AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ತನ್ನಿಂದ ದೂರ ಉಳಿದಿದ್ದ ಪತ್ನಿಯ ಶೀಲ ಶಂಕಿಸಿ ಬರ್ಬರವಾಗಿ ಹತ್ಯೆಗೈದ ಪತಿ

ಕಳೆದ 10 ವರ್ಷಗಳ ಹಿಂದೆ ಶಬಾನಾ ಮತ್ತು ಮೆಹಬೂಬ್ ಮದುವೆಯಾಗಿದ್ದರು. ದಂಪತಿಗೆ 2 ಮಕ್ಕಳಿದ್ದರೂ ಪತಿ ತನ್ನ ಪತ್ನಿಯ ಮೇಲೆ ಸಂಶಯ ಪಡುತ್ತಿದ್ದ. ಪತಿಯ ಕಿರುಕುಳಕ್ಕೆ ಬೇಸತ್ತು ಶಬಾನಾ ಗಂಡನ ಮನೆ ಬಿಟ್ಟು 2 ಮಕ್ಕಳೊಂದಿಗೆ ಸವದತ್ತಿಯಲ್ಲಿ ವಾಸಿಸುತ್ತಿದ್ದರು.

Crime News: ತನ್ನಿಂದ ದೂರ ಉಳಿದಿದ್ದ ಪತ್ನಿಯ ಶೀಲ ಶಂಕಿಸಿ ಬರ್ಬರವಾಗಿ ಹತ್ಯೆಗೈದ ಪತಿ
ಶಬಾನಾ ಮತ್ತು ಮೆಹಬೂಬ್
TV9 Web
| Edited By: ಆಯೇಷಾ ಬಾನು|

Updated on:Aug 18, 2022 | 2:52 PM

Share

ಬೆಳಗಾವಿ: ಶೀಲ ಶಂಕಿಸಿ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಶಬಾನಾ ಗೋರವನಕೊಳ್ಳ(28) ಕೊಲೆಯಾದ ಮಹಿಳೆ. ಪತಿ ಮೆಹಬೂಬ್ ಸಾಬ್ನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 10 ವರ್ಷಗಳ ಹಿಂದೆ ಶಬಾನಾ ಮತ್ತು ಮೆಹಬೂಬ್ ಮದುವೆಯಾಗಿದ್ದರು. ದಂಪತಿಗೆ 2 ಮಕ್ಕಳಿದ್ದರೂ ಪತಿ ತನ್ನ ಪತ್ನಿಯ ಮೇಲೆ ಸಂಶಯ ಪಡುತ್ತಿದ್ದ. ಪತಿಯ ಕಿರುಕುಳಕ್ಕೆ ಬೇಸತ್ತು ಶಬಾನಾ ಗಂಡನ ಮನೆ ಬಿಟ್ಟು 2 ಮಕ್ಕಳೊಂದಿಗೆ ಸವದತ್ತಿಯಲ್ಲಿ ವಾಸಿಸುತ್ತಿದ್ದರು. ಹಾಗೂ ಗಂಡನಿಂದ ವಿಚ್ಛೇದನ ಕೂಡ ಕೋರಿದ್ದರು. ಆದ್ರೆ ಇಂದು ಬೆಳಗ್ಗೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಮೆಹಬೂಬ್, ಶಬಾನಾಳ ಕೊಲೆ ಮಾಡಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪುತ್ರನ ಶಿವಗಣಾರಾಧನೆ ದಿನವೇ ತಾಯಿ ಸಾವು

ಕೊಪ್ಪಳ‌: ಪುತ್ರನ ಶಿವಗಣಾರಾಧನೆ ದಿನವೇ ತಾಯಿ ಕೊನೆಯುಸಿರೆಳೆದಂತಹ ಹೃದಯವಿದ್ರಾವಕ ಘಟನೆ ಕೊಪ್ಪಳ‌ ಜಿಲ್ಲೆ ಕುಷ್ಟಗಿಯಲ್ಲಿ ನಡೆದಿದೆ. ಆಗಸ್ಟ್ 9ರಂದು ಲೋ ಬಿಪಿ‌ಯಿಂದಾಗಿ ರವಿಕುಮಾರ್ ಮೃತಪಟ್ಟಿದ್ದರು. ಆಗಸ್ಟ್ 17ರಂದು ಅಂದರೆ ನಿನ್ನೆ ಶಿವಗಣಾರಾಧನೆ ವೇಳೆ ತಾಯಿಗೆ ಹೃದಯಾಘಾತವಾಗಿ ಮಾಬಮ್ಮ‌ ಕೆಂಗಾರಿ ನಿಧನರಾಗಿದ್ದಾರೆ. ಕೇವಲ 9 ದಿನಗಳ ಅಂತರದಲ್ಲಿ ತಾಯಿ-ಮಗ ಇಬ್ಬರೂ ಸಾವನ್ನಪ್ಪಿದ್ದಾರೆ.

ಕುಷ್ಟಗಿ ಪಟ್ಟಣದ ಅಂಬೇಡ್ಕರ್ ನಿವಾಸಿಗಳಾಗಿರೋ ರವಿಕುಮಾರ್ ಮಾಬಮ್ಮ ಶಿವಗಣಾರಾಧನೆ ದಿನವೇ ತಾಯಿ ಕೂಡ ಮೃತಪಟ್ಟಿದ್ದಾರೆ. ತಾಯಿ ಸಾವಿನ ಸುದ್ದಿ ಕೇಳಿ ಮತ್ತಿಬ್ಬರು ಮಕ್ಕಳು ಅಸ್ವಸ್ಥರಾಗಿದ್ದಾರೆ. ಬಿಪಿ ಏರುಪೇರಾಗಿ ಮತ್ತೊಬ್ಬ ಪುತ್ರ, ಗಜೇಂದ್ರಗಡ ತಹಶೀಲ್ದಾರ್ ಆಗಿರುವ ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಜನಿಕಾಂತ್ ಸಹೋದರ ನಾಗರಾಜ್ ಕೂಡ ಆಸ್ಪತ್ರೆಗೆ ದಾಖಲಾಗಿದ್ದು ಸದ್ಯ ಇಬ್ಬರು ಸಹೋದರರು ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದಾರೆ.

Published On - 2:51 pm, Thu, 18 August 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ