AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರೆದ ಭಾರೀ ಮಳೆ: ಬೆಳಗಾವಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ, ಡಿಸಿ ನಿತೇಶ್ ಪಾಟೀಲ್ ಆದೇಶ

ಬೆಳಗಾವಿ ಜಿಲ್ಲೆಯಲ್ಲಿ ಮೂರು-ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆ ಹಿತದೃಷ್ಟಿ ಮತ್ತು ಮುಂಜಾಗ್ರತ ಕ್ರಮವಾಗಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶಿಸಿದ್ದಾರೆ.

ಸಹದೇವ್​ ಮಾನೆ
| Edited By: |

Updated on: Jul 23, 2023 | 7:00 PM

Share

ಬೆಳಗಾವಿ, ಜುಲೈ 23: ಜಿಲ್ಲೆಯಾದ್ಯಂತ ಭಾರೀ ಮಳೆ (Heavy rains) ಮುಂದುವರಿದ ಹಿನ್ನೆಲೆ ಖಾನಾಪುರ, ಕಿತ್ತೂರು, ಬೆಳಗಾವಿ ತಾಲೂಕಿನ ಶಾಲೆಗಳಿಗೆ ಸೋಮವಾರ ಒಂದು ದಿನ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ (DC Nitesh Patil) ಆದೇಶ ಹೊರಡಿಸಿದ್ದಾರೆ. ಮಕ್ಕಳ ಸುರಕ್ಷತೆ ಹಿತದೃಷ್ಟಿ ಮತ್ತು ಮುಂಜಾಗ್ರತ ಕ್ರಮವಾಗಿ 3 ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಮೂರು-ನಾಲ್ಕು ದಿನಗಳಿಂದ ಭಾರೀ ಮಳೆ ಆಗುತ್ತಿದೆ. ಹಾಗಾಗಿ ಇಂದು ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮಕ್ಕೆ ಭೇಟಿ ನೀಡಿದ ಬೆಳಗಾವಿ ಡಿಸಿ ನಿತೇಶ್ ಪಾಟೀಲ್​ ಕೃಷ್ಣಾ ನದಿಯಲ್ಲಿ ಬೋಟ್‌ನಲ್ಲಿ ತೆರಳಿ ಒಳಹರಿವು ಪ್ರಮಾಣ ವೀಕ್ಷಣೆ ಮಾಡಿದ್ದಾರೆ.

ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಪರಿಶೀಲನೆ: ಡಿಸಿ ನಿತೇಶ್ ಪಾಟೀಲ್

ಬಳಿಕ ಟಿವಿ9 ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ 3 ದಿನದಿಂದ ಮಳೆ ಆಗುತ್ತಿದೆ. ಸದ್ಯ ಕೃಷ್ಣಾ ನದಿಗೆ ಒಂದು ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. 2 ಲಕ್ಷ ಕ್ಯೂಸೆಕ್‌ ನೀರು ಹರಿಯುವವರೆಗೂ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಭೀತಿ ಇಲ್ಲ. ಆದರೂ ಏನೆಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಪರಿಶೀಲನೆ ಮಾಡಲಾಗಿದೆ ಎಂದು ಹೇಳಿದರು.

ಕೃಷ್ಣಾ ಉಪನದಿಗಳಾದ ದೂದ್‌ಗಂಗಾ, ವೇದಗಂಗಾದಲ್ಲಿ ನೀರಿನ ಹರಿವು ಹೆಚ್ಚಿದೆ. ನೀರು ಮತ್ತಷ್ಟು ಹೆಚ್ಚಾದ್ದರೆ ಗ್ರಾಮಸ್ಥರನ್ನು ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡುತ್ತೇವೆ. ಮಹಾರಾಷ್ಟ್ರದ ನೀರಾವರಿ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಕೊಯ್ನಾ, ಆಲಮಟ್ಟಿ ಜಲಾಶಯ ಕೇವಲ 44 ಪರ್ಸೆಂಟ್ ಮಾತ್ರ ಭರ್ತಿ ಆಗಿದೆ.

ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆ

ಸದ್ಯ ಮಹಾರಾಷ್ಟ್ರದ ಯಾವುದೇ ಡ್ಯಾಂನಿಂದ ನೀರು ಬಿಡುವ ಪರಿಸ್ಥಿತಿ ಇಲ್ಲ. ಗ್ರಾಮಸ್ಥರ ಮನವಿ ಮೇರೆಗೆ ಡಿಸೈನ್ ಚೇಂಜ್ ಮಾಡಿದ್ದರಿಂದ ಕೆಳಹಂತದ ಸೇತುವೆ ಬಳಿ ಎತ್ತರದ ಸೇತುವೆ ನಿರ್ಮಾಣ ಕಾಮಗಾರಿ ವಿಳಂಬ ಆಗಿದೆ. ತೋಟದ ಮನೆಗಳಲ್ಲಿ ವಾಸವಿರುವವರು ಎತ್ತರ ಪ್ರದೇಶಕ್ಕೆ ತೆರಳಲು ಮನವಿ ಮಾಡಿದ್ದು, ಇನ್ನೂ ಮೂರು ದಿನ ಇದೇ ರೀತಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್