AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮತ್ತೆ ಕನ್ನಡ ನಾಮಫಲಕಕ್ಕೆ ಮಸಿ

ಈ ನಾಮಫಲಕಕ್ಕೆ ಕಿಡಿಗೇಡಿಗಳು ಮಸಿ ಬಳಿಯುವ ಮೂಲಕ ಬೆಳಗಾವಿಯಲ್ಲಿ ಮತ್ತೆ ಅಶಾಂತಿ ಹುಟ್ಟುಹಾಕುವ ಹುನ್ನಾರ ನಡೆಸಲಾಗಿದೆ ಎಂಬ ಆತಂಕ ವ್ಯಕ್ತವಾಗಿದೆ

ಬೆಳಗಾವಿಯಲ್ಲಿ ಮತ್ತೆ ಕನ್ನಡ ನಾಮಫಲಕಕ್ಕೆ ಮಸಿ
ಬೆಳಗಾವಿ ಜಿಲ್ಲೆಯಲ್ಲಿ ಕನ್ನಡ ಅಕ್ಷರಗಳಿಗೆ ಮಸಿ ಬಳಿಯಲಾಗಿದೆ.
TV9 Web
| Edited By: |

Updated on:Jan 16, 2022 | 11:11 PM

Share

ಬೆಳಗಾವಿ: ಬೆಳಗಾವಿಯಲ್ಲಿ ಈಗ ಮತ್ತೆ ಕಿಡಿಗೇಡಿಗಳು ಶಾಂತಿ ಕದಡುವ ಕೆಲಸ ಮಾಡಿದ್ದು, ಕನ್ನಡ ನಾಮಫಲಕಕ್ಕೆ ಮಸಿ ಬಳಿಯುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಹುನ್ನಾರ ಮಾಡಿದ್ದಾರೆ. ತಾಲೂಕಿನ ಕಂಗ್ರಾಳಿ ಕೆ.ಎಚ್.ಗ್ರಾಮದ ರಸ್ತೆ ಮಾರ್ಗದಲ್ಲಿ ಇರುವ ರಸ್ತೆಸಂಚಾರ ಜಾಗೃತಿ ಮೂಡಿಸುವ ಫಲಕಕ್ಕೆ ಕಿಡಿಗೇಡಿಗಳು ಕಪ್ಪುಮಸಿ ಬಳಿದಿದ್ದಾರೆ. ಲೋಕೋಪಯೋಗಿ ಇಲಾಖೆ ಅಳವಡಿಸಿದ್ದ ಈ ನಾಮಫಲಕಕ್ಕೆ ಕಿಡಿಗೇಡಿಗಳು ಮಸಿ ಬಳಿಯುವ ಮೂಲಕ ಬೆಳಗಾವಿಯಲ್ಲಿ ಮತ್ತೆ ಅಶಾಂತಿ ಹುಟ್ಟುಹಾಕುವ ಹುನ್ನಾರ ನಡೆಸಲಾಗಿದೆ ಎಂಬ ಆತಂಕ ವ್ಯಕ್ತವಾಗಿದೆ.

ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯುವ ವೇಳೆ ಬೆಳಗಾವಿಯಲ್ಲಿ ವಾಹನಗಳ ಕಲ್ಲುತೂರಾಟ ನಡೆಸಲಾಗಿತ್ತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೂ ಅವಮಾನ ಮಾಡಲಾಗಿತ್ತು. ಬೆಳಗಾವಿಯಲ್ಲಿ ಎಂಇಎಸ್​ ಕಾರ್ಯಕರ್ತರು ನಡೆಸಿದ ಆಟಾಟೋಪಕ್ಕೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿಯೂ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರವು ವಿಧಾನಮಂಡಲ ಅಧಿವೇಶನ ನಡೆಸುವಾಗ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಲವು ರೀತಿಯಲ್ಲಿ ತೊಂದರೆ ನೀಡಲು ಮುಂದಾಗಿತ್ತು. ಎಂಇಎಸ್ ಆಯೋಜಿಸಲು ಉದ್ದೇಶಿಸಿದ್ದ ಮಹಾಮೇಳಾವಕ್ಕೆ ಕರ್ನಾಟಕ ಸರ್ಕಾರ ಅನುಮತಿ ನೀಡಿರಲಿಲ್ಲ. ಪರ-ವಿರೋಧ ಪ್ರತಿಭಟನೆಗಳು ಹಾಗೂ ಎಂಇಎಸ್​ ನಾಯಕ ದೀಪಕ್ ದಳವಿಗೆ ಮಸಿ ಎರಚಿದ ಘಟನೆಯೂ ವರದಿಯಾಗಿತ್ತು. ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಬಂದ್​ಗೆ ಕರೆ ನೀಡಿದ್ದವು. ಕೊನೇ ಗಳಿಗೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯಪ್ರವೇಶದಿಂದ ಬಂದ್ ಕರೆಯನ್ನು ಹಿಂಪಡೆದ ಅಂಶವನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಇದನ್ನೂ ಓದಿ: ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಕಂದಮ್ಮಗಳು ನಿಗೂಢ ಸಾವು; ಪೊಲೀಸರಿಂದ ತನಿಖೆ ಆರಂಭ ಇದನ್ನೂ ಓದಿ: ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಉದ್ಧಟತನ; ನಿಷೇಧಿಸಿ ಎಂದು ಕರ್ನಾಟಕ ಸರ್ಕಾರಕ್ಕೆ ಸವಾಲ್

Published On - 11:10 pm, Sun, 16 January 22

Follow Us
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್