AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರೇಕೋಡಿಯಲ್ಲಿ ನೆರವೇರಿದ ಜೈನಮುನಿ ಮಹಾರಾಜರ ಅಂತ್ಯಸಂಸ್ಕಾರ, ಹತ್ಯೆ ಖಂಡಿಸಿ ನಾಳೆ ಮೌನ ಪ್ರತಿಭಟನೆ

ಹತ್ಯೆಯಾದ ಜೈನ ಮುನಿ ಕಾಮಕುಮಾರನಂದಿ ಮಹಾರಾಜರ ಅಂತ್ಯಸಂಸ್ಕಾರ ಇಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಬಳಿ ನೆರವೇರಿತು.

ಹಿರೇಕೋಡಿಯಲ್ಲಿ ನೆರವೇರಿದ ಜೈನಮುನಿ ಮಹಾರಾಜರ ಅಂತ್ಯಸಂಸ್ಕಾರ, ಹತ್ಯೆ ಖಂಡಿಸಿ ನಾಳೆ ಮೌನ ಪ್ರತಿಭಟನೆ
ಹಿರೇಕೋಡಿ ಬಳಿ ಇರುವ ನಂದಿಪರ್ವತ ಆಶ್ರಮದ ಪಕ್ಕದ ಜಮೀನಿನಲ್ಲಿ ನೆರವೇರಿದ ಜೈನ ಮುನಿ ಕಾಮಕುಮಾರನಂದಿ ಮಹಾರಾಜರ ಅಂತ್ಯಸಂಸ್ಕಾರ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: Rakesh Nayak Manchi|

Updated on:Jul 09, 2023 | 3:11 PM

Share

ಚಿಕ್ಕೋಡಿ: ಹತ್ಯೆಯಾದ ಜೈನ ಮುನಿ ಕಾಮಕುಮಾರನಂದಿ ಮಹಾರಾಜರ (Kamakumaranandi Maharaj) ಅಂತ್ಯಸಂಸ್ಕಾರ ಇಂದು ಭಕ್ತರ ಕಂಬನಿಯ ನಡುವೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ತಾಲೂಕಿನ ಹಿರೇಕೋಡಿ ಬಳಿ ಇರುವ ನಂದಿಪರ್ವತ ಆಶ್ರಮದ ಪಕ್ಕದ ಜಮೀನಿನಲ್ಲಿ ನೆರವೇರಿತು. ಜೈನಮುನಿಗಳ ಚಿತೆಗೆ ಕಾಮಕುಮಾರನಂದಿ ಮಹಾರಾಜರ ಪೂರ್ವಾಶ್ರಮದ ಅಣ್ಣನ ಮಗ ಭೀಮಗೊಂಡ ಉಗಾರೆ ಅವರು ಅಗ್ನಿಸ್ಪರ್ಶ ಮಾಡಿದರು. ಕಾಮಕುಮಾರನಂದಿ ಮಹಾರಾಜರ ಚಿತೆಗೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆ ಕೆಲ ಕ್ಷಣಗಳ ಕಾಲ ಜಿಟಿಜಿಟಿ ಮಳೆಯಾಗಿದೆ.

ನಾಳೆ ಬೆಳಗ್ಗೆ 8 ಗಂಟೆಗೆ ರಕ್ಷಾ ವಿಸರ್ಜನಕ್ಕೆ ಬರುವಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಹತ್ಯೆ ಖಂಡಿಸಿ ನಾಳೆ 10 ಗಂಟೆಗೆ ಚಿಕ್ಕೋಡಿಯ ಆರ್​ಡಿ ಕಾಲೇಜಿನಿಂದ ಮೌನ ಪ್ರತಿಭಟನಾ ಮೆರವಣಿಕೆ ಹಮ್ಮಿಕೊಳ್ಳಲಾಗಿದ್ದು, ಭಕ್ತರು ಆಗಮಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ: 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಪತ್ತೆ

ಅಂತ್ಯಕ್ರಿಯೆ ಬಳಿಕ ಮಾಹಿತಿ ನೀಡಿದ ನಾಂದಣಿ ಮಠದ ಜಿನಸೇನ ಭಟ್ಟಾಚಾರ್ಯ ಸ್ವಾಮೀಜಿ, ಜಿನಶಾಸನದ ಅದ್ಭುತ ಸೂರ್ಯ ಅಸ್ತವಾಗಿದೆ. ನಾಳೆ ಬಳಗ್ಗೆ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಮ್ಮ ಧ್ವನಿ ಸರ್ಕಾರಕ್ಕೆ ಮುಟ್ಟಬೇಕು. ಜೈನ ಸಮಾಜ ಅಹಿಂಸಪ್ರಿಯ ಸಮಾಜ. ಮಹಾರಾಜರ ಮೇಲೆ ಆದ ಆಘಾತ ಮತ್ತೆ ಯಾರ ಮೇಲೂ ಆಗಬಾರದು. ಆರ್‌ಡಿ ಹೈಸ್ಕೂಲ್​ನಿಂದ ಮೌನಪ್ರತಿಭಟನೆ ಮೆರವಣಿಗೆ ಬಳಿಕ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಮಾಡಲಿದ್ದೇವೆ. ಸರ್ಕಾರ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವ ಬಗ್ಗೆ ವಿಶ್ವಾಸವಿದೆ ಎಂದರು.

ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ‌‌

ಜೈನ ಮುನಿ ಹತ್ಯೆ ಖಂಡಿಸಿ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಹಲಗಾ ಗ್ರಾಮದ ಸಿದ್ದಸೇನ ಮಹಾರಾಜರ ನೇತೃತ್ವದಲ್ಲಿ ಪ್ರತಿಭಟನೆ‌‌ ನಡೆಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆ ಬಂದ್ ಮಾಡಿ ಆಕ್ರೋಶ ಹೊರಹಾಕಲಾಗಿದೆ. ಪ್ರತಿಭಟನೆಯಲ್ಲಿ ಸಾವಿರಾರು ಜನರು, ಜೈನ ಸಮುದಾಯದ ಮುಖಂಡರು ಭಾಗಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ಶಾಸಕ ಅಭಯ್ ಪಾಟೀಲ್, ಮಾಜಿ ಶಾಸಕ ಸಂಜಯ್ ಪಾಟೀಲ್ ಇದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sun, 9 July 23

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​