AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರೇಕೋಡಿಯಲ್ಲಿ ನೆರವೇರಿದ ಜೈನಮುನಿ ಮಹಾರಾಜರ ಅಂತ್ಯಸಂಸ್ಕಾರ, ಹತ್ಯೆ ಖಂಡಿಸಿ ನಾಳೆ ಮೌನ ಪ್ರತಿಭಟನೆ

ಹತ್ಯೆಯಾದ ಜೈನ ಮುನಿ ಕಾಮಕುಮಾರನಂದಿ ಮಹಾರಾಜರ ಅಂತ್ಯಸಂಸ್ಕಾರ ಇಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಬಳಿ ನೆರವೇರಿತು.

ಹಿರೇಕೋಡಿಯಲ್ಲಿ ನೆರವೇರಿದ ಜೈನಮುನಿ ಮಹಾರಾಜರ ಅಂತ್ಯಸಂಸ್ಕಾರ, ಹತ್ಯೆ ಖಂಡಿಸಿ ನಾಳೆ ಮೌನ ಪ್ರತಿಭಟನೆ
ಹಿರೇಕೋಡಿ ಬಳಿ ಇರುವ ನಂದಿಪರ್ವತ ಆಶ್ರಮದ ಪಕ್ಕದ ಜಮೀನಿನಲ್ಲಿ ನೆರವೇರಿದ ಜೈನ ಮುನಿ ಕಾಮಕುಮಾರನಂದಿ ಮಹಾರಾಜರ ಅಂತ್ಯಸಂಸ್ಕಾರ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on:Jul 09, 2023 | 3:11 PM

Share

ಚಿಕ್ಕೋಡಿ: ಹತ್ಯೆಯಾದ ಜೈನ ಮುನಿ ಕಾಮಕುಮಾರನಂದಿ ಮಹಾರಾಜರ (Kamakumaranandi Maharaj) ಅಂತ್ಯಸಂಸ್ಕಾರ ಇಂದು ಭಕ್ತರ ಕಂಬನಿಯ ನಡುವೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ತಾಲೂಕಿನ ಹಿರೇಕೋಡಿ ಬಳಿ ಇರುವ ನಂದಿಪರ್ವತ ಆಶ್ರಮದ ಪಕ್ಕದ ಜಮೀನಿನಲ್ಲಿ ನೆರವೇರಿತು. ಜೈನಮುನಿಗಳ ಚಿತೆಗೆ ಕಾಮಕುಮಾರನಂದಿ ಮಹಾರಾಜರ ಪೂರ್ವಾಶ್ರಮದ ಅಣ್ಣನ ಮಗ ಭೀಮಗೊಂಡ ಉಗಾರೆ ಅವರು ಅಗ್ನಿಸ್ಪರ್ಶ ಮಾಡಿದರು. ಕಾಮಕುಮಾರನಂದಿ ಮಹಾರಾಜರ ಚಿತೆಗೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆ ಕೆಲ ಕ್ಷಣಗಳ ಕಾಲ ಜಿಟಿಜಿಟಿ ಮಳೆಯಾಗಿದೆ.

ನಾಳೆ ಬೆಳಗ್ಗೆ 8 ಗಂಟೆಗೆ ರಕ್ಷಾ ವಿಸರ್ಜನಕ್ಕೆ ಬರುವಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಹತ್ಯೆ ಖಂಡಿಸಿ ನಾಳೆ 10 ಗಂಟೆಗೆ ಚಿಕ್ಕೋಡಿಯ ಆರ್​ಡಿ ಕಾಲೇಜಿನಿಂದ ಮೌನ ಪ್ರತಿಭಟನಾ ಮೆರವಣಿಕೆ ಹಮ್ಮಿಕೊಳ್ಳಲಾಗಿದ್ದು, ಭಕ್ತರು ಆಗಮಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ: 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಪತ್ತೆ

ಅಂತ್ಯಕ್ರಿಯೆ ಬಳಿಕ ಮಾಹಿತಿ ನೀಡಿದ ನಾಂದಣಿ ಮಠದ ಜಿನಸೇನ ಭಟ್ಟಾಚಾರ್ಯ ಸ್ವಾಮೀಜಿ, ಜಿನಶಾಸನದ ಅದ್ಭುತ ಸೂರ್ಯ ಅಸ್ತವಾಗಿದೆ. ನಾಳೆ ಬಳಗ್ಗೆ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಮ್ಮ ಧ್ವನಿ ಸರ್ಕಾರಕ್ಕೆ ಮುಟ್ಟಬೇಕು. ಜೈನ ಸಮಾಜ ಅಹಿಂಸಪ್ರಿಯ ಸಮಾಜ. ಮಹಾರಾಜರ ಮೇಲೆ ಆದ ಆಘಾತ ಮತ್ತೆ ಯಾರ ಮೇಲೂ ಆಗಬಾರದು. ಆರ್‌ಡಿ ಹೈಸ್ಕೂಲ್​ನಿಂದ ಮೌನಪ್ರತಿಭಟನೆ ಮೆರವಣಿಗೆ ಬಳಿಕ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಮಾಡಲಿದ್ದೇವೆ. ಸರ್ಕಾರ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವ ಬಗ್ಗೆ ವಿಶ್ವಾಸವಿದೆ ಎಂದರು.

ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ‌‌

ಜೈನ ಮುನಿ ಹತ್ಯೆ ಖಂಡಿಸಿ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಹಲಗಾ ಗ್ರಾಮದ ಸಿದ್ದಸೇನ ಮಹಾರಾಜರ ನೇತೃತ್ವದಲ್ಲಿ ಪ್ರತಿಭಟನೆ‌‌ ನಡೆಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆ ಬಂದ್ ಮಾಡಿ ಆಕ್ರೋಶ ಹೊರಹಾಕಲಾಗಿದೆ. ಪ್ರತಿಭಟನೆಯಲ್ಲಿ ಸಾವಿರಾರು ಜನರು, ಜೈನ ಸಮುದಾಯದ ಮುಖಂಡರು ಭಾಗಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ಶಾಸಕ ಅಭಯ್ ಪಾಟೀಲ್, ಮಾಜಿ ಶಾಸಕ ಸಂಜಯ್ ಪಾಟೀಲ್ ಇದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sun, 9 July 23

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?