AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಹಿರಾತಿನಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ; ಬೆಳಗಾವಿಯ ಖಾಸಗಿ ಹೊಟೆಲ್ ವಿರುದ್ಧ ದೂರು ದಾಖಲು

ಬೆಳಗಾವಿ ನಗರದ ಹೊಟೆಲ್ ಒಂದು ತನ್ನ ಜಾಹಿರಾತಿನಲ್ಲಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಹೊಟೆಲ್ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಕ್ಷಮೆ ಕೇಳಿದೆ.

ಜಾಹಿರಾತಿನಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ; ಬೆಳಗಾವಿಯ ಖಾಸಗಿ ಹೊಟೆಲ್ ವಿರುದ್ಧ ದೂರು ದಾಖಲು
ಹಿಂದೂ ಸಂಘಟನೆಗಳ ಮುಖಂಡರು ದೂರು ಸಲ್ಲಿಸುತ್ತಿರುವುದು
TV9 Web
| Updated By: shivaprasad.hs|

Updated on: Aug 13, 2021 | 11:11 AM

Share

ಬೆಳಗಾವಿಯ ಖಾಸಗಿ ಹೋಟೆಲ್​ ಒಂದು ಬಿರಿಯಾನಿ ಜಾಹೀರಾತಿನಲ್ಲಿ ಹಿಂದೂ ಸಂತರಿಗೆ ಅಪಮಾನ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಂಘಟನೆಗಳು ಪೊಲೀಸರಿಗೆ ದೂರು ನೀಡಿವೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ವಿಕ್ರಂ ಆಮ್ಟೆ ಅವರಿಗೆ ದೂರು ಸಲ್ಲಿಕೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೋಟೆಲ್ ಬಂದ್ ಮಾಡಲಾಗಿದ್ದು, ಸ್ಥಳಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜಾಹಿರಾತು ವಿವಾದ ಸೃಷ್ಟಿಸುತ್ತಿದ್ದಂತೆಯೇ ಪೋಸ್ಟ್ ಡಿಲೀಟ್ ಮಾಡಿ, ಹೊಟೆಲ್ ಕ್ಷಮೆಯಾಚಿಸಿದೆ.

Belagavi Protest

ಘಟನಾ ಸ್ಥಳದಲ್ಲಿ ಜಮಾಯಿಸಿರುವ ಜನರು

ಘಟನೆ ಏನು?

ಬೆಳಗಾವಿಯ ಬಸ್ ನಿಲ್ದಾಣ ಬಳಿ ಇರುವ ಖಾಸಗಿ ಹೋಟೆಲ್‌ ಒಂದು ಹಿಂದೂ ಸಂತರಿಗೆ ಅಪಮಾನವಾಗುವ ರೀತಿ ಇನ್ಸ್ಟಾಗ್ರಾಮ್‌ನಲ್ಲಿ ಜಾಹಿರಾತು ಪೋಸ್ಟ್ ಮಾಡಲಾಗಿದೆ ಎಂಬುದು ಹಿಂದೂ ಸಂಘಟನೆಗಳ ಆರೋಪ. ಜಾಹಿರಾತಿನಲ್ಲಿ ಸೇಕ್ರೆಡ್ ಗೇಮ್ಸ್ ಸೀಸನ್ 2 ವೆಬ್ ಸಿರೀಸ್​ನ ಗುರೂಜಿ ಪಾತ್ರದ ಚಿತ್ರ ಬಳಸಿ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು. ಇದಕ್ಕೆ ಬೆಳಗಾವಿಯ ಖಾಸಗಿ ಹೋಟೆಲ್ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಭುಗಿಲೆದ್ದ ಕಾರಣ, ಪೋಸ್ಟ್ ಡಿಲೀಟ್ ಮಾಡಿ ಕ್ಷಮೆಯಾಚಿಸಲಾಗಿದೆ. ಪ್ರಕರಣದ ಕುರಿತು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ಸಂಘಟನೆಗಳು ಪೊಲೀಸರಿಗೆ ದೂರು ನೀಡಿವೆ.

ಇದನ್ನೂ ಓದಿ:

ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಹಾರಾಷ್ಟ್ರ ಡಿಸಿಎಂ

ಪೊಲೀಸ್​ ಇಲಾಖೆ ಸೇರಲು ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸುವ ಯತ್ನ; ಇಬ್ಬರು ‘ಕುಳ್ಳರು’ ಅರೆಸ್ಟ್! ಏನಿವರ ಮೋಡಸ್​ ಆಪರೆಂಡಿ?

(Hindu Organizations given complaint to Police in Belagavi alleged that a private hotel dishonour Hindu Sentiments in its Ad)

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ