AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತ್ರೆ ಗಲಾಟೆ ಕೊಲೆಯಲ್ಲಿ ಅಂತ್ಯ: ಸಿನಿಮಾ ರೀತಿಯಲ್ಲಿ ಸ್ಕೆಚ್ ಹಾಕಿ ಕುಸ್ತಿ ಪೈಲ್ವಾನ್​ ಹತ್ಯೆ

ಬೆಳಗಾವಿಯ ಗೋಕಾಕ್ ತಾಲೂಕಿನಲ್ಲಿ ಜಾತ್ರೆಯಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ನಡೆದಿದೆ. ಈ ಕೃತ್ಯದಲ್ಲಿ ಭಾಗಿಯಾದ ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಾದ ಯುವಕ ಮತ್ತು ಆರೋಪಿಗಳು ರೀಲ್ಸ್‌ ಹಾಕಿದ್ದರು. ಈ ವಿಚಾರ ಕೂಡ ಕೊಲೆಗೆ ಕಾರಣವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿರುವುದಾಗಿ ಪೊಲೀಸರು ಹೇಳಿದ್ದಾರೆ.

ಜಾತ್ರೆ ಗಲಾಟೆ ಕೊಲೆಯಲ್ಲಿ ಅಂತ್ಯ: ಸಿನಿಮಾ ರೀತಿಯಲ್ಲಿ ಸ್ಕೆಚ್ ಹಾಕಿ ಕುಸ್ತಿ ಪೈಲ್ವಾನ್​ ಹತ್ಯೆ
ಜಾತ್ರೆ ಗಲಾಟೆ ಕೊಲೆಯಲ್ಲಿ ಅಂತ್ಯ: ಸಿನಿಮಾ ರೀತಿಯಲ್ಲಿ ಸ್ಕೆಚ್ ಹಾಕಿ ಕುಸ್ತಿ ಪೈಲ್ವಾನ್​ ಹತ್ಯೆ
Sahadev Mane
| Updated By: ಗಂಗಾಧರ​ ಬ. ಸಾಬೋಜಿ|

Updated on:Jan 20, 2025 | 3:18 PM

Share

ಬೆಳಗಾವಿ, ಜನವರಿ 20: ರೀಲ್ಸ್ ಹಾಕಿ ಉರಿಸಿದ್ದಕ್ಕೆ ಕುಸ್ತಿ ಪೈಲ್ವಾನ್​ ಅ​ನ್ನು ಸಿನಿಮಾ ಶೈಲಿಯಲ್ಲಿ ಸ್ಕೆಚ್ ಹಾಕಿ ಕೊಲೆ (kill) ಮಾಡಿರುವಂತಹ ಘಟನೆ ಜ.15ರಂದು ಜಿಲ್ಲೆಯ ಗೋಕಾಕ ತಾಲೂಕಿನ ಕೊಳವಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಪ್ರಕಾಶ್ ಇರಟ್ಟಿ(26) ಕೊಲೆಯಾದ ಯುವಕ. ಇಬ್ಬರು ಬಾಲಾಪರಾಧಿ ಸೇರಿ ಒಟ್ಟು 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರವಿಚಂದ್ರ ಪಾತ್ರೋಟ್, ಉಮೇಶ್ ಕಂಬಾರ್, ಮಾರುತಿ ವಡ್ಡರ್, ಅಭಿಷೇಕ್ ಪಾತ್ರೋಟ್, ಮನೋಜ್ ಪಾತ್ರೋಟ್, ವಿಜಯ್ ಕುಮಾರ್ ನಾಯಿಕ್ ಸೇರಿ ಇಬ್ಬರು ಬಾಲಾಪರಾಧಿಗಳು ಬಂಧಿತರು. ಪ್ರಕಾಶ್ ಚಲನವಲನ ಬಗ್ಗೆ ಮಾಹಿತಿ ನೀಡಲು ಆರೋಪಿಗಳು ಅಪ್ರಾಪ್ತರನ್ನು ಇನ್ಫಾರ್ಮರ್ ಆಗಿ ಬಳಸಿಕೊಂಡಿದ್ದರು.

ಪೈಲ್ವಾನ್ ಕೊಲೆಗೆ ಕಾರಣವಾಯ್ತು ಆ ಎರಡು ರೀಲ್ಸ್

ಕೊಳವಿ ಜಾತ್ರೆಯಲ್ಲಿ ಪ್ರಕಾಶ್ ಇರಟ್ಟಿ ಮತ್ತು ರವಿಚಂದ್ರ ಪಾತ್ರೋಟ್ ನಡುವೆ ಗಲಾಟೆಯಾಗಿತ್ತು. ಗಲಾಟೆ ಬಳಿಕ ಎರಡು ರೀಲ್ಸ್ ಹಾಕಿ ರವಿಚಂದ್ರ ನನ್ನು ಕೊಲೆಯಾದ ಪ್ರಕಾಶ್ ಉರಿಸಿದ್ದಾನೆ.​​ ಹೂಲಿಕಟ್ಟಿ ಗ್ರಾಮದ ಶಿವಲಿಂಗೇಶ್ವರ ಜಾತ್ರೆಗೆ ಪ್ರಕಾಶ್ ಹೋಗಿದ್ದಾನೆ. ಪ್ರಕಾಶ್ ಬರುವುದನ್ನು ಕಾದು ಕುಳಿತಿದ್ದ ಆರೋಪಿಗಳು ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಎಸ್‌ಪಿ ಡಾ.ಭೀಮಾಶಂಕರ್ ಗುಳೇದ್ ಹೇಳಿದ್ದಿಷ್ಟು

ಪ್ರಕರಣ ಕುರಿತಾಗಿ ಬೆಳಗಾವಿ ಎಸ್‌ಪಿ ಡಾ.ಭೀಮಾಶಂಕರ್ ಗುಳೇದ್​ ಪ್ರತಿಕ್ರಿಯಿಸಿದ್ದು, ಜ.14‌ರಂದು ಗೋಕಾಕ್ ತಾಲೂಕಿನ ಕೊಳವಿ ಹುಲಿಕಟ್ಟಿ ಗ್ರಾಮದ ಮಧ್ಯೆ ಕೊಲೆಯಾಗಿತ್ತು. ಕೊಳವಿ ಗ್ರಾಮದ ಪ್ರಕಾಶ್ ಇರಟ್ಟಿ ಎಂಬಾತ ಕೊಲೆಯಾಗಿದ್ದ. ಹುಲಿಕಟ್ಟಿ ಜಾತ್ರೆ ಮುಗಿಸಿ ವಾಪಾಸ್ ಮನೆಗೆ ಹೋಗುವಾಗ ಅಡ್ಡಗಟ್ಟಿ ಹತ್ಯೆ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಎಂಟು ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೂಕ ಪ್ರಾಣಿ ಮೇಲೆ ಇದೆಂಥಾ ಕ್ರೌರ್ಯ: ನಾಯಿಯನ್ನ ಕೊಂದು ಆಟೋಗೆ ಕಟ್ಟಿ ಎಳೆದೊಯ್ದ ವ್ಯಕ್ತಿ

ಕೆಲ ತಿಂಗಳ ಹಿಂದೆ ಗೂಳಿ ಬಸವೇಶ್ವರ ಜಾತ್ರೆ ನಡೆದು ವಾದ ವಿವಾದ ಆಗಿತ್ತು. ಊರಿನ ಹಿರಿಯರು ಆರೋಪಿ ವಿಜಯ್ ಗೆ ಮತ್ತು ಪ್ರಕಾಶ್ ಗೆ ಬುದ್ದಿವಾದ ಹೇಳಿದ್ದರು. ಇದಾದ ಬಳಿಕ ಹುಲಿಕಟ್ಟಿ ಜಾತ್ರೆಗೆ ಹೋಗಿದ್ದ ಪ್ರಕಾಶ್ ಹತ್ಯೆಗೆ ಸ್ಕೇಚ್ ಹಾಕುತ್ತಾರೆ. ಒಂದು ಟೀಮ್ ಆತನ ಹಿಂಬಾಲಿಸಿದ್ತೇ ಮತ್ತೊಂದು ಟೀಮ್ ಹತ್ಯೆ ಮಾಡಿದೆ. ಆರೋಪಿ ಮತ್ತು ಕೊಲೆಯಾದ ಯುವಕರು ರೀಲ್ಸ್​ಗಳನ್ನ ಹಾಕಿಕೊಂಡಿದ್ದರು. ಈ ವಿಚಾರ ಕೂಡ ಕೊಲೆಗೆ ಕಾರಣವಾಗಿದೆ ಅನ್ನೋ ಮಾಹಿತಿ ಇದೆ. ಈ ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:16 pm, Mon, 20 January 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ