ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಪರಿಶೀಲನೆ: ಡಿಸಿ ನಿತೇಶ್ ಪಾಟೀಲ್

ಬಳಿಕ ಟಿವಿ9 ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ 3 ದಿನದಿಂದ ಮಳೆ ಆಗುತ್ತಿದೆ. ಸದ್ಯ ಕೃಷ್ಣಾ ನದಿಗೆ ಒಂದು ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. 2 ಲಕ್ಷ ಕ್ಯೂಸೆಕ್‌ ನೀರು ಹರಿಯುವವರೆಗೂ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಭೀತಿ ಇಲ್ಲ. ಆದರೂ ಏನೆಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಪರಿಶೀಲನೆ ಮಾಡಲಾಗಿದೆ ಎಂದು ಹೇಳಿದರು.

ಕೃಷ್ಣಾ ಉಪನದಿಗಳಾದ ದೂದ್‌ಗಂಗಾ, ವೇದಗಂಗಾದಲ್ಲಿ ನೀರಿನ ಹರಿವು ಹೆಚ್ಚಿದೆ. ನೀರು ಮತ್ತಷ್ಟು ಹೆಚ್ಚಾದ್ದರೆ ಗ್ರಾಮಸ್ಥರನ್ನು ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡುತ್ತೇವೆ. ಮಹಾರಾಷ್ಟ್ರದ ನೀರಾವರಿ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಕೊಯ್ನಾ, ಆಲಮಟ್ಟಿ ಜಲಾಶಯ ಕೇವಲ 44 ಪರ್ಸೆಂಟ್ ಮಾತ್ರ ಭರ್ತಿ ಆಗಿದೆ.

ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆ

ಸದ್ಯ ಮಹಾರಾಷ್ಟ್ರದ ಯಾವುದೇ ಡ್ಯಾಂನಿಂದ ನೀರು ಬಿಡುವ ಪರಿಸ್ಥಿತಿ ಇಲ್ಲ. ಗ್ರಾಮಸ್ಥರ ಮನವಿ ಮೇರೆಗೆ ಡಿಸೈನ್ ಚೇಂಜ್ ಮಾಡಿದ್ದರಿಂದ ಕೆಳಹಂತದ ಸೇತುವೆ ಬಳಿ ಎತ್ತರದ ಸೇತುವೆ ನಿರ್ಮಾಣ ಕಾಮಗಾರಿ ವಿಳಂಬ ಆಗಿದೆ. ತೋಟದ ಮನೆಗಳಲ್ಲಿ ವಾಸವಿರುವವರು ಎತ್ತರ ಪ್ರದೇಶಕ್ಕೆ ತೆರಳಲು ಮನವಿ ಮಾಡಿದ್ದು, ಇನ್ನೂ ಮೂರು ದಿನ ಇದೇ ರೀತಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ