AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಮಳೆಗೆ ಕುಸಿದ ಮನೆ, 2 ಇಟ್ಟಿಗೆಗಳಿಂದ ಸಾವಿನ ದವಡೆಯಿಂದ ಪಾರಾದ ಕುಟುಂಬ

ಬೆಳಗಾವಿಯಲ್ಲಿ ಮಳೆಯಿಂದಾಗಿ ಅನಾಹುತಗಳು ಹೆಚ್ಚಾಗಿವೆ. ಎರಡು ಗ್ರಾಮಗಳಲ್ಲಿ ಮನೆ ಕುಸಿದು ಕುಟುಂಬಸ್ಥರು ಬೀದಿ ಪಾಲಾಗಿದ್ದಾರೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹೊಸಟ್ಟಿಯಲ್ಲಿ ಮನೆ ಕುಸಿಯುವ ಮುನ್ನ 2 ಇಟ್ಟಿಗೆಗಳು ಬಿದ್ದಿದ್ದು ಎಚ್ಚೆತ್ತ ಕುಟುಂಬಸ್ಥರು ಓಡಿ ಆಚೆ ಬಂದಿದ್ದಾರೆ. ಎಲ್ಲರೂ ಆಚೆ ಬಂದ ಬಳಿಕ ಮನೆ ಕುಸಿದಿದೆ. ಈ ಮೂಲಕ ಇಟ್ಟಿಗೆಗಳು ಕುಟುಂಬದ ಪ್ರಾಣ ಉಳಿಸಿದೆ.

ಬೆಳಗಾವಿ: ಮಳೆಗೆ ಕುಸಿದ ಮನೆ, 2 ಇಟ್ಟಿಗೆಗಳಿಂದ ಸಾವಿನ ದವಡೆಯಿಂದ ಪಾರಾದ ಕುಟುಂಬ
ಮಳೆಗೆ ಕುಸಿದ ಮನೆ, 2 ಇಟ್ಟಿಗೆಗಳಿಂದ ಸಾವಿನ ದವಡೆಯಿಂದ ಪಾರಾದ ಕುಟುಂಬ
ಸಹದೇವ್​ ಮಾನೆ
| Edited By: ಆಯೇಷಾ ಬಾನು|

Updated on: Jul 20, 2024 | 9:49 AM

Share

ಬೆಳಗಾವಿ, ಜುಲೈ.20: ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು ಅನಾಹುತಗಳಿಗೇನೂ ಕಮ್ಮಿ ಇಲ್ಲ (Karnataka Rain). ರಸ್ತೆಗಳು ಕೆರೆಯಂತಾಗಿ ಅಲ್ಲಲ್ಲಿ ಗುಂಡಿ ಬೀಳುತ್ತಿದೆ. ಸೇತುವೆಗಳು ಮುಳುಗಿ ರಸ್ತೆ ಸಂಪರ್ಕ ಕಡಿತಗೊಳ್ಳುತ್ತಿದೆ. ಮಣ್ಣು ಕುಸಿದು ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಬೆಳಗಾವಿ (Belagavi) ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು ಮನೆ ಕುಸಿದಿದೆ. ಅದೃಷ್ಟವಶಾತ್ ಎರಡು ಇಟ್ಟಿಗೆಗಳಿಂದಾಗಿ ಇಡೀ ಕುಟುಂಬ ಸಾವಿನ ದವಡೆಯಿಂದ ಪಾರಾಗಿದೆ. ಮನೆ ಬೀಳುವುದಕ್ಕೂ ಮುನ್ನ ಮರಣ ಮೃದಂಗ ನಡೆಯುವ ಸೂಚನೆ ಕೊಟ್ಟ ಇಟ್ಟಿಗೆಗಳಿಂದ ಕುಟುಂಬ ಬದುಕುಳಿದಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹೊಸಟ್ಟಿಯಲ್ಲಿ ಮಳೆಗೆ ಮನೆ ಬೀಳುವ ಹಂತಕ್ಕೆ ತಲುಪಿತ್ತು. ಅದೃಷ್ಟವಶಾತ್ ಮನೆ ಬೀಳುವುದಕ್ಕಿಂತ ಮುನ್ನ ಎರಡು ಇಟ್ಟಿಗೆ ಕಲ್ಲುಗಳು ಬಿದ್ದಿವೆ. ಇದನ್ನು ಕಂಡು ಗಾಬರಿಗೊಂಡ ಕುಟುಂಬಸ್ಥರು ಮನೆಯನ್ನು ಬಿಟ್ಟು ಹೊರ ಓಡಿದ್ದಾರೆ. ಕುಟುಂಬಸ್ಥರೆಲ್ಲಾ ಮನೆಯಿಂದ ಆಚೆ ಬಂದ ಬಳಿಕ ಮನೆ ಕುಸಿದು ಬಿದ್ದಿದೆ. ತಡರಾತ್ರಿ 1 ಗಂಟೆ ಸುಮಾರಿಗೆ ನಿಂಗಪ್ಪ ಕಮತಗಿ ಎಂಬುವವರಿಗೆ ಸೇರಿದ ಮನೆ ಬಿದ್ದು ಕುಟುಂಬ ಬೀದಿಪಾಲಾಗಿದೆ.

ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಅನಾಹುತಗಳು ಹೆಚ್ಚಾಗ್ತಿವೆ. ಸದ್ಯ ಬಿದ್ದ ಮನೆಯಲ್ಲಿಯೇ ನಿಂಗಪ್ಪ ಕಮತಗಿ ಕುಟುಂಬ ಬೇರೆ ದಾರಿ ಇಲ್ಲದೆ ವಾಸಿಸುವಂತಾಗಿದೆ. ಮನೆಯ ಒಂದು ಗೋಡೆ ಉರುಳಿ ಬಿದ್ದು ಅವಾಂತರವಾಗಿದೆ. ಮನೆಯ 11 ಜನ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಕಮತಗಿ ಕುಟುಂಬ ಸರ್ಕಾರದಿಂದ ಸಿಗುವ ಪರಿಹಾರದ ನಿರೀಕ್ಷೆಯಲ್ಲಿದೆ.

ಇದನ್ನೂ ಓದಿ: ಬೆಳಗಾವಿ: ಮಳೆಯಲ್ಲೇ 5 ಕಿ.ಮೀ ಹೊತ್ತು ಸಾಗಿ ಮಹಿಳಾ ರೋಗಿ ಪ್ರಾಣ ಉಳಿಸಿದ ಕಾಡಂಚಿನ ಗ್ರಾಮಸ್ಥರು

ಇನ್ನು ಮತ್ತೊಂದೆಡೆ ಇದೇ ರೀತಿಯ ಘಟನೆ ಮರುಕಳಿಸಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಪಟ್ಟಿಹಾಳ‌ ಗ್ರಾಮದಲ್ಲಿ ನಿರಂತರ ಮಳೆಗೆ ತಡರಾತ್ರಿ ಮನೆ ಕುಸಿದು ಬಿದ್ದಿದೆ. ಮನೆ ಕುಸಿಯುತ್ತಿದ್ದಂತೆ ಮನೆಯ ಸದಸ್ಯರು ಹೊರ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬಸಪ್ಪ ಹಡಪದ ಎಂಬುವವರಿಗೆ ಸೇರಿದ ಮನೆ ಕುಸಿತವಾಗ್ತಿದ್ದಂತೆ ಐದು ಜನ ಸದಸ್ಯರು ಹೊರ ಬಂದಿದ್ದಾರೆ. ಮನೆಯ ಸಾಮಾಗ್ರಿ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡು ಕುಟುಂಬ ಬೀದಿ ಪಾಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ