AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಡಿಫರೆಂಟ್ ಆಗಿ ಶಿವಾಜಿ ಪ್ರತಿಮೆ ಉದ್ಘಾಟಿಸಲು ಹೆಬ್ಬಾಳ್ಕರ್ ತಯಾರಿ, ಲೇಸರ್- ಕ್ರ್ಯಾಕರ್ ಶೋ ಮೂಲಕ ಜಾರಕಿಹೊಳಿಗೆ ಠಕ್ಕರ್

ರಾಜಹಂಸಗಡ ಕೋಟೆಯಲ್ಲಿನ ಶಿವಾಜಿ ಮೂರ್ತಿ ಲೋಕಾರ್ಪಣೆ ವಿಚಾರವಾಗಿ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ವಾರ್​ ಜೋರಾಗಿದ್ದು, ಇಂದು(ಮಾ.5) ಮತ್ತೊಮ್ಮೆ ಲಕ್ಷ್ಮೀ ಹೆಬ್ಬಾಳ್ಕರ್ ಶಿವಾಜಿ ಪ್ರತಿಮೆ ಉದ್ಘಾಟಿಸಲಿದ್ದಾರೆ.

ಇಂದು ಡಿಫರೆಂಟ್ ಆಗಿ ಶಿವಾಜಿ ಪ್ರತಿಮೆ ಉದ್ಘಾಟಿಸಲು ಹೆಬ್ಬಾಳ್ಕರ್ ತಯಾರಿ,  ಲೇಸರ್- ಕ್ರ್ಯಾಕರ್ ಶೋ ಮೂಲಕ ಜಾರಕಿಹೊಳಿಗೆ ಠಕ್ಕರ್
ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್ ಜಾರಕಿಹೊಳಿ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 05, 2023 | 8:28 AM

ಬೆಳಗಾವಿ: ರಾಜಹಂಸಗಡ ಕೋಟೆಯಲ್ಲಿನ ಶಿವಾಜಿ ಮೂರ್ತಿ ಲೋಕಾರ್ಪಣೆ ವಿಚಾರವಾಗಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ನಡುವಿನ ಯುದ್ಧ ಅಂತ್ಯಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಮೊನ್ನೆಯಷ್ಟೇ ಸಿಎಂ ಬೊಮ್ಮಾಯಿಂದ ಲೋಕಾರ್ಪಣೆಗೊಂಡಿದ್ದ ಶಿವಾಜಿ ಮೂರ್ತಿ, ಇಂದು ಮತ್ತೊಮ್ಮೆ ಲೋಕಾರ್ಪಣೆ ಆಗಲಿದೆ. ಹೌದು ರಾಜಹಂಸಗಡದಲ್ಲಿ ಮತ್ತೊಮ್ಮೆ ಶಿವಾಜಿ ಪ್ರತಿಮೆ ಉದ್ಘಾಟನೆಗೆ ಸಿದ್ಧತೆ ನಡೆದಿದ್ದು, ಇಂದು(ಮಾ.5) ಶಿವಾಜಿ ಪ್ರತಿಮೆ ಉದ್ಘಾಟಿಸಲು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ‘ಕೈ’ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಯಾರಿ ನಡೆಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಗೆ 2 ತಿಂಗಳು ಬಾಕಿ ಇರುವಾಗಲೇ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್​ ಜಾರಕಿಹೊಳಿ ವರ್ಸಸ್ ಲಕ್ಷ್ಮೀ ಹೆಬ್ಬಾಳ್ಕರ್ ಫೈಟ್ ತಾರಕಕ್ಕೇರಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತ್ತೊಮ್ಮೆ ಗೆಲ್ಲಲು ಹೆಬ್ಬಾಳ್ಕರ್ ಮರಾಠಿಗರ ಓಲೈಕೆಗೆ ನಿಂತ್ರೆ, ಇತ್ತ ರಮೇಶ್ ಜಾರಕಿಹೊಳಿ ಕೂಡ ಹೆಬ್ಬಾಳ್ಕರ್ ಸೋಲಿಸಲು ಮರಾಠಿಗರನ್ನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಇನ್ನೂ ಬೆಳಗಾವಿ ತಾಲೂಕಿನ ರಾಜಹಂಸಗಡ ಕೋಟೆಯ ಮೇಲೆ 36 ಅಡಿ ಎತ್ತರದ ಶಿವಾಜಿ ಮೂರ್ತಿ ತಲೆ ಎತ್ತಿ ನಿಂತಿದೆ. ಸರ್ಕಾರಿ ಅನುದಾನದಲ್ಲಿ ಸಿದ್ದಗೊಂಡ ಶಿವಾಜಿ ಪ್ರತಿಮೆಯ ಲೋಕಾರ್ಪಣೆ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಕ್ರೆಡಿಟ್ ವಾರ್ ಮುಂದುವರೆದಿದೆ.

ಇದನ್ನೂ ಓದಿ:ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣಕ್ಕೆ 11 ಕೋಟಿ ರೂ. ಬಿಡುಗಡೆ ಮಾಡಿದ್ದು ನಾನು: ಗಾಲಿ ಜನಾರ್ಧನ ರೆಡ್ಡಿ, ಕೆಆರ್ ಪಿಪಿ ಅಧ್ಯಕ್ಷ

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ತೊಡೆ ತೊಟ್ಟಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೊನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನ ರಾಜಹಂಸಗಡ ಕೋಟೆಗೆ ಕರೆ ತಂದು ಮುಖ್ಯಮಂತ್ರಿ ಕೈಯಲ್ಲೆ ಶಿವಾಜಿ ಮೂರ್ತಿ ಲೋಕಾರ್ಪಣೆಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಕೋಟೆ ಅಭಿವೃದ್ಧಿಗೆ ಹೆಚ್ಚುವರಿಯಾಗಿ 5 ಕೋಟಿ ಅನುದಾನವನ್ನ ನೀಡುತ್ತಿವಿ ಎಂದು ಮುಖ್ಯಮಂತ್ರಿಗಳ ಬಾಯಿಂದಲೇ ಹೇಳಿಸುವ ಮೂಲಕ ಮರಾಠ ವೋಟ್ ಬ್ಯಾಂಕ್​ಗೆ ಕೈ ಹಾಕಿದ್ದಾರೆ. ಇತ್ತ ಲಕ್ಷ್ಮಿ ಹೆಬ್ಬಾಳ್ಕರ್ ಸಹ ರಮೇಶ್ ಜಾರಕಿಹೊಳಿ ಮತ್ತು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಇಂದು(ಮಾ.5) ಅದ್ದೂರಿಯಾಗಿ ಮತ್ತೊಮ್ಮೆ ಶಿವಾಜಿ ಮೂರ್ತಿ ಲೋಕಾರ್ಪಣೆ ಮೂಲಕ ಶಕ್ತಿಪ್ರದರ್ಶನಕ್ಕೆ ಹೆಬ್ಬಾಳ್ಕರ್ ಮುಂದಾಗಿದ್ದಾರೆ. ಜೊತೆಗೆ ಇದಕ್ಕಾಗಿಯೇ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಿಂದ 25 ಸಾವಿರ ಜನರನ್ನ ಸೇರಿಸಲು ಪ್ಲಾನ್ ಮಾಡಿಕೊಂಡಿದ್ದಾರೆ.

ಕೇವಲ ಜನರನ್ನ ಮಾತ್ರ ಸೇರಿಸದೇ ಪಕ್ಷದ ವರಿಷ್ಠರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಖ್ಯಾತ ಹಿಂದಿ ಚಿತ್ರನಟ ರಿತೇಶ್ ದೇಶಮುಖ ಅವರಿಗೂ ಆಹ್ವಾನ ನೀಡಿದ್ದಾರೆ. ಇನ್ನೂ ವಿಶೇಷ ಆಹ್ವಾನಿತರಾಗಿ ಶಿವಾಜಿ ವಂಶಸ್ಥರು ಆಗಮಿಸಲಿದ್ದು, ಇವರೆಲ್ಲರ ಸಮ್ಮುಖದಲ್ಲಿ ಮತ್ತೊಮ್ಮೆ ಶಿವಾಜಿ ಮೂರ್ತಿ ಅದ್ದೂರಿಯಾಗಿ ಲೋಕಾರ್ಪಣೆಗೊಳಿಸುವ ಮೂಲಕ ರಮೇಶ ಜಾರಕಿಹೊಳಿಗೆ ಟಕ್ಕರ್ ನೀಡಲು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮುಂದಾಗಿದ್ದಾರೆ. ಈ ಮೂಲಕ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಮರಾಠ ವೋಟ್ ಬ್ಯಾಂಕ್ ಗಟ್ಟಿಗೊಳಿಸಿಕೊಳ್ಳುವ ತಂತ್ರ ಹೆಣೆದಿದ್ದಾರೆ. ಇಂದು ಬೆಳಗ್ಗೆ 9 ಗಂಟೆಯಿಂದ ವಿವಿಧ ಕಾರ್ಯಕ್ರಮಗಳು ಆರಂಭವಾಗಲಿವೆ. ಪಲ್ಲಕ್ಕಿ ಉತ್ಸವ, ಸಾಂಪ್ರದಾಯಿಕ ಧಾರ್ಮಿಕ ಪೂಜೆಗಳು 10 ಗಂಟೆಗೆ ದೇವಸ್ಥಾನ ಪ್ರವೇಶವಾಗಲಿದೆ. 10.30ರಿಂದ ಧ್ವಜಾರೋಹಣ, ಉತ್ಸವ ಮೂರ್ತಿ ಪೂಜಾ, ಡೋಲ್ ತಾಶಾದೊಂದಿಗೆ ಮೂರ್ತಿ ಉದ್ಘಾಟನೆಯಾಗಲಿದೆ. ಸಂಜೆವರೆಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿವೆ.

ಇದನ್ನೂ ಓದಿ:Poster war: ಬೆಳಗಾವಿಯಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣ; ಕ್ರೆಡಿಟ್ ತೆಗೆದುಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಬ್ಯಾನರ್ ಪೈಪೋಟಿ!

ಒಟ್ಟಿನಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನವೇ, ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಕಿತ್ತಾಟ ಶುರುವಾಗಿದ್ದು, ಸರ್ಕಾರದ ಕಾರ್ಯಕ್ರಮದ ದಿನವೇ ಹೆಬ್ಬಾಳ್ಕರ್ ಬ್ಯಾನರ್​ಗೆ ಕೀಡಿಗೇಡಿಗಳು ಬ್ಲೇಡ್ ಹಾಕಿದ್ರು. ಈಗ ಸಂಜಯ್ ಪಾಟೀಲ್, ನಾಗೇಶ್ ಮನ್ನೋಳ್ಕರ್ ಬ್ಯಾನರ್​ಗಳಿಗೆ ಕೀಡಿಗೇಡಿಗಳು ಬ್ಲೇಡ್ ಹಾಕಿದ್ದಾರೆ. ಇದೆಲ್ಲದರ ನಡುವೆ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಕಿತ್ತಾಟ ಮುಂದೆ ಎಲ್ಲಿಗೆ ಹೋಗಿ ನಿಲ್ಲುತ್ತೆ ಅನ್ನೋದನ್ನ ಕಾದುನೋಡಬೇಕಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:21 am, Sun, 5 March 23

ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ