AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈನಮುನಿ ಹತ್ಯೆ ಪ್ರಕರಣ; ಆರೋಪಿಗಳನ್ನು ಜುಲೈ 17ರ ವರೆಗೆ ಪೊಲೀಸ್ ವಶಕ್ಕೊಪ್ಪಿಸಿದ ನ್ಯಾಯಾಲಯ

ಜೈನಮುನಿ ಶವದ ಜತೆ ಡೈರಿ ತೆಗೆದುಕೊಂಡು ಹೋಗಿದ್ದ ಆರೋಪಿಗಳು, ಕಟಕಬಾವಿ ಬಳಿಯ ಕಬ್ಬಿನ ಗದ್ದೆ ತಂದಿದ್ದರು. ಬಳಿಕ ಮೃತದೇಹವನ್ನು ತುಂಡು ಮಾಡಿ ಕೊಳವೆಬಾವಿಗೆ ಹಾಕಿದ್ದರು. ನಂತರ ರಕ್ತಸಿಕ್ತ ಬಟ್ಟೆಗಳು, ಡೈರಿಯನ್ನು ಸುಟ್ಟು ಹಾಕಿದ್ದರು ಎಂದು ತಿಳಿದುಬಂದಿದೆ.

ಜೈನಮುನಿ ಹತ್ಯೆ ಪ್ರಕರಣ; ಆರೋಪಿಗಳನ್ನು ಜುಲೈ 17ರ ವರೆಗೆ ಪೊಲೀಸ್ ವಶಕ್ಕೊಪ್ಪಿಸಿದ ನ್ಯಾಯಾಲಯ
ಜೈನಮುನಿ ಕಾಮಕುಮಾರನಂದಿ ಮಹಾರಾಜ
TV9 Web
| Edited By: |

Updated on:Jul 11, 2023 | 2:59 PM

Share

ಚಿಕ್ಕೋಡಿ: ಜೈನಮುನಿ ಕಾಮಕುಮಾರನಂದಿ ಮಹಾರಾಜರ (Acharya Shri 108 Kamkumarnandi Maharaj) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ (Chikkodi Additional Sessions Court) ಮಂಗಳವಾರ​ ಆದೇಶ ನೀಡಿದೆ. ಒಂದನೇ ಆರೋಪಿ ನಾರಾಯಣ ಮಾಳಿ, ಎರಡನೇ ಆರೋಪಿ ಹಸನ್ ​​ಸಾಬ್ ಅನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಲಾಗಿದೆ.

ಜೈನಮುನಿಗಳ ಡೈರಿ ರಹಸ್ಯ ಬಯಲಿಗೆಳೆಯುತ್ತಾರಾ ಪೊಲೀಸರು?

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣದ ಅರೋಪಿಗಳನ್ನು ಚಿಕ್ಕೋಡಿ ಠಾಣೆ ಪೊಲೀಸರು ರಹಸ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ್ ಪಾಟೀಲ್​, ಡಿವೈಎಸ್​ಪಿ ಬಸವರಾಜ ಯಲಿಗಾರ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಜೈನಮುನಿಗಳ ಡೈರಿಯನ್ನು ಆರೋಪಿಗಳು ಸುಟ್ಟು ಹಾಕಿದ್ದಾಗಿ ಪ್ರಾಥಮಿಕ ತನಿಖೆ ವೇಳೆ ಮಾಹಿತಿ ದೊರೆತಿದೆ. ಈ ಕುರಿತು ವಿಚಾರಣೆ ವೇಳೆ ಆರೋಪಿಗಳೇ ಪೊಲೀಸರ ಬಳಿ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಮುನಿಯನ್ನು ಕೊಲೆಗೈದು ಶವವನ್ನು ಗೋಣಿಚೀಲದಲ್ಲಿ ಕಟ್ಟಿ ಬೈಕ್​ನಲ್ಲಿ ಸಾಗಿಸಲಾಗಿತ್ತು. ಜೈನಮುನಿ ಶವದ ಜತೆ ಡೈರಿ ತೆಗೆದುಕೊಂಡು ಹೋಗಿದ್ದ ಆರೋಪಿಗಳು, ಕಟಕಬಾವಿ ಬಳಿಯ ಕಬ್ಬಿನ ಗದ್ದೆ ತಂದಿದ್ದರು. ಬಳಿಕ ಮೃತದೇಹವನ್ನು ತುಂಡು ಮಾಡಿ ಕೊಳವೆಬಾವಿಗೆ ಹಾಕಿದ್ದರು. ನಂತರ ರಕ್ತಸಿಕ್ತ ಬಟ್ಟೆಗಳು, ಡೈರಿಯನ್ನು ಸುಟ್ಟು ಹಾಕಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: Jain Muni Murder: ಜೈನಮುನಿಗಳ ದೇಹ ತುಂಡು ತುಂಡಾಗಿ ಕತ್ತರಿಸಿ ಡೈರಿ ಸುಟ್ಟು ಹಾಕಿದ್ರು, ಎಫ್​ಐಆರ್​ನಲ್ಲಿ ದಾಖಲಾಗಿದೆ ಭಯಾನಕ ಸಂಗತಿ

ಪ್ರಕರಣ ಸಂಬಂಧ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿರುವ ಪೊಲೀಸರು, ಸಂಪೂರ್ಣ ಮಾಹಿತಿ ಕಲೆಹಾಕುತ್ತಿದ್ದಾರೆ. ಜುಲೈ 5ರಂದು ರಾತ್ರಿ ಜೈನಮುನಿಯನ್ನು ಹತ್ಯೆ ಮಾಡಲಾಗಿತ್ತು.

ಆಶ್ರಮಕ್ಕೆ ಬಿಜೆಪಿ ನಳಿನ್ ಕುಮಾರ್ ಕಟೀಲ್ ತಂಡ ಭೇಟಿ

ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತದಲ್ಲಿರುವ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಆಶ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ ಮಂಗಳವಾರ ಭೇಟಿ ನೀಡಿದೆ. ಪ್ರಕರಣದ ಸತ್ಯಾಸತ್ಯತೆ ಅರಿಯಲು ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ನಳಿನ್ ಕುಮಾರ್ ಅವರು ಆಶ್ರಮದಲ್ಲಿ ಮಾಹಿತಿ ಪಡೆದಿದ್ದಾರೆ. ಜೈನಮುನಿಗಳ ಸಹಾಯಕಿ ಕುಸುಮಾ ಬಳಿ ಮಾಹಿತಿ ಸಂಗ್ರಹಿದ್ದಾರೆ. ಇದೇ ವೇಳೆ, ಜೈನಮುನಿಗಳನ್ನು ನೆನೆದು ಕುಸುಮಾ ಕಣ್ಣೀರು ಹಾಕಿದ್ದಾರೆ.

ಜೈನಮುನಿಗಳ ಪೂರ್ವಾಶ್ರಮದ ಸಂಬಂಧಿಕರ ಜತೆಗೂ ಬಿಜೆಪಿಯ ತಂಡ ಚರ್ಚೆ ನಡೆಸಿದೆ. ಶಾಸಕರಾದ ಮಹೇಶ್ ಟೆಂಗಿನಕಾಯಿ, ಅಭಯ್ ಪಾಟೀಲ್ ನಳಿನ್ ಜತೆಗೆ ಇದ್ದರು.

– ಸದಾಶಿವ ಜಾಧವ್‌- ಚಿಕ್ಕೋಡಿ

ರಾಜ್ಯದ ಇನ್ನಷ್ಟುಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Tue, 11 July 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ