AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಜೊತೆ ಅಸಭ್ಯ ವರ್ತನೆ,ಪಿಎಸ್ಐ ಅಮಾನತು; ಠಾಣೆಯ ಸಿಪಿಐ, ಸಿಬ್ಬಂದಿ ವಿರುದ್ಧ ಸಿಡಿದೆದ್ದ ಸಸ್ಪೆಂಡೆಡ್ ಪಿಎಸ್ಐ

ಹುಕ್ಕೇರಿಯಲ್ಲಿ ಚಿನ್ನಾಭರಣ ಖರೀದಿಗೆ ಹಣ ಬೇಕು ವಾಪಸ್ ಕೊಡುತ್ತೇನೆ ಎಂದು ಪಡೆದಿದ್ದಳು. ಇದಾದ ಬಳಿಕ ಆ ಮಹಿಳೆಯ ಮತ್ತು ನನ್ನ ಮಧ್ಯೆ ಮುನಿಸು ಬಂತು, ಆಗ ಎಸ್‌ಪಿಗೆ ದೂರು ನೀಡುತ್ತೇನೆ ಎಂದಳು. ಡಿ.19ರ ರಾತ್ರಿ ಸಂಕೇಶ್ವರ ಸಿಪಿಐ ಶಿವಶರಣ ಅವಜಿ ಆ ಮಹಿಳೆ ಬಳಿ ಅರ್ಜಿ ಪಡೆಯುವ ಮಾಹಿತಿ ಬಂತು, ಆಕೆಯ ಬಳಿ ಸಿಪಿಐ ಶಿವಶರಣ ಅವಜಿ ಅರ್ಜಿ ಪಡೆದು ಅದನ್ನು ಎಸ್‌ಪಿ ಸಾಹೇಬ್ರಿಗೆ ಕಳಿಸಿದರು. ಎಸ್‌ಪಿ ಸಾಹೇಬ್ರು ಒಂದೇ ದಿನದಲ್ಲಿ ಅಮಾನತು ಮಾಡಿದ್ದಾರೆ ಎಂದು ಸಸ್ಪೆಂಡ್​ ಪಿಎಸ್​ಐ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳೆ ಜೊತೆ ಅಸಭ್ಯ ವರ್ತನೆ,ಪಿಎಸ್ಐ ಅಮಾನತು; ಠಾಣೆಯ ಸಿಪಿಐ, ಸಿಬ್ಬಂದಿ ವಿರುದ್ಧ ಸಿಡಿದೆದ್ದ ಸಸ್ಪೆಂಡೆಡ್ ಪಿಎಸ್ಐ
ಸಸ್ಪೆಂಡ್​ ಪಿಎಸ್​ಐ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on:Dec 25, 2023 | 4:13 PM

Share

ಬೆಳಗಾವಿ, ಡಿ.25: ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪದಡಿ ಜಿಲ್ಲೆಯ ಹುಕ್ಕೇರಿ(Hukkeri)ತಾಲೂಕಿನ ಸಂಕೇಶ್ವರ ಪಟ್ಟಣ ಠಾಣೆಯ ಪಿಎಸ್ಐ ಅಮಾನತು ಮಾಡಲಾಗಿತ್ತು. ಈ ಹಿನ್ನಲೆ ಸಿಡಿದೆದ್ದ ಸಸ್ಪೆಂಡೆಡ್ ಪಿಎಸ್ಐ(Suspended PSI)ನರಸಿಂಹರಾಜು ತಮ್ಮ ಠಾಣೆಯ ಸಿಪಿಐ ಹಾಗೂ ಸಿಬ್ಬಂದಿ ವಿರುದ್ಧ ಕಿಡಿಕಾರಿದ್ದಾರೆ.  ಸಂಕೇಶ್ವರ ಠಾಣೆ ಸಿಪಿಐ ಮತ್ತು ಕೆಲ ಸಿಬ್ಬಂದಿ ವಿರುದ್ಧ ಪಿಎಸ್ಐ ಗಂಭೀರ ಆರೋಪ ಮಾಡಿದ್ದಾರೆ. ನನ್ನ ವಿರುದ್ದ ಮಹಿಳೆ, ಸಿಪಿಐ, ಕೆಲ ಪೊಲೀಸ್ ಸಿಬ್ಬಂದಿ ಸೇರಿ ಷಡ್ಯಂತ್ರ ಮಾಡಿದ್ದಾರೆ ಎಂದಿದ್ದಾರೆ.

ತಂಗಿಯೆಂದು ಆ ಮಹಿಳೆಗೆ ಸಹಾಯ ಮಾಡಿದ್ದೆ ಎಂದ ಪಿಎಸ್​ಐ

ಸಂಕೇಶ್ವರದಲ್ಲಿ ಅಮಾನತುಗೊಂಡ ಪಿಎಸ್ಐ ನರಸಿಂಹರಾಜು ದಿಢೀರ್ ಸುದ್ದಿಗೋಷ್ಠಿ ನಡೆಸಿ, ‘ನಾಲ್ಕು ತಿಂಗಳ ಹಿಂದೆ ಅಕ್ಕ-ಪಕ್ಕದವರ ಜಗಳ ಸಂಬಂಧ ಮಹಿಳೆ ದೂರು ನೀಡಿದ್ದಳು. ಈ ವೇಳೆ ಆಕೆಯ ನಂಬರ್ ಪಡೆದು ನನ್ನ ನಂಬರ್ ನೀಡಿದ್ದೆ. ತನ್ನ ಮಗನಿಗೆ ಹೃದಯಸಂಬಂಧಿ ಕಾಯಿಲೆ ಇದೆ ಎಂದು ಸಹಾಯಕ್ಕೆ ಮನವಿ ಮಾಡಿದ್ದಳು. ತಂಗಿಯಾಗಿ, ಸ್ನೇಹಿತೆಯಾಗಿ ಒಳ್ಳೆಯ ಬಾಂಧವ್ಯದಿಂದ ಇದ್ದು, ಗೂಗಲ್ ಪೇ  ಮೂಲಕ ಸಣ್ಣಪುಟ್ಟ ಹಣದ ಸಹಾಯ ಮಾಡಿದ್ದೇನೆ.

ಇದನ್ನೂ ಓದಿ:ಚೆಕ್​ಪೋಸ್ಟ್ ಬಳಿ ಅಮಾಯಕರಿಗೆ ಕಿರುಕುಳ, ಹಣ ವಸೂಲಿ.. ರಾಯಲ್ಪಾಡು ಪೊಲೀಸ್ ಠಾಣೆ ಪಿಎಸ್ಐ ಅಮಾನತು

ಹುಕ್ಕೇರಿಯಲ್ಲಿ ಚಿನ್ನಾಭರಣ ಖರೀದಿಗೆ ಹಣ ಬೇಕು ವಾಪಸ್ ಕೊಡುತ್ತೇನೆ ಎಂದು ಪಡೆದಿದ್ದಳು. ಇದಾದ ಬಳಿಕ ಆ ಮಹಿಳೆಯ ಮತ್ತು ನನ್ನ ಮಧ್ಯೆ ಮುನಿಸು ಬಂತು, ಆಗ ಎಸ್‌ಪಿಗೆ ದೂರು ನೀಡುತ್ತೇನೆ ಎಂದಳು. ಡಿ.19ರ ರಾತ್ರಿ ಸಂಕೇಶ್ವರ ಸಿಪಿಐ ಶಿವಶರಣ ಅವಜಿ ಆ ಮಹಿಳೆ ಬಳಿ ಅರ್ಜಿ ಪಡೆಯುವ ಮಾಹಿತಿ ಬಂತು, ಆಕೆಯ ಬಳಿ ಸಿಪಿಐ ಶಿವಶರಣ ಅವಜಿ ಅರ್ಜಿ ಪಡೆದು ಅದನ್ನು ಎಸ್‌ಪಿ ಸಾಹೇಬ್ರಿಗೆ ಕಳಿಸಿದರು. ಎಸ್‌ಪಿ ಸಾಹೇಬ್ರು ಒಂದೇ ದಿನದಲ್ಲಿ ಅಮಾನತು ಮಾಡಿದ್ದಾರೆ. ಆಕೆ ಪೊಲೀಸ್ ಠಾಣೆಗೆ ಬಂದಿಲ್ಲ, ಅವರ ಮನೆಗೆ ಹೋಗಿ ಸಿಪಿಐ ದೂರು ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಸಿಪಿಐ ಹಾಗೂ ನಮ್ಮ ಮಧ್ಯೆ ವೈಮನಸ್ಸು

ಸಂಕೇಶ್ವರ ಠಾಣೆ ಸಿಬ್ಬಂದಿ ಉಪಯೋಗಕ್ಕೆ ಲ್ಯಾಪ್ ಟಾಪ್ ಸೇರಿ ಇತರ ಉಪಕರಣ ಬೇಕಾಗಿ ಸ್ಥಳೀಯ ಫ್ಯಾಕ್ಟರಿಗೆ ರಿಕ್ವೆಸ್ಟ್ ಕೊಟ್ಟಿದೇವು, ಆಗ ಸಿಪಿಐ ಮೂರು ಲಕ್ಷ ರೂ ವೆಚ್ಚದಲ್ಲಿ ತಮ್ಮ ಛೇಂಬರ್ ನವೀಕರಣ ಮಾಡಿ ಎಸಿ ಹಾಕಿಸಿಕೊಂಡರು. ಇದನ್ನು ಪ್ರಶ್ನಿಸಿದ್ದಕ್ಕೆ ಸಿಪಿಐ ಹಾಗೂ ನಮ್ಮ ಮಧ್ಯೆ ವೈಮನಸ್ಸು ಬಂತು. ಈ ಉದ್ದೇಶಕ್ಕಾಗಿ ಮಹಿಳೆ ಬಳಿ ದೂರು ಪಡೆದು ಅಮಾನತು ಮಾಡಿಸಿದ್ದಾರೆ ಎಂದು ಸಿಪಿಐ ವಿರುದ್ದ ಗಂಭೀರ ಆರೋಪ ಮಾಡಿಸಿದ್ದಾರೆ.

ಇದನ್ನೂ ಓದಿ: ಪಿಎಸ್ಐ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಕಲಬುರಗಿ 11 ಪೊಲೀಸ್ ಸಿಬ್ಬಂದಿ ಅಮಾನತು!

ಕೆಲ ಪೊಲೀಸ್ ಸಿಬ್ಬಂದಿ ಕಾಣದ ಕೈಗಳು ಇದರಲ್ಲಿ ಕೆಲಸ ಮಾಡಿವೆ

ಇನ್ನು ದೂರು ನೀಡಿದ ಮಹಿಳೆ ಹಾಗೂ ನನ್ನನ್ನು ಕರೆಯಿಸಿ ವಿಚಾರಣೆ ನಡೆಸದೇ ಅಮಾನತು ಮಾಡಿದ್ದಾರೆ. ಮೇಲ್ವರ್ಗದ ಸಿಪಿಐ ಕೆಳವರ್ಗದ ಪಿಎಸ್ಐ ಓಡಿಸಬೇಕೆಂಬ ಉದ್ದೇಶದಿಂದ ಹೀಗೆ ಮಾಡಿದ್ದಾರೆ. ಕೆಲ ಪೊಲೀಸ್ ಸಿಬ್ಬಂದಿ ಕಾಣದ ಕೈಗಳು ಇದರಲ್ಲಿ ಕೆಲಸ ಮಾಡಿವೆ. ಇಬ್ಬರನ್ನೂ ಕರೆಯಿಸಿ ಸಿಪಿಐ ವಿಚಾರಣೆ ಮಾಡಬಹುದಿತ್ತು. ಗೌಪ್ಯವಾಗಿ ವರದಿ ಸಲ್ಲಿಸಿದ್ದಾರೆ, ಎಸ್‌ಪಿ ಆಗಲಿ ಸಿಪಿಐ ಆಗಲಿ ಸ್ಪಷ್ಟನೆ ಕೇಳಿಲ್ಲ. ಮುಂದೆ ಯಾವ ಸಿಬ್ಬಂದಿಗೂ ಈ ರೀತಿ ಆಗಬಾರದು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:12 pm, Mon, 25 December 23

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು