AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Security Breach: ಲೋಕಸಭಾ ಕಲಾಪದಲ್ಲಿ ಭದ್ರತಾ ಲೋಪ ಬೆನ್ನಲ್ಲೇ ಬೆಳೆಗಾವಿ ಸುವರ್ಣಸೌಧದಲ್ಲೂ ಹೈಅಲರ್ಟ್

Lok Sabha Security Breach: ಲೋಕಸಭಾ ಸದನದೊಳಗೆ ಇಬ್ಬರು ನುಗ್ಗಿ ಬಂದು ಕೆಲ ಕಾಲ ಆತಂಕ ಮೂಡಿಸಿದ್ದಾರೆ. ಇದರಿಂದ ಇತ್ತ ಬೆಳಗಾವಿಯಲ್ಲೂ ಸಹ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಖುದ್ದು ಸ್ಪೀಕರ್ ಪೊಲೀಸ್, ಡಿಸಿ ಹಾಗೂ ಮಾರ್ಷಲ್​ಗಳಿಂದ ಭದ್ರತೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಯಾವುದೇ ರೀತಿಯಾಗಿ ಭದ್ರತಾ ಲೋಪವಾಗದಂತೆ ನಿಗಾ ವಹಿಸಿ ಎಂದು ಖಡಕ್ ಸೂಚನೆ ನೀಡಿದ್ದಾರೆ.

Lok Sabha Security Breach: ಲೋಕಸಭಾ ಕಲಾಪದಲ್ಲಿ ಭದ್ರತಾ ಲೋಪ ಬೆನ್ನಲ್ಲೇ ಬೆಳೆಗಾವಿ ಸುವರ್ಣಸೌಧದಲ್ಲೂ ಹೈಅಲರ್ಟ್
ಸುವರ್ಣ ಸೌಧ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 13, 2023 | 3:06 PM

ಬೆಳಗಾವಿ, (ಡಿಸೆಂಬರ್ 13): ಲೋಕಸಭಾ ಕಲಾಪದ ವೇಳೆ ಭಾರೀ ಭದ್ರತಾ (Lok Sabha Security Breach) ಲೋಪವಾಗಿದೆ. ಪ್ರೇಕ್ಷಕರ ಗ್ಯಾಲರಿಯಿಂದ ಇಬ್ಬರು ಏಕಾಏಕಿ ಸದನದೊಳಗೆ ನುಗ್ಗಿ ಬಂದಿದ್ದಾರೆ. ಅಲ್ಲದೇ ಕಲರ್‌ ಸ್ಮೋಕ್ ಹರಡಿ ಆತಂಕ ಮೂಡಿಸಿದ್ದಾರೆ. ಇದರ ಬೆನ್ನಲ್ಲೇ ಇತ್ತ ಬೆಳಗಾವಿಯ ಸುವರ್ಣಸೌಧದಲ್ಲೂ(Belagavi Suvarna Soudha)  ಸಹ ಭದ್ರತಾ ಪರಿಶೀಲನೆ ನಡೆಸಲಾಗಿದೆ. ಖುದ್ದು ಸ್ಪೀಕರ್ ಯುಟಿ ಖಾದರ್ ಅವರು ಸುವರ್ಣಸೌಧದ ಭದ್ರತೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಬೆಳಗಾವಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸುವರ್ಣ ಸೌಧದ ಮಾರ್ಷಲ್​ಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ ಸಭಾಂಗಣದ ಸುತ್ತ ರೌಂಡ್ ಹಾಕಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದ್ದು, ಶಾಸಕರು, ಸಚಿವರ ಆಪ್ತ ಸಹಾಯಕರು(ಪಿಎ) ಎಂದು ಹೇಳಿಕೊಂಡು ಬರುವವರ ಬಗ್ಗೆ ನಿಗಾ ವಹಿಸುವಂತೆ ಭದ್ರತಾ ಸಿಬ್ಬಂದಿ, ಅಧಿಕಾರಿಗಳಿಗೆ ಸ್ಪೀಕರ್ ಖಡಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಎರಡು ದಶಕದ ಹಿಂದೆ ಸಂಸತ್‌ ಮೇಲೆ ನಡೆದ ಭಯೋತ್ಪಾದನಾ ದಾಳಿ ದಿನವೇ ಮತ್ತೆ ಭದ್ರತಾ ಲೋಪ 

ಸ್ಪೀಕರ್ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಮಾರ್ಷಲ್​ಗಳು. ವಿಧಾನಸಭೆ ಸಭಾಂಗಣ ಪ್ರವೇಶಿಸುವ ಪತ್ರಕರ್ತರು, ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿ ಪಾಸ್ ಮಾದರಿ ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ.

ಲೋಕಸಭೆಯ ಒಳಗೆ ನುಗ್ಗಿದ ಇಬ್ಬರ ಸದ್ಯಕ್ಕೆ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಸದನದೊಳಗೆ ನುಗ್ಗಿದವರನ್ನು ಸಾಗರ್ ಶರ್ಮಾ ಹಾಗೂ ಮೈಸೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಮನೋರಂಜನ್ ಎಂದು ಗುರುತಿಸಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಪಾಸ್ ಪಡೆದುಕೊಂಡು ಲೋಕಸಭೆ ಒಳಗೆ ಪ್ರವೇಶಿಸಿದ್ದರು ಎಂದು ತಿಳಿದುಬಂದಿದ್ದು, ಈ ಬಗ್ಗೆ ಸೂಕ್ತ ನಡೆಸುವಂತೆ ಲೋಕಸಭಾ ಸ್ಪೀಕರ್ ಒಂ ಬಿರ್ಲಾ ಸೂಚಿಸಿದ್ದಾರೆ.

Published On - 2:52 pm, Wed, 13 December 23

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ