AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರೆದ ಭಾರೀ ಮಳೆ: ಬೆಳಗಾವಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ, ಡಿಸಿ ನಿತೇಶ್ ಪಾಟೀಲ್ ಆದೇಶ

ಬೆಳಗಾವಿ ಜಿಲ್ಲೆಯಲ್ಲಿ ಮೂರು-ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆ ಹಿತದೃಷ್ಟಿ ಮತ್ತು ಮುಂಜಾಗ್ರತ ಕ್ರಮವಾಗಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶಿಸಿದ್ದಾರೆ.

Sahadev Mane
| Edited By: |

Updated on: Jul 23, 2023 | 7:00 PM

Share

ಬೆಳಗಾವಿ, ಜುಲೈ 23: ಜಿಲ್ಲೆಯಾದ್ಯಂತ ಭಾರೀ ಮಳೆ (Heavy rains) ಮುಂದುವರಿದ ಹಿನ್ನೆಲೆ ಖಾನಾಪುರ, ಕಿತ್ತೂರು, ಬೆಳಗಾವಿ ತಾಲೂಕಿನ ಶಾಲೆಗಳಿಗೆ ಸೋಮವಾರ ಒಂದು ದಿನ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ (DC Nitesh Patil) ಆದೇಶ ಹೊರಡಿಸಿದ್ದಾರೆ. ಮಕ್ಕಳ ಸುರಕ್ಷತೆ ಹಿತದೃಷ್ಟಿ ಮತ್ತು ಮುಂಜಾಗ್ರತ ಕ್ರಮವಾಗಿ 3 ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಮೂರು-ನಾಲ್ಕು ದಿನಗಳಿಂದ ಭಾರೀ ಮಳೆ ಆಗುತ್ತಿದೆ. ಹಾಗಾಗಿ ಇಂದು ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮಕ್ಕೆ ಭೇಟಿ ನೀಡಿದ ಬೆಳಗಾವಿ ಡಿಸಿ ನಿತೇಶ್ ಪಾಟೀಲ್​ ಕೃಷ್ಣಾ ನದಿಯಲ್ಲಿ ಬೋಟ್‌ನಲ್ಲಿ ತೆರಳಿ ಒಳಹರಿವು ಪ್ರಮಾಣ ವೀಕ್ಷಣೆ ಮಾಡಿದ್ದಾರೆ.

ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಪರಿಶೀಲನೆ: ಡಿಸಿ ನಿತೇಶ್ ಪಾಟೀಲ್

ಬಳಿಕ ಟಿವಿ9 ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ 3 ದಿನದಿಂದ ಮಳೆ ಆಗುತ್ತಿದೆ. ಸದ್ಯ ಕೃಷ್ಣಾ ನದಿಗೆ ಒಂದು ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. 2 ಲಕ್ಷ ಕ್ಯೂಸೆಕ್‌ ನೀರು ಹರಿಯುವವರೆಗೂ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಭೀತಿ ಇಲ್ಲ. ಆದರೂ ಏನೆಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಪರಿಶೀಲನೆ ಮಾಡಲಾಗಿದೆ ಎಂದು ಹೇಳಿದರು.

ಕೃಷ್ಣಾ ಉಪನದಿಗಳಾದ ದೂದ್‌ಗಂಗಾ, ವೇದಗಂಗಾದಲ್ಲಿ ನೀರಿನ ಹರಿವು ಹೆಚ್ಚಿದೆ. ನೀರು ಮತ್ತಷ್ಟು ಹೆಚ್ಚಾದ್ದರೆ ಗ್ರಾಮಸ್ಥರನ್ನು ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡುತ್ತೇವೆ. ಮಹಾರಾಷ್ಟ್ರದ ನೀರಾವರಿ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಕೊಯ್ನಾ, ಆಲಮಟ್ಟಿ ಜಲಾಶಯ ಕೇವಲ 44 ಪರ್ಸೆಂಟ್ ಮಾತ್ರ ಭರ್ತಿ ಆಗಿದೆ.

ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆ

ಸದ್ಯ ಮಹಾರಾಷ್ಟ್ರದ ಯಾವುದೇ ಡ್ಯಾಂನಿಂದ ನೀರು ಬಿಡುವ ಪರಿಸ್ಥಿತಿ ಇಲ್ಲ. ಗ್ರಾಮಸ್ಥರ ಮನವಿ ಮೇರೆಗೆ ಡಿಸೈನ್ ಚೇಂಜ್ ಮಾಡಿದ್ದರಿಂದ ಕೆಳಹಂತದ ಸೇತುವೆ ಬಳಿ ಎತ್ತರದ ಸೇತುವೆ ನಿರ್ಮಾಣ ಕಾಮಗಾರಿ ವಿಳಂಬ ಆಗಿದೆ. ತೋಟದ ಮನೆಗಳಲ್ಲಿ ವಾಸವಿರುವವರು ಎತ್ತರ ಪ್ರದೇಶಕ್ಕೆ ತೆರಳಲು ಮನವಿ ಮಾಡಿದ್ದು, ಇನ್ನೂ ಮೂರು ದಿನ ಇದೇ ರೀತಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Sahadev Mane
Sahadev Mane
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ