AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆ ನುಗ್ಗಿದ ಮಳೆ ನೀರು; ವಿಷಯ ಕೇಳಿ ಹೃದಯಾಘಾತದಿಂದ ಮನೆ ಯಜಮಾನ ಸಾವು

ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದೆ. ಅದರಲ್ಲೂ ಕುಂದಾನಗರಿ ಬೆಳಗಾವಿಯ ಅಮನ್ ನಗರದಲ್ಲಿ ಮಳೆ ನೀರು ಮನೆಗೆ ನುಗ್ಗಿ ವೃದ್ದೆಯೊಬ್ಬರು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೊನ್ನೆಯಷ್ಟೇ ನಡೆದಿತ್ತು. ಇದು ಮಾಸುವ ಮುನ್ನವೇ ಗೋಕಾಕ್ ನಗರದ ಉಪ್ಪಾರ ಗಲ್ಲಿಯಲ್ಲಿ ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಹೃದಯಾಘಾತದಿಂದ ಮನೆ ಯಜಮಾನ ಸಾವನ್ನಪ್ಪಿದ್ದಾರೆ.

ಮನೆಗೆ ನುಗ್ಗಿದ ಮಳೆ ನೀರು; ವಿಷಯ ಕೇಳಿ ಹೃದಯಾಘಾತದಿಂದ ಮನೆ ಯಜಮಾನ ಸಾವು
ಹೃದಯಾಘಾತದಿಂದ ಮನೆ ಯಜಮಾನ ಸಾವು
ಸಹದೇವ್​ ಮಾನೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 27, 2024 | 3:44 PM

Share

ಬೆಳಗಾವಿ, ಜು.27: ರಾಜ್ಯಾದ್ಯಂತ ಆಗುತ್ತಿರುವ ಮಳೆ(Rain)ಗೆ ಅವಾಂತರಗಳು ಸೃಷ್ಟಿ ಆಗುತ್ತಿದ್ದು, ಹಲವರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇದೀಗ ಬೆಳಗಾವಿ(Belagavi) ಜಿಲ್ಲೆಯ ಗೋಕಾಕ್ ನಗರದ ಉಪ್ಪಾರ ಗಲ್ಲಿಯಲ್ಲಿ ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಹೃದಯಾಘಾತದಿಂದ ಮನೆ ಯಜಮಾನ ಸಾವನ್ನಪ್ಪಿರುವ ಘಟನೆ ನಿನ್ನೆ(ಜು.26) ಸಂಜೆ ನಡೆದಿದೆ. ದಶರಥ ಬಂಡಿ(80) ಮೃತಪಟ್ಟ ಮನೆ ಯಜಮಾನ.

ಅಂತ್ಯಸಂಸ್ಕಾರ ಮಾಡಿ ಮನೆಗೆ ಹೋಗುವಷ್ಟರಲ್ಲಿ ಮುಳುಗಿದ ಮನೆ

ಇನ್ನು ಮನೆಗೆ ನೀರು ಬರುವ ವಿಚಾರ ತಿಳಿದು ಕೊನೆಯುಸಿರೆಳೆದ ದಶರಥ ಅವರನ್ನು ನಿನ್ನೆ ರಾತ್ರಿ ಅಂತ್ಯಸಂಸ್ಕಾರ ಮಾಡಿ ಮನೆಗೆ ಹೋಗುವಷ್ಟರಲ್ಲಿ ಮನೆ ಸಂಪೂರ್ಣ ಮುಳುಗಿದೆ. ರಾತ್ರೋರಾತ್ರಿ ಉಟ್ಟ ಬಟ್ಟೆಯಲ್ಲೇ ಹೊರ ಬಂದಿದ್ದೇವೆ ಎಂದು ಮೃತ ಕುಟುಂಬ ಅಳಲು ತೋಡಿಕೊಳ್ಳುತ್ತಿದೆ. ಕೂಡಲೇ ಮಕ್ಕಳು, ನಾಯಿ ಮರಿಗಳ ಜೊತೆಗೆ ಕಾಳಜಿ ಕೇಂದ್ರಕ್ಕೆ ಶಿಪ್ಟ್ ಮಾಡಲಾಗಿದೆ. ಮನೆಯ ಯಜಮಾನ ಕಳೆದುಕೊಂಡ ಕುಟುಂಬದ ಸ್ಥಿತಿ ಅಯೋಮಯವಾಗಿದೆ. ಮೃತಪಟ್ಟ ಬಳಿಕ ಕಾರ್ಯಗಳನ್ನೂ ಮಾಡಲಾಗದೇ ಕುಟುಂಬ ಪರದಾಟ ನಡೆಸಿದೆ. ಇನ್ನು ಈ ಮೂಲಕ ಹದಿನೇಳು ಜನರು ಕಾಳಜಿ ಕೇಂದ್ರದಲ್ಲಿ ವಾಸ್ತವ್ಯ ಹೂಡಿದ್ದಾರೆ.

ಇದನ್ನೂ ಓದಿ:ಬೆಳಗಾವಿಯಲ್ಲಿ ನದಿಗಳ ಅಬ್ಬರ: ನೀರಲ್ಲಿ ನಿಂತ ಮನೆ, ಬೆಳೆ, ಸೇತುವೆ ಮುಳುಗಡೆ; ಇಲ್ಲಿದೆ ಫೋಟೋಸ್​

ಮನೆಗೆ ಮಳೆ ನೀರು ನುಗ್ಗಿ ಜಾರಿ ಬಿದ್ದ ವೃದ್ಧೆ, ಸ್ಥಳದಲ್ಲೇ ಸಾವು

ಇನ್ನು ಜು.25 ರಂದು ಬೆಳಗಾವಿಯ ಅಮನ್ ನಗರದಲ್ಲಿದಲ್ಲಿ ಮಳೆ ನೀರು ಮನೆಗೆ ನುಗ್ಗಿ ವೃದ್ದೆಯೊಬ್ಬರು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿತ್ತು. ಮಹಬೂಬಿ ಅದಂಸಾಹೇಬ್ ಮಕಾಂದಾರ್(79) ಮೃತ ದುರ್ದೈವಿ. ನಿರಂತರ ಮಳೆಯಿಂದ ಕಾಲೋನಿಗೆ ಡ್ರೈನೇಜ್ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ಮೃತ ಮಹಬೂಬಿ ಅವರ ಶವ ಸಾಗಿಸಲು ಕಾಲೋನಿಯ ಜನರು ಪರದಾಡಿದ್ದರು. ಬಳಿಕ ಮೊಳಕಾಲುದ್ದ ನೀರಲ್ಲಿಯೇ ಶವ ಸಾಗಿಸಿ ಅಂತ್ಯ ಸಂಸ್ಕಾರ ನೆರವೇರಿಸಿದ್ದರು. ಇದೀಗ ಮಳೆ ಅವಾಂತರ ಮತ್ತೊಂದು ಬಲಿ ಪಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!