AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಕ್ಯಾಸಲ್ ​ರಾಕ್ ಬಳಿ ಗುಡ್ಡ ಕುಸಿತ, ಕರ್ನಾಟಕ ಗೋವಾ ಮಧ್ಯೆ ಸಂಚರಿಸುವ ರೈಲುಗಳು ರದ್ದು

ಕರ್ನಾಟಕ-ಗೋವಾ ಗಡಿಯ ಕ್ಯಾಸಲ್ ​ರಾಕ್ ರೈಲು ನಿಲ್ದಾಣದ ವ್ಯಾಪ್ತಿಯ ಹಳಿಯ ಮೇಲೆ ಮಂಗಳವಾರ (ಜು.25) ಗುಡ್ಡ ಕುಸಿತವಾಗಿದೆ. ಈ ಹಿನ್ನೆಲೆ ಕರ್ನಾಟಕ-ಗೋವಾ ಮಧ್ಯೆ ರೈಲು ಸಂಚಾರ ಬಂದ್​ ಆಗಿದೆ.

ಪ್ರಯಾಣಿಕರ ಗಮನಕ್ಕೆ: ಕ್ಯಾಸಲ್ ​ರಾಕ್ ಬಳಿ ಗುಡ್ಡ ಕುಸಿತ, ಕರ್ನಾಟಕ ಗೋವಾ ಮಧ್ಯೆ ಸಂಚರಿಸುವ ರೈಲುಗಳು ರದ್ದು
ಕ್ಯಾಸಲ್​ ರಾಕ್​
Sahadev Mane
| Edited By: |

Updated on:Jul 26, 2023 | 2:35 PM

Share

ಬೆಳಗಾವಿ: ಕರ್ನಾಟಕ-ಗೋವಾ (Karnataka-Goa) ಗಡಿಯ ಕ್ಯಾಸಲ್ ​ರಾಕ್ (Castl Erock) ರೈಲು ನಿಲ್ದಾಣದ ವ್ಯಾಪ್ತಿಯ ಹಳಿಯ ಮೇಲೆ ಮಂಗಳವಾರ (ಜು.25) ಗುಡ್ಡ ಕುಸಿತವಾಗಿದೆ. ಈ ಹಿನ್ನೆಲೆ ಕರ್ನಾಟಕ-ಗೋವಾ ಮಧ್ಯೆ ರೈಲು ಸಂಚಾರ ಬಂದ್ (Train Cancel)​ ಆಗಿದೆ. ನೈರುತ್ಯ ರೈಲ್ವೆ ಇಲಾಖೆ ಜು.25 ರಿಂದ ಎರಡು ರೈಲುಗಳ ಸಂಚಾರ ರದ್ದು ಮಾಡಿದೆ. ಯಶವಂತಪುರದಿಂದ ವಾಸ್ಕೋ ಡ ಗಾಮಕ್ಕೆ ಹೊರಡುವ (ರೈಲು ಸಂಖ್ಯೆ 17309) ಡೈಲಿ ಎಕ್ಸ್​​ಪ್ರೆಸ್​​ ರೈಲು ಸಂಚಾರ, ವಾಸ್ಕೋ ಡ ಗಾಮದಿಂದ ಯಶವಂತಪುರಕ್ಕೆ ಹೊರಡುವ (ರೈಲು ಸಂಖ್ಯೆ 17310) ಸಂಚಾರ ರದ್ದಾಗಿದೆ.

ನೈರುತ್ಯ ರೈಲ್ವೆ ಇಲಾಖೆಯಿಂದ ನಾಲ್ಕು ಮಾರ್ಗಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಇನ್ನು ಮಂಗಳವಾರ ಯಶವಂತಪುರದಿಂದ ವಾಸ್ಕೋ ಡ ಗಾಮಕ್ಕೆ ಹೊರಟಿದ್ದ ರೈಲನ್ನು ಹುಬ್ಬಳ್ಳಿಯಲ್ಲಿಯೇ ಕೊನೆಗೊಳಿಸಲಾಗಿದೆ. ಹಾಗೇ ವಾಸ್ಕೋ ಡ ಗಾಮಕ್ಕೆ ತೆರಳಬೇಕಿದ್ದ ದೆಹಲಿ ವಾಸ್ಕೋ ಗೋವಾ ಎಕ್ಸ್​​ಪ್ರೆಸ್​​ ಬೆಳಗಾವಿಯಲ್ಲಿಯೇ ಸಂಚಾರವನ್ನು ಕೊನೆಗೊಳಿಸಿದೆ.

ಇದನ್ನೂ ಓದಿ: ಮಂಗಳೂರು ರೈಲುಗಳಿಗೆ ಕರಾವಳಿಯ ಜನಪ್ರಿಯ ವ್ಯಕ್ತಿಗಳ, ಸ್ಥಳಗಳ ಹೆಸರು ಮರುನಾಮಕರಣ?

ರೈಲು ಸಂಖ್ಯೆ 12779 ವಾಸ್ಕೋ-ಡ-ಗಾಮಾ – ಹಜರತ್ ನಿಜಾಮುದ್ದಿನ್‌ ಗೋವಾ ಎಕ್ಸ್‌ಪ್ರೆಸ್  ಮಾರ್ಗ ಬದಲಾವಣೆಯಾಗಿದೆ. ಈ ರೈಲು ಸಂವರ್ಡಮ್, ಮಡ್ಗಾಂವ್, ಮಜೋರ್ಡಾ, ಮಧುರೆ, ರೋಹಾ, ಪನ್ವೇಲ್, ಕಲ್ಯಾಣ್ ಮತ್ತು ಮನ್ಮಡ್ ಮೂಲಕ ಸಾಗಿದೆ. ಕುಲೆಂ, ಲ್ಹಾಟ್‌ರಾಕ್, ಕ್ಯಾಸ್ಟ್ಲೆರಾಕ್, ಕ್ಯಾಸಲ್‌ರಾಕ್‌ , ಬೆಳಗಾವಿ, ಸತಾರಾ, ಪುಣೆ, ದೌಂಡ್ ಅಹ್ಮದ್‌ನಗರ, ಬೇಲಾಪುರ್ ಮತ್ತು ಕೋಪರ್‌ಗಾಂವ್ ನಿಲ್ದಾಣ ಸಂಚಾರ ರದ್ದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:32 pm, Wed, 26 July 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್