AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಬೇಡ’- ಶಾಸಕ ಶ್ರೀಮಂತ ಪಾಟೀಲ್

ಪಕ್ಷದ ಮುಖಂಡರು ನಮಗೆ ಏನು ಜವಾಬ್ದಾರಿ ವಹಿಸುತ್ತಾರೋ ಅದನ್ನ ಸರಿಯಾಗಿ ನಿಭಾಯಿಸುತ್ತೇವೆ. ಪಕ್ಷದಿಂದ ನಮಗೆ ಯಾವುದೇ ಅನ್ಯಾಯ ಆಗಲ್ಲ ಅಂತಾ ಪೂರ್ಣ ಭರವಸೆ ಇದೆ. ಸಚಿವ ಸ್ಥಾನ ಸಿಕ್ಕಿಲ್ಲ ಅಂತಾ ನಮಗೇನೂ ದೊಡ್ಡ ಆಘಾತವಾಗಿಲ್ಲ.

‘ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಬೇಡ’- ಶಾಸಕ ಶ್ರೀಮಂತ ಪಾಟೀಲ್
ಶಾಸಕ ಶ್ರೀಮಂತ ಪಾಟೀಲ್
TV9 Web
| Edited By: sandhya thejappa|

Updated on: Aug 17, 2021 | 10:43 AM

Share

ಬೆಳಗಾವಿ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಬೇಡ. ನಾನು ಕೆಳಗೆ ಬರೋದಿಲ್ಲ. ಮೇಲಿನ ಸ್ಥಾನ ಕೊಟ್ಟರೆ ನಿಭಾಯಿಸುವೆ. ಅದು ಪಕ್ಷಕ್ಕೂ ಸರಿ ಅಲ್ಲ, ನನಗೂ ಸರಿಯಲ್ಲ ಅಂತ ಬೆಳಗಾವಿಯಲ್ಲಿ ಶಾಸಕ ಶ್ರೀಮಂತ ಪಾಟೀಲ್ (Shrimant Patil) ಹೇಳಿದ್ದಾರೆ. ಇನ್ನು ಮರಾಠಾ ಸಮುದಾಯಕ್ಕೆ ಸಚಿವ ಸ್ಥಾನ ಸಿಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ, ಸಾಕಷ್ಟು ಸಮಯವಿದೆ, ಸಚಿವ ಸ್ಥಾನ ಕೊಡಬಹುದು. ಮರಾಠಾ ಸಮುದಾಯದವರು ಬೇಸರ ಮಾಡಿಕೊಳ್ಳಬೇಡಿ. 4 ದಿನದಲ್ಲಿ ನಿರ್ಧಾರ ಆಗುತ್ತೆ, ಜವಾಬ್ದಾರಿ ಕೊಡುತ್ತಾರೆ. ನನಗೆ ಸಚಿವ ಸ್ಥಾನ ನೀಡದಿದ್ದಕ್ಕೆ ಏನೂ ಕಾರಣ ಹೇಳಿಲ್ಲ. ನನಗೆ ಬೇರೆ ಜವಾಬ್ದಾರಿ ಕೊಡುವುದಾಗಿ ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು.

ಪಕ್ಷದ ಮುಖಂಡರು ನಮಗೆ ಏನು ಜವಾಬ್ದಾರಿ ವಹಿಸುತ್ತಾರೋ ಅದನ್ನ ಸರಿಯಾಗಿ ನಿಭಾಯಿಸುತ್ತೇವೆ. ಪಕ್ಷದಿಂದ ನಮಗೆ ಯಾವುದೇ ಅನ್ಯಾಯ ಆಗಲ್ಲ ಅಂತಾ ಪೂರ್ಣ ಭರವಸೆ ಇದೆ. ಸಚಿವ ಸ್ಥಾನ ಸಿಕ್ಕಿಲ್ಲ ಅಂತಾ ನಮಗೇನೂ ದೊಡ್ಡ ಆಘಾತವಾಗಿಲ್ಲ. ಬೇರೆ ಜವಾಬ್ದಾರಿ ಕೊಡಬಹುದು. ನಾಲ್ಕು ದಿನ ಸಚಿವ ಸ್ಥಾನ ಕೊಟ್ಟಿಲ್ಲ ಅಂದ್ರೆ ಕೈ ಬಿಟ್ಟಂಗಲ್ಲ ಅಂತ ಶಾಸಕರು ಅಭಿಪ್ರಾಯಪಟ್ಟರು.

ಕೇಳಿದ ಖಾತೆ ಕೊಡದಿದ್ದಕ್ಕೆ ಆನಂದ್ ಸಿಂಗ್ (Anand Singh) ಕ್ಯಾತೆ ತೆಗೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಾಸಕ ಶ್ರೀಮಂತ ಪಾಟೀಲ್, ಎಲ್ಲ ಖಾತೆ ದೊಡ್ಡದು, ಸಣ್ಣದು ಎಂದು ಇರುವುದಿಲ್ಲ. ಕೊಟ್ಟ ಖಾತೆಯನ್ನು ನಿಭಾಯಿಸಿಕೊಂಡು ಹೋಗಬೇಕು ಅಂತ ಸಲಹೆ ನೀಡಿದರು.

ಬಿ.ಎಸ್.ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು ದೊಡ್ಡ ನಿರ್ಧಾರ. ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷರು, ದೆಹಲಿ ಹೈಕಮಾಂಡ್ ತೆಗೆದುಕೊಂಡ ದೊಡ್ಡ ನಿರ್ಧಾರ. ಅವರು ತಗೆದುಕೊಂಡ ನಿರ್ಧಾರ ತಪ್ಪು ಅಂತಾ ಹೇಳೋಕೆ ಆಗಲ್ಲ ಎಂದು ಮಾತನಾಡಿದ ಶ್ರೀಮಂತ ಪಾಟೀಲ್, ನನಗೆ ಹಿಂದೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಜವಳಿ ಇಲಾಖೆ ಕೊಟ್ಟಿದ್ರು. ಅಲ್ಪಸಂಖ್ಯಾತ ಸಮುದಾಯ ಪಕ್ಷದತ್ತ ಬರುತ್ತಿದ್ದಾರೆ. ಅದು ದೊಡ್ಡ ಕೆಲಸ. ನಾವು ಗಡಿಬಿಡಿ ಮಾಡಬಾರದು ಕಾದು ನೋಡಬೇಕಷ್ಟೆ ಎಂದು ಹೇಳಿದರು.

ಇದನ್ನೂ ಓದಿ

ಕಾಬೂಲ್​ನ ಶಹರ್-ಇ-ನಾವ್ ಪಾರ್ಕ್​ನಲ್ಲಿ ಆಶ್ರಯ ಪಡೆದಿದ್ದ ನೂರಾರು ಮಹಿಳೆಯರು ನಾಪತ್ತೆ; ಕುಟುಂಬಗಳಿಂದ ಹುಡುಕಾಟ

ಬೆಂಗಳೂರಿನಲ್ಲಿ ಕಾಂಪೌಂಡ್ ಹಾರಿ ಎಸ್ಕೇಪ್ ಆದ 5 ವಿದೇಶಿ ಮಹಿಳೆಯರು! ಪೊಲೀಸರಿಂದ ತೀವ್ರ ಹುಡುಕಾಟ

(I would not accept the corporation board as its president said Shrimant Patil in Belagavi)

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ