AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂಡಲಗಾ ಜೈಲಿನಲ್ಲಿ ಅಕ್ರಮ: ಕಾರಾಗೃಹಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ್

ಬೆಳಗಾವಿಯ ಹಿಂಡಲಗಾ ಕಾರಾಗೃಹದಲ್ಲಿ ನಡೆಯುತ್ತಿದ್ದ ಅಕ್ರಮಗಳ ಬಗ್ಗೆ ಟಿವಿ9 ವರದಿ ಮಾಡಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಜೈಲಿಗೆ ಭೇಟಿನೀಡಿ ಪರಿಶೀಲನೆ ನಡೆಸಿದರು. ಜೈಲಿನ ಅಡುಗೆ ಮನೆಗೂ ಭೇಟಿ, ಮಹಿಳಾ ಕೈದಿಗಳ ವಾರ್ಡ್‌ಗೂ ಭೇಟಿ ನೀಡಿದರು. ಹೊರಗಿನಿಂದ ಮೊಬೈಲ್‌ ಹೇಗೆ ಬರುತ್ತಿವೆ ಅಂತಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಹಿಂಡಲಗಾ ಜೈಲಿನಲ್ಲಿ ಅಕ್ರಮ: ಕಾರಾಗೃಹಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ್
ಹಿಂಡಲಗಾ ಜೈಲಿಗೆ ಗೃಹ ಸಚಿವ ಪರಮೇಶ್ವರ ಭೇಟಿ
Follow us
Sahadev Mane
| Updated By: Rakesh Nayak Manchi

Updated on: Nov 20, 2023 | 7:41 PM

ಬೆಳಗಾವಿ, ನ.20: ಹಿಂಡಲಗಾ ಕಾರಾಗೃಹದಲ್ಲಿ (Hindalga Prison) ನಡೆಯುತ್ತಿದ್ದ ಅಕ್ರಮಗಳ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಜೈಲಿಗೆ ಭೇಟಿ ನೀಡಿದ ಗೃಹ ಸಚಿವ ಡಾ.ಪರಮೇಶ್ವರ್ ಅವರು ಪರಿಶೀಲನೆ ನಡೆಸಿದರು. ಇದೇ ವೇಳೆ, ಹೊರಗಿನಿಂದ ಜೈಲಿನೊಳಗೆ ಮೊಬೈಲ್ ಹೇಗೆ ಬರುತ್ತಿದೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗದುಕೊಂಡರು.

ಕೈದಿಗಳ ಸೆಲ್‌ಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದ ಗೃಹ ಸಚಿವರು, ಜೈಲಿನ ಅಡುಗೆ ಮನೆಗೂ ಭೇಟಿ, ಮಹಿಳಾ ಕೈದಿಗಳ ವಾರ್ಡ್‌ಗೂ ಭೇಟಿ ನೀಡಿದರು. ಇದೇ ವೇಳೆ ಕೈದಿಗಳ ನಡುವೆ ಗಲಾಟೆ ಆಗದಂತೆ, ಮೊಬೈಲ್ ಬಳಸದಂತೆ ನೋಡಿಕೊಳ್ಳುವಂತೆ ಜೈಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಸುಮಾರು ಒಂದು ಗಂಟೆಗಳ ಕಾಲ ಗೃಹ ಸಚಿವರು ಜೈಲು ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಹಿಂಡಲಗಾ ಜೈಲಿಗೆ ಬೇಕಾದ ಸೌಲಭ್ಯ ನೀಡಲಾಗುವುದು. ಅಂದಿನ ಸಂದರ್ಭಕ್ಕೆ ತಕ್ಕಂತೆ ಬ್ರಿಟಿಷರು ಜೈಲು ಮಾಡಿಕೊಂಡಿದ್ದರು. ಬೆಳಗಾವಿಯ ಹಿಂಡಲಗಾ ಜೈಲನ್ನು ಆಧುನೀಕರಣ ಮಾಡಬೇಕಿದೆ ಎಂದರು.

ಇದನ್ನೂ ಓದಿ: ಕೆಇಎ ಸಂಸ್ಥೆಯಿಂದ ಪಿಎಸ್​ಐ ಪರೀಕ್ಷೆ ನಡೆಸಲು ನಿರ್ಧಾರ: ಗೃಹ ಸಚಿವ ಡಾ ಜಿ ಪರಮೇಶ್ವರ್

ಬ್ಯಾರೆಕ್ಸ್​ ಕ್ಯಾಮರಾ, ಜಾಮರ್​ ಬದಲಾವಣೆಗೆ ಪ್ರಸ್ತಾವನೆಗೆ ಸೂಚನೆ ನೀಡಲಾಗುವುದು. ಶೀಘ್ರದಲ್ಲೇ ಆಧುನೀಕತೆಗೆ ಅನುಗುಣವಾಗಿ ಸೌಲಭ್ಯ ನೀಡಲಾಗುವುದು. 10-20 ವರ್ಷದ ಹಿಂದೆ ಹಾಕಿರುವ ಜಾಮರ್ ಬದಲಾವಣೆ ಮಾಡುತ್ತೇವೆ. 5G ಜಾಮರ್ ಅಳವಡಿಸಲು ಸೂಚನೆ ನೀಡಿದ್ದೇವೆ ಎಂದರು.

ಈ ಹಿಂದೆ ಇದೇ ಜೈಲಿನಿಂದ ಕೈದಿಯೊಬ್ಬ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ, ಈ ರೀತಿ ಮುಂದೆ ಆಗದಂತೆ ಕ್ರಮ ವಹಿಸಲಾಗುವುದು. ಇದು ರಾಜ್ಯದಲ್ಲೇ ಹೈ ಸೆಕ್ಯುರಿಟಿ ಇರುವ ಜೈಲು. ಅದಕ್ಕೆ ಜೈಲಿಗೆ ಬೇಕಾದ ಸೌಲಭ್ಯ ಕೊಡಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ