AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರೇಕೋಡಿಯಲ್ಲಿ ನೆರವೇರಿದ ಜೈನಮುನಿ ಮಹಾರಾಜರ ಅಂತ್ಯಸಂಸ್ಕಾರ, ಹತ್ಯೆ ಖಂಡಿಸಿ ನಾಳೆ ಮೌನ ಪ್ರತಿಭಟನೆ

ಹತ್ಯೆಯಾದ ಜೈನ ಮುನಿ ಕಾಮಕುಮಾರನಂದಿ ಮಹಾರಾಜರ ಅಂತ್ಯಸಂಸ್ಕಾರ ಇಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಬಳಿ ನೆರವೇರಿತು.

ಹಿರೇಕೋಡಿಯಲ್ಲಿ ನೆರವೇರಿದ ಜೈನಮುನಿ ಮಹಾರಾಜರ ಅಂತ್ಯಸಂಸ್ಕಾರ, ಹತ್ಯೆ ಖಂಡಿಸಿ ನಾಳೆ ಮೌನ ಪ್ರತಿಭಟನೆ
ಹಿರೇಕೋಡಿ ಬಳಿ ಇರುವ ನಂದಿಪರ್ವತ ಆಶ್ರಮದ ಪಕ್ಕದ ಜಮೀನಿನಲ್ಲಿ ನೆರವೇರಿದ ಜೈನ ಮುನಿ ಕಾಮಕುಮಾರನಂದಿ ಮಹಾರಾಜರ ಅಂತ್ಯಸಂಸ್ಕಾರ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: Rakesh Nayak Manchi|

Updated on:Jul 09, 2023 | 3:11 PM

Share

ಚಿಕ್ಕೋಡಿ: ಹತ್ಯೆಯಾದ ಜೈನ ಮುನಿ ಕಾಮಕುಮಾರನಂದಿ ಮಹಾರಾಜರ (Kamakumaranandi Maharaj) ಅಂತ್ಯಸಂಸ್ಕಾರ ಇಂದು ಭಕ್ತರ ಕಂಬನಿಯ ನಡುವೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ತಾಲೂಕಿನ ಹಿರೇಕೋಡಿ ಬಳಿ ಇರುವ ನಂದಿಪರ್ವತ ಆಶ್ರಮದ ಪಕ್ಕದ ಜಮೀನಿನಲ್ಲಿ ನೆರವೇರಿತು. ಜೈನಮುನಿಗಳ ಚಿತೆಗೆ ಕಾಮಕುಮಾರನಂದಿ ಮಹಾರಾಜರ ಪೂರ್ವಾಶ್ರಮದ ಅಣ್ಣನ ಮಗ ಭೀಮಗೊಂಡ ಉಗಾರೆ ಅವರು ಅಗ್ನಿಸ್ಪರ್ಶ ಮಾಡಿದರು. ಕಾಮಕುಮಾರನಂದಿ ಮಹಾರಾಜರ ಚಿತೆಗೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆ ಕೆಲ ಕ್ಷಣಗಳ ಕಾಲ ಜಿಟಿಜಿಟಿ ಮಳೆಯಾಗಿದೆ.

ನಾಳೆ ಬೆಳಗ್ಗೆ 8 ಗಂಟೆಗೆ ರಕ್ಷಾ ವಿಸರ್ಜನಕ್ಕೆ ಬರುವಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಹತ್ಯೆ ಖಂಡಿಸಿ ನಾಳೆ 10 ಗಂಟೆಗೆ ಚಿಕ್ಕೋಡಿಯ ಆರ್​ಡಿ ಕಾಲೇಜಿನಿಂದ ಮೌನ ಪ್ರತಿಭಟನಾ ಮೆರವಣಿಕೆ ಹಮ್ಮಿಕೊಳ್ಳಲಾಗಿದ್ದು, ಭಕ್ತರು ಆಗಮಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ: 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಪತ್ತೆ

ಅಂತ್ಯಕ್ರಿಯೆ ಬಳಿಕ ಮಾಹಿತಿ ನೀಡಿದ ನಾಂದಣಿ ಮಠದ ಜಿನಸೇನ ಭಟ್ಟಾಚಾರ್ಯ ಸ್ವಾಮೀಜಿ, ಜಿನಶಾಸನದ ಅದ್ಭುತ ಸೂರ್ಯ ಅಸ್ತವಾಗಿದೆ. ನಾಳೆ ಬಳಗ್ಗೆ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಮ್ಮ ಧ್ವನಿ ಸರ್ಕಾರಕ್ಕೆ ಮುಟ್ಟಬೇಕು. ಜೈನ ಸಮಾಜ ಅಹಿಂಸಪ್ರಿಯ ಸಮಾಜ. ಮಹಾರಾಜರ ಮೇಲೆ ಆದ ಆಘಾತ ಮತ್ತೆ ಯಾರ ಮೇಲೂ ಆಗಬಾರದು. ಆರ್‌ಡಿ ಹೈಸ್ಕೂಲ್​ನಿಂದ ಮೌನಪ್ರತಿಭಟನೆ ಮೆರವಣಿಗೆ ಬಳಿಕ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಮಾಡಲಿದ್ದೇವೆ. ಸರ್ಕಾರ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವ ಬಗ್ಗೆ ವಿಶ್ವಾಸವಿದೆ ಎಂದರು.

ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ‌‌

ಜೈನ ಮುನಿ ಹತ್ಯೆ ಖಂಡಿಸಿ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಹಲಗಾ ಗ್ರಾಮದ ಸಿದ್ದಸೇನ ಮಹಾರಾಜರ ನೇತೃತ್ವದಲ್ಲಿ ಪ್ರತಿಭಟನೆ‌‌ ನಡೆಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆ ಬಂದ್ ಮಾಡಿ ಆಕ್ರೋಶ ಹೊರಹಾಕಲಾಗಿದೆ. ಪ್ರತಿಭಟನೆಯಲ್ಲಿ ಸಾವಿರಾರು ಜನರು, ಜೈನ ಸಮುದಾಯದ ಮುಖಂಡರು ಭಾಗಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ಶಾಸಕ ಅಭಯ್ ಪಾಟೀಲ್, ಮಾಜಿ ಶಾಸಕ ಸಂಜಯ್ ಪಾಟೀಲ್ ಇದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sun, 9 July 23

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!