AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂಡಲಗಾ ಜೈಲಿನಲ್ಲಿ ಅಕ್ರಮ: ಕಾರಾಗೃಹಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ್

ಬೆಳಗಾವಿಯ ಹಿಂಡಲಗಾ ಕಾರಾಗೃಹದಲ್ಲಿ ನಡೆಯುತ್ತಿದ್ದ ಅಕ್ರಮಗಳ ಬಗ್ಗೆ ಟಿವಿ9 ವರದಿ ಮಾಡಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಜೈಲಿಗೆ ಭೇಟಿನೀಡಿ ಪರಿಶೀಲನೆ ನಡೆಸಿದರು. ಜೈಲಿನ ಅಡುಗೆ ಮನೆಗೂ ಭೇಟಿ, ಮಹಿಳಾ ಕೈದಿಗಳ ವಾರ್ಡ್‌ಗೂ ಭೇಟಿ ನೀಡಿದರು. ಹೊರಗಿನಿಂದ ಮೊಬೈಲ್‌ ಹೇಗೆ ಬರುತ್ತಿವೆ ಅಂತಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಹಿಂಡಲಗಾ ಜೈಲಿನಲ್ಲಿ ಅಕ್ರಮ: ಕಾರಾಗೃಹಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ್
ಹಿಂಡಲಗಾ ಜೈಲಿಗೆ ಗೃಹ ಸಚಿವ ಪರಮೇಶ್ವರ ಭೇಟಿ
ಸಹದೇವ್​ ಮಾನೆ
| Edited By: Rakesh Nayak Manchi|

Updated on: Nov 20, 2023 | 7:41 PM

Share

ಬೆಳಗಾವಿ, ನ.20: ಹಿಂಡಲಗಾ ಕಾರಾಗೃಹದಲ್ಲಿ (Hindalga Prison) ನಡೆಯುತ್ತಿದ್ದ ಅಕ್ರಮಗಳ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಜೈಲಿಗೆ ಭೇಟಿ ನೀಡಿದ ಗೃಹ ಸಚಿವ ಡಾ.ಪರಮೇಶ್ವರ್ ಅವರು ಪರಿಶೀಲನೆ ನಡೆಸಿದರು. ಇದೇ ವೇಳೆ, ಹೊರಗಿನಿಂದ ಜೈಲಿನೊಳಗೆ ಮೊಬೈಲ್ ಹೇಗೆ ಬರುತ್ತಿದೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗದುಕೊಂಡರು.

ಕೈದಿಗಳ ಸೆಲ್‌ಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದ ಗೃಹ ಸಚಿವರು, ಜೈಲಿನ ಅಡುಗೆ ಮನೆಗೂ ಭೇಟಿ, ಮಹಿಳಾ ಕೈದಿಗಳ ವಾರ್ಡ್‌ಗೂ ಭೇಟಿ ನೀಡಿದರು. ಇದೇ ವೇಳೆ ಕೈದಿಗಳ ನಡುವೆ ಗಲಾಟೆ ಆಗದಂತೆ, ಮೊಬೈಲ್ ಬಳಸದಂತೆ ನೋಡಿಕೊಳ್ಳುವಂತೆ ಜೈಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಸುಮಾರು ಒಂದು ಗಂಟೆಗಳ ಕಾಲ ಗೃಹ ಸಚಿವರು ಜೈಲು ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಹಿಂಡಲಗಾ ಜೈಲಿಗೆ ಬೇಕಾದ ಸೌಲಭ್ಯ ನೀಡಲಾಗುವುದು. ಅಂದಿನ ಸಂದರ್ಭಕ್ಕೆ ತಕ್ಕಂತೆ ಬ್ರಿಟಿಷರು ಜೈಲು ಮಾಡಿಕೊಂಡಿದ್ದರು. ಬೆಳಗಾವಿಯ ಹಿಂಡಲಗಾ ಜೈಲನ್ನು ಆಧುನೀಕರಣ ಮಾಡಬೇಕಿದೆ ಎಂದರು.

ಇದನ್ನೂ ಓದಿ: ಕೆಇಎ ಸಂಸ್ಥೆಯಿಂದ ಪಿಎಸ್​ಐ ಪರೀಕ್ಷೆ ನಡೆಸಲು ನಿರ್ಧಾರ: ಗೃಹ ಸಚಿವ ಡಾ ಜಿ ಪರಮೇಶ್ವರ್

ಬ್ಯಾರೆಕ್ಸ್​ ಕ್ಯಾಮರಾ, ಜಾಮರ್​ ಬದಲಾವಣೆಗೆ ಪ್ರಸ್ತಾವನೆಗೆ ಸೂಚನೆ ನೀಡಲಾಗುವುದು. ಶೀಘ್ರದಲ್ಲೇ ಆಧುನೀಕತೆಗೆ ಅನುಗುಣವಾಗಿ ಸೌಲಭ್ಯ ನೀಡಲಾಗುವುದು. 10-20 ವರ್ಷದ ಹಿಂದೆ ಹಾಕಿರುವ ಜಾಮರ್ ಬದಲಾವಣೆ ಮಾಡುತ್ತೇವೆ. 5G ಜಾಮರ್ ಅಳವಡಿಸಲು ಸೂಚನೆ ನೀಡಿದ್ದೇವೆ ಎಂದರು.

ಈ ಹಿಂದೆ ಇದೇ ಜೈಲಿನಿಂದ ಕೈದಿಯೊಬ್ಬ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ, ಈ ರೀತಿ ಮುಂದೆ ಆಗದಂತೆ ಕ್ರಮ ವಹಿಸಲಾಗುವುದು. ಇದು ರಾಜ್ಯದಲ್ಲೇ ಹೈ ಸೆಕ್ಯುರಿಟಿ ಇರುವ ಜೈಲು. ಅದಕ್ಕೆ ಜೈಲಿಗೆ ಬೇಕಾದ ಸೌಲಭ್ಯ ಕೊಡಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ