AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಪತಿ ಹೇಮಂತ್ ಖಾಕಿ ಕಳಚುವುದಿಲ್ಲ; ಖಾದಿ ತೊಡುವುದಿಲ್ಲ ಎಂದ ಪತ್ನಿ ಅಂಜಲಿ ನಿಂಬಾಳ್ಕರ್

IPS Hemant Nimbalkar: ಕಾನೂನು ಪದವಿ ಪೂರೈಸಿದ ಬಳಿಕ ಮತ್ತೆ ಐಪಿಎಸ್ ಅಧಿಕಾರಿಯಾಗಿ ಭಾರತೀಯ ಆಡಳಿತ ಸೇವೆ ಮುಂದುವರಿಸಲಿದ್ದಾರೆ. ಯಾವುದೇ ಕಾರಣಕ್ಕೂ ಅವರು ರಾಜಕೀಯಕ್ಕೆ ಬರುವುದಿಲ್ಲ ಎಂದು ಖಾನಾಪುರ ಕಾಂಗ್ರೆಸ್​ ಶಾಸಕಿ ಅಂಜಲಿ ನಿಂಬಾಳ್ಕರ್ ತಿಳಿಸಿದ್ದಾರೆ.

ತಮ್ಮ ಪತಿ ಹೇಮಂತ್ ಖಾಕಿ ಕಳಚುವುದಿಲ್ಲ; ಖಾದಿ ತೊಡುವುದಿಲ್ಲ ಎಂದ ಪತ್ನಿ ಅಂಜಲಿ ನಿಂಬಾಳ್ಕರ್
ಪತಿ ಹೇಮಂತ್ ನಿಂಬಾಳ್ಕರ್ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ; ರಾಜಕಾರಣಕ್ಕೆ ಬರಲ್ಲ - ಅಂಜಲಿ ನಿಂಬಾಳ್ಕರ್
TV9 Web
| Edited By: |

Updated on:Apr 09, 2022 | 4:38 PM

Share

ಬೆಳಗಾವಿ: ತಮ್ಮ ಪತಿ ಹೇಮಂತ್ ನಿಂಬಾಳ್ಕರ್ ಐಪಿಎಸ್ ಹುದ್ದೆಗೆ (IPS Hemant Nimbalkar) ರಾಜೀನಾಮೆ ನೀಡುವುದಿಲ್ಲ; ಅವರು ರಾಜಕಾರಣಕ್ಕೆ ಬರಲ್ಲ. ಸದ್ಯಕ್ಕೆ ಅವರು ಕಾನೂನು ಪದವಿ ಪಡೆಯುತ್ತಿದ್ದಾರೆ. ಹಾಗಾಗಿ ಅವರೀಗ ಬೆಂಗಳೂರಿನಲ್ಲಿದ್ದು, ಕಾನೂನು ಪದವಿ ಪಡೆಯುತ್ತಿದ್ದಾರೆ. ಈಗ ವಿದ್ಯಾಭ್ಯಾಸಕ್ಕಾಗಿ ಎರಡು ವರ್ಷ ರಜೆ ಪಡೆದಿದ್ದಾರೆ. ಕಾನೂನು ಪದವಿ ಪೂರೈಸಿದ ಬಳಿಕ ಮತ್ತೆ ಐಪಿಎಸ್ ಅಧಿಕಾರಿಯಾಗಿ ಭಾರತೀಯ ಆಡಳಿತ ಸೇವೆ ಮುಂದುವರಿಸಲಿದ್ದಾರೆ. ಯಾವುದೇ ಕಾರಣಕ್ಕೂ ಅವರು ರಾಜಕೀಯಕ್ಕೆ ಬರುವುದಿಲ್ಲ ಎಂದು ಖಾನಾಪುರ ಕಾಂಗ್ರೆಸ್​ ಶಾಸಕಿ ಅಂಜಲಿ ನಿಂಬಾಳ್ಕರ್ ತಿಳಿಸಿದ್ದಾರೆ (Anjali Nimbalkar).

ಪತಿ ಹೇಮಂತ್ ನಿಂಬಾಳ್ಕರ್ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ ಎಂದು ಬೆಳಗಾವಿಯಲ್ಲಿ ಹೇಳಿರುವ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಬೆಂಗಳೂರಿನಲ್ಲಿ ಕಾನೂನು ಪದವಿ ವಿದ್ಯಾಭ್ಯಾಸಕ್ಕಾಗಿ ಎರಡು ವರ್ಷ ರಜೆ ಪಡೆದಿದ್ದಾರೆ. ನಾನೂ ನಿತ್ಯ ಮೂರು ಸಲ ಪತಿ ಜೊತೆ ಫೋನ್ ನಲ್ಲಿ ಮಾತನಾಡುತ್ತೇನೆ. ರಾಜಕೀಯ ಸೇರುವ ವಿಷಯವನ್ನು ಅವರು ನನ್ನ ಜೊತೆಗೆ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ದಾರುಣ: ದಾವಣಗೆರೆ ಜಿಲ್ಲೆಯ ಗ್ರಾಮದಲ್ಲಿ ಆಂಬುಲೆನ್ಸ್​ನಲ್ಲಿ ಆಕ್ಸಿಜನ್ ಕೊರತೆ, ಕೊನೆಯುಸಿರೆಳೆದ ನವಜಾತ ಶಿಶು ರಾಜ್ಯದ ಗ್ರಾಮೀಣ ಭಾಗದಲ್ಲಿ ನಿನ್ನೆ ತಡರಾತ್ರಿ 2 ಗಂಟೆಗೆ ಮಹಿಳೆಯೊಬ್ಬರಿಗೆ ಹೆರಿಗೆಯಾಗಿದ್ದು, ನವಜಾತ ಶಿಶುವಿನಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಾಗ, ಆ ಮಗುವನ್ನು ಮತ್ತೊಮದು ಆಸ್ಪತ್ರೆ ಸಾಗಿಸುವಾಗ ಆಂಬುಲೆನ್ಸ್​ನಲ್ಲಿ ಆಕ್ಸಿಜನ್ ಕೊರತೆಯುಂಟಾಗಿದ್ದು, ಆ ನವಜಾತ ಶಿಶು ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ಈ ಘಟನೆ ನಡೆದಿದೆ. ಶೃಂಗಾರಬಾಬು ತಾಂಡಾದ ಹಾಲೇಶ್-ಸ್ವಾತಿ ದಂಪತಿಯ ಮೊದಲ ಮಗು ಆಂಬುಲೆನ್ಸ್​ನಲ್ಲಿಆಕ್ಸಿಜನ್ ಕೊರತೆಯಿಂದಾಗಿ ಕೊನೆಯುಸಿರೆಳೆದಿದೆ.

ನಿನ್ನೆ ತಡರಾತ್ರಿ 2 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಗರ್ಭಿಣಿ ಸ್ವಾತಿಯನ್ನು ಬಸವಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಬಂಧಿಕರು ದಾಖಲಿಸಿದರು. ಇಂದು ಬೆಳಗ್ಗೆ 7 ಗಂಟೆಗೆ ಹೆರಿಗೆಯಾಗಿದ್ದು, ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಹೊನ್ನಾಳಿಗೆ ಕರೆದೊಯ್ಯಲು ಪೋಷಕರು ಮುಂದಾದರು. ಆದರೆ ಅಂಬುಲೆನ್ಸ್ ‌ನಲ್ಲಿ ಅಕ್ಸಿಜನ್ ಇಲ್ಲ, ಬೇರೊಂದು ಅಂಬುಲೆನ್ಸ್ ದಾರಿ ಮಧ್ಯೆ ಬರುತ್ತದೆ ಎಂದು ಚಾಲಕ‌ ಕರೆದೊಯ್ದಿದ್ದಾನೆ. ಆದರೆ ಹೊನ್ನಾಳಿಗೆ ಹೋಗುವುದರೊಳಗೆ ಉಸಿರಾಟದ ತೊಂದರೆ ಬಿಗಡಾಯಿಸಿ, ಮಗು ಸಾವನ್ನಪ್ಪಿದೆ. ಇದರಿಂದ ರೊಚ್ಚಿಗೆದ್ದ ಪೋಷಕರು ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ಮಾಡಿದರು. ಸ್ಥಳಕ್ಕೆ ಬಸವಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಇದೂ ಓದಿ: ಕಿರುತೆರೆ ಪ್ರೇಕ್ಷಕರ ಮನ ಗೆದ್ದ ಪುಟಾಣಿ ವಂಶಿಕಾ

ಇದೂ ಓದಿ: Wheeling menace: ಬೆಂಗಳೂರಿನ ಗೋರಿಪಾಳ್ಯದಲ್ಲಿ ವೀಲಿಂಗ್ ಶೋಕಿ; ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ಗುದ್ದಿದ ಪುಂಡರು

Published On - 4:30 pm, Sat, 9 April 22

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ