AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ; ಚಿಕ್ಕೋಡಿ ವ್ಯಾಪ್ತಿಯ 10 ಸೇತುವೆಗಳು ಜಲಾವೃತ, ಜೀವ ಭಯದಲ್ಲಿ ಕೃಷ್ಣಾ ನದಿ ತೀರದ ಜನ

ಕೃಷ್ಣಾ ನದಿ ತುಂಬಿ ಹರಿಯುತ್ತಿದ್ದು ಚಿಕ್ಕೋಡಿ ವ್ಯಾಪ್ತಿಯ 10 ಸೇತುವೆಗಳು ಜಲಾವೃತಗೊಂಡಿವೆ. ಈ 10 ಸೇತುವೆಗಳು ಜಲಾವೃತದಿಂದ 20 ಹಳ್ಳಿಗಳಿಗೆ ಸಂಪರ್ಕ‌ ಕಡಿತವಾಗಿದೆ. ಇಂದು ಮತ್ತೆ ಕೃಷ್ಣಾ ನದಿ ಒಳಹರಿವು 2 ಅಡಿ ಏರಿಕೆಯಾಗಿದೆ.

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ; ಚಿಕ್ಕೋಡಿ ವ್ಯಾಪ್ತಿಯ 10 ಸೇತುವೆಗಳು ಜಲಾವೃತ, ಜೀವ ಭಯದಲ್ಲಿ ಕೃಷ್ಣಾ ನದಿ ತೀರದ ಜನ
ಸೇತುವೆಗಳು ಜಲಾವೃತ
TV9 Web
| Edited By: |

Updated on: Jul 15, 2022 | 3:51 PM

Share

ಬೆಳಗಾವಿ: ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದೆ(Karnataka Rains). ಮಳೆಯಿಂದಾಗಿ ಹಲವು ಕಡೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆ ವೇದಗಂಗಾ, ದೂದಗಂಗಾ ಪಂಚಾಗಂಗಾ, ಉಪನದಿಗಳಿಂದ ಕೃಷ್ಣಾ ನದಿ(Krishna River) ತುಂಬಿ ಹರಿಯುತ್ತಿದೆ. ಇದರಿಂದಾಗಿ ಬೆಳಗಾವಿ ಜಿಲ್ಲೆ ಚಿಕ್ಕೋಡಿ ವ್ಯಾಪ್ತಿಯ 10 ಸೇತುವೆಗಳು ಜಲಾವೃತಗೊಂಡಿವೆ.

ಕೃಷ್ಣಾ ನದಿ ತುಂಬಿ ಹರಿಯುತ್ತಿದ್ದು ಚಿಕ್ಕೋಡಿ ವ್ಯಾಪ್ತಿಯ 10 ಸೇತುವೆಗಳು ಜಲಾವೃತಗೊಂಡಿವೆ. ಈ 10 ಸೇತುವೆಗಳು ಜಲಾವೃತದಿಂದ 20 ಹಳ್ಳಿಗಳಿಗೆ ಸಂಪರ್ಕ‌ ಕಡಿತವಾಗಿದೆ. ಇಂದು ಮತ್ತೆ ಕೃಷ್ಣಾ ನದಿ ಒಳಹರಿವು 2 ಅಡಿ ಏರಿಕೆಯಾಗಿದೆ. ದೂದ್ಗಂಗಾ ನದಿಯಿಂದ 27,280 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ. ರಾಜಾಪುರ ಬ್ಯಾರೇಜ್‌ನಿಂದ 99,417 ಕ್ಯೂಸೆಕ್ ನೀರು ರಿಲೀಸ್ ಆಗಿದೆ. ಹೀಗೆ ಒಟ್ಟು 1,26,697 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ. ckd rain

10 ಸೇತುವೆಗಳು ಜಲಾವೃತ ಇನ್ನು ಕೃಷ್ಣಾ ನದಿ ನೀರಿನಿಂದ ಚಿಂಚಲಿ-ರಾಯಬಾಗ ಸೇತುವೆ ಜಲಾವೃತಗೊಂಡಿದೆ. ಕೃಷ್ಣಾ ನದಿಗೆ ಅಡ್ಡಲಾಗಿರುವ ಕಲ್ಲೋಳ-ಯಡೂರು ಸೇತುವೆ, ಮಾಂಜರಿ-ಬಾವನಸೌಂದತ್ತಿ ಬ್ಯಾರೇಜ್ ಸಂಪೂರ್ಣ ಮುಳುಗಡೆಗೊಂಡಿದೆ. ದೂದಗಂಗಾ ನದಿಗೆ ಅಡ್ಡಲಾಗಿರುವ ಮಲಿಕವಾಡ-ದತ್ತವಾಡ ಸೇತುವೆ, ನಿಪ್ಪಾಣಿ ತಾಲೂಕಿನ ದೂದಗಂಗಾ ನದಿಗೆ ಅಡ್ಡಲಾಗಿರುವ ಕಾರದಗಾ-ಭೋಜ ಸೇತುವೆ, ಕುನ್ನೂರ-ಬಾರವಾಡ ಸಂಪರ್ಕ ಸೇತುವೆ, ವೇದಗಂಗಾ ನದಿಗೆ ಅಡ್ಡಲಾಗಿರುವ ಭೋಜವಾಡಿ-ಕುನ್ನೊರ, ಜತ್ರಾಟ-ಭೀವಶಿ, ಸಿದ್ನಾಳ-ಅಕ್ಕೋಳ ಸೇತುವೆ, ಮಮದಾಪೂರ-ಹುನ್ನರಗಿ ಸೇತುವೆ ಸಂಪರ್ಕ ಕಡಿತಗೊಂಡಿದೆ. ಕೃಷ್ಣಾ ನದಿ ತೀರದ ಜನರಲ್ಲಿ ಮತ್ತೆ ಆತಂಕ ಹೆಚ್ಚಾಗಿದೆ. ಹಾಗೂ ಸಾರ್ವಜನಿಕರ ಓಡಾಟಕ್ಕೆ ಅನಾನೂಕೂಲತೆ ಎದುರಾಗಿದೆ.

ಬೆಳಗಾವಿಯಲ್ಲಿ ಐದು ಮನೆಗಳು ಜಲಾವೃತ ಇನ್ನು ಮತ್ತೊಂದು ಕಡೆ ಬೆಳಗಾವಿಯ ಯಳ್ಳೂರು ಮಾರ್ಗದಲ್ಲಿರೋ ಗಣಪತಿ ದೇಗುಲಕ್ಕೆ ಬಳ್ಳಾರಿ ನಾಲಾ ನೀರು ನುಗ್ಗಿ ಜಲಾವೃತವಾಗಿದೆ. ದೇಗುಲದ ಪಕ್ಕದಲ್ಲಿನ ನೂರಾರು ಎಕರೆ ಗದ್ದೆ ಮುಳುಗಡೆಯಾಗಿದೆ. ಬೆಳಗಾವಿ ನಗರದಲ್ಲಿ ಬಳ್ಳಾರಿ ನಾಲಾ ಆರ್ಭಟ ಜೋರಾಗಿದೆ. ಧಾಮಣೆ ಪ್ರದೇಶ ಜಮೀನಿನಲ್ಲಿ ಕಟ್ಟಿಕೊಂಡಿದ್ದ ಐದು ಮನೆಗಳು ಜಲಾವೃತವಾಗಿವೆ. ಮನೆಯವರು ನೆಲಮಹಡಿ ಬಿಟ್ಟು, 2ನೇ ಮಹಡಿಯಲ್ಲಿ ವಾಸಮಾಡುತ್ತಿದ್ದಾರೆ. ಮನೆಯಿಂದ ಹೊರಬರಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ